Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಭಾರತದ ಬಹುಭಾಷಿಕ ಪರಿಸರದ ಮೇಲೆ ಬೆಳಕು...

ಭಾರತದ ಬಹುಭಾಷಿಕ ಪರಿಸರದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ

ಈ ಹೊತ್ತಿನ ಹೊತ್ತಿಗೆ

ವಾರ್ತಾಭಾರತಿವಾರ್ತಾಭಾರತಿ12 Dec 2017 12:10 AM IST
share
ಭಾರತದ ಬಹುಭಾಷಿಕ ಪರಿಸರದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ

ಬಹುಭಾಷೆ ಭಾರತದ ಹೆಗ್ಗಳಿಕೆಯಾಗಿದೆ. ಒಂದು ಭಾಷೆಯ ಹಿಂದೆ ಒಂದು ಜನಜೀವನವಿದೆ. ಇಂತಹ ನೂರಾರು ವೈವಿಧ್ಯಮಯ ಸಂಸ್ಕೃತಿಯ ಮೂಲಕ ರೂಪುಗೊಂಡ ನೂರಾರು ಭಾಷೆಗಳಲ್ಲಿ ನಮ್ಮ ಭಾರತೀಯತೆ ಬೆಸೆದುಕೊಂಡಿದೆ. ಇತ್ತೀಚೆಗೆ ದೇಶವನ್ನು ಒಂದು ಭಾಷೆಯ ಮೂಲಕ ಜೋಡಿಸುವ ಕೆಟ್ಟ ಪ್ರಯತ್ನ ನಡೆಯುತ್ತಿರುವುದನ್ನು, ಪ್ರಾದೇಶಿಕ ಭಾಷೆಗಳು ಇದರ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುತ್ತಿರುವುದನ್ನು ನೋಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಡಾ. ಎಸ್. ಸಿರಾಜ್ ಅಹಮದ್ ಅವರ ಸಂಪಾದಕತ್ವದಲ್ಲಿ ‘ಭಾರತದ ಬಹು ಭಾಷಿಕ ಪರಿಸರ ಮತ್ತು ಅನುವಾದ’ ಕೃತಿಯನ್ನು ಹೊರತಂದಿದೆ. ಅನುವಾದ ಹೇಗೆ ಬಹುಭಾಷೆಯನ್ನು ಜೋಡಿಸುವ ಕೊಂಡಿಯಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎನ್ನುವ ಹಿನ್ನೆೆಯಲ್ಲಿ ರೂಪುಗೊಂಡ ಕೃತಿ ಇದಾಗಿದೆ.

ಬಹುಭಾಷಿಕ ಪರಿಸರದಲ್ಲಿ ಅನುವಾದವೆಂಬುದು ಔಪಚಾರಿಕ ಮತ್ತು ಅನೌಪಚಾರಿಕ ನೆಲೆಗಳಲ್ಲಿ ಕಾರ್ಯಪ್ರವೃತ್ತವಾಗಿರುವ ಪ್ರಕ್ರಿಯೆಯಾಗಿದೆ. ಅನುವಾದವೆಂಬುದು ಬಹುಭಾಷಿಕ ಪರಿಸರದಲ್ಲಿ ನಿರ್ವಹಿಸುತ್ತಿರುವ ಹೊಣೆಗಳು ಮತ್ತು ನಿರ್ವಹಿಸಬಹುದಾದ ಹೊಣೆಗಳನ್ನು ಈ ಕೃತಿ ಚರ್ಚಿಸುತ್ತದೆ. ಪ್ರಾಧಿಕಾರ ಹಮ್ಮಿಕೊಂಡ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ವಿವಿಧ ಚಿಂತಕರು ಮಂಡಿಸಿದ ಪ್ರಬಂಧವನ್ನು ಇಲ್ಲಿ ಒಟ್ಟು ಸೇರಿಸಲಾಗಿದೆ. ಅನುವಾದಗಳನ್ನು ಮಾಡುವುದಲ್ಲದೆ, ಅನುವಾದಕ್ಕೆ ಹಿನ್ನೆಲೆಯಾಗಿರುವ ಸಾಂಸ್ಕೃತಿಕ ಸಂದರ್ಭ, ಚಿಂತನೆಗಳನ್ನು ವಿವರವಾಗಿ ಇಲ್ಲಿ ವಿಶ್ಲೇಷಿಸಲಾಗಿದೆ. ಶಿಕ್ಷಣದಲ್ಲಿ ಭಾಷಾ ಆದ್ಯತೆಗಳು, ವಿಜ್ಞಾನದ ಯಾಜಮಾನ್ಯ ಭಾಷೆಯ ಮೇಲೆ ಬೀರಿದ ಪರಿಣಾಮ, ಸಾಹಿತ್ಯಕ ಭಾಷಾಂತರದ ರಾಜಕಾರಣ, ಬಹುಭಾಷಿಕತೆಗೆ, ಬಹುಸಂಸ್ಕೃತಿಗೆ ದಖನಿ ಭಾಷೆಯ ಕೊಡುಗೆ, ರಾಷ್ಟ್ರೀಯತೆ ಹಾಗೂ ಸಂಸ್ಕೃತಿಗಳ ಮರು ನಿರೂಪಣೆ ಹೀಗೆ ಬೇರೆ ಬೇರೆ ನೆಲೆಗಳಲ್ಲಿ ಬಹುಭಾಷಿಕ ಸನ್ನಿವೇಶಗಳನ್ನು ಇಲ್ಲಿ ಬೇರೆ ಬೇರೆ ಲೇಖಕರು ಚರ್ಚಿಸಿದ್ದಾರೆ. ರಾಷ್ಟ್ರಮಟ್ಟದ 14 ಲೇಖಕರು ಇಲ್ಲಿ ತಮ್ಮ ಪ್ರಬಂಧವನ್ನು ಮಂಡಿಸಿದ್ದು, ಬೇರೆ ಬೇರೆ ಭಾಷೆಗಳು ಬಹುಸಂಸ್ಕೃತಿಗೆ ನೀಡಿರುವ ಕೊಡುಗೆಗಳನ್ನು ಚರ್ಚಿಸಿದ್ದಾರೆ. ಭಾರತದ ಮಟ್ಟಿಗೆ ಅನುವಾದವೆನ್ನುವುದು ಎಷ್ಟು ಗಂಭೀರವಾದ ವಿಷಯ ಎನ್ನುವುದನ್ನು ಈ ಕೃತಿಯಿಂದ ನಮ್ಮದಾಗಿಸಿಕೊಳ್ಳಬಹುದು. 276 ಪುಟಗಳ ಈ ಕೃತಿಯ ಮುಖಬೆಲೆ 150 ರೂಪಾಯಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X