Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮುದ್ರ ವಿಮಾನದಲ್ಲಿ ಪ್ರಯಾಣಿಸಿದ ಮೊದಲಿಗ...

ಸಮುದ್ರ ವಿಮಾನದಲ್ಲಿ ಪ್ರಯಾಣಿಸಿದ ಮೊದಲಿಗ ಪ್ರಧಾನಿ ಮೋದಿಯೇ?: ಇಲ್ಲಿದೆ ವಾಸ್ತವಾಂಶ

ವಾರ್ತಾಭಾರತಿವಾರ್ತಾಭಾರತಿ13 Dec 2017 3:54 PM IST
share
ಸಮುದ್ರ ವಿಮಾನದಲ್ಲಿ ಪ್ರಯಾಣಿಸಿದ ಮೊದಲಿಗ ಪ್ರಧಾನಿ ಮೋದಿಯೇ?: ಇಲ್ಲಿದೆ ವಾಸ್ತವಾಂಶ

ಹೊಸದಿಲ್ಲಿ, ಡಿ.13: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಹ್ಮದಾಬಾದ್ ನಗರದ ಸಾಬರಮತಿ ನದಿಯಿಂದ ಮೆಹಸಾನದ ಧರೋಯಿ ಡ್ಯಾಮ್ ತನಕ ಸೀಪ್ಲೇನ್ ನಲ್ಲಿ ಸಂಚರಿಸಿರುವುದು ಭಾರೀ ಸುದ್ದಿಯಾಗಿದೆ. ಪ್ರಧಾನಿಯ ಅಧಿಕೃತ ವೆಬ್ ಸೈಟ್ ನಲ್ಲಿ ‘‘ಭಾರತದ ಪ್ರಥಮ ಸೀಪ್ಲೇನ್ ನಲ್ಲಿ ಪ್ರಧಾನಿ ಮೋದಿ ಪ್ರಪ್ರಥಮ ಪ್ರಯಾಣಿಕ’’ ಎಂಬ ಶೀರ್ಷಿಕೆಯ ಸುದ್ದಿಯೂ ಪ್ರಕಟವಾಗಿತ್ತು. ಬಿಜೆಪಿಯ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಹಾಗೂ ಹಲವು ಬಿಜೆಪಿ ನಾಯಕರೂ ಹೀಗೆಯೇ ಹೇಳಿಕೊಂಡರು. ಮಾಧ್ಯಮಗಳೂ ಅಂತೆಯೇ ಹೇಳಿಕೊಂಡವು. ಆದರೆ ಈ ಶೀರ್ಷಿಕೆಯನ್ನು ನಂತರ ಬದಲಾಯಿಸಲಾಯಿತು.

ಆಲ್ಟ್ ನ್ಯೂಸ್ ಈ ವಿಚಾರದ ಬಗ್ಗೆ ಕುತೂಹಲದಿಂದ ಪರಾಮರ್ಶಿಸಿದಾಗ ಭಾರತದ ಪ್ರಪ್ರಥಮ ವಾಣಿಜ್ಯ ಸೀಪ್ಲೇನ್ ಸೇವೆ 2010ರಲ್ಲಿ ಆರಂಭಿಸಲಾಗಿತ್ತೆಂದು ತಿಳಿದು ಬಂದಿತ್ತು. ಆ ವರ್ಷದ ಡಿಸೆಂಬರ್ ನಲ್ಲಿ ಸಾರ್ವಜನಿಕ ರಂಗದ ಹೆಲಿಕಾಪ್ಟರ್ ಸೇವಾ ಪೂರೈಕೆದಾರ ಪವನ್ ಹಂಸ್ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ಆಡಳಿತದ ಜಂಟಿ ಸಹಯೋಗದಲ್ಲಿ ಈ ಸೇವೆ ಆರಂಭಿಸಲಾಗಿತ್ತು. ಆ ಸಮಯ ನಾಗರಿಕ ವಿಮಾನಯಾನ ಖಾತೆ ಸಚಿವರಾಗಿದ್ದ ಪ್ರಫುಲ್ ಪಟೇಲ್ ಕೂಡ ಇದನ್ನು ದೃಢೀಕರಿಸಿದ್ದಾರೆ. ಜಲ್ ಹಂಸ್ ಸೇವೆಯನ್ನು ನಂತರ ಸ್ಥಗಿತಗೊಳಿಸಲಾಗಿತ್ತು.

ಜೂನ್ 2013ರಲ್ಲಿ ಕೇರಳ ಸರಕಾರ ಪ್ರವಾಸೋದ್ಯಮ ಉತ್ತೇಜಿಸುವ ಸಲುವಾಗಿ ಸೀಪ್ಲೇನ್ ಸೇವೆ ಆರಂಭಿಸಿತ್ತು. ಆದರೆ ಸ್ಥಳೀಯ ಮೀನುಗಾರರ ವಿರೋಧದಿಂದಾಗಿ ಅದು ಕೂಡ ಸ್ಥಗಿತಗೊಂಡಿತ್ತು. ಈ ಸಮಯ ಕೇರಳದಲ್ಲಿ ಉಮ್ಮನ್ ಚಾಂಡಿ ಮುಖ್ಯಮಂತ್ರಿಯಾಗಿದ್ದರು. ಅವರು ಈ ಬಗ್ಗೆ ಟ್ವೀಟ್ ಕೂಡ ಮಾಡಿದ್ದರು.

ಖಾಸಗಿ ಸಂಸ್ಥೆಗಳೂ ಸೀಪ್ಲೇನ್ ಸೇವೆಗಳನ್ನು ನೀಡಲು ಮುಂದೆ ಬಂದಿದ್ದವು. 2012ರಲ್ಲಿ ಸೀಬರ್ಡ್ ಸೀಪ್ಲೇನ್ ಪ್ರೈ. ಲಿ. ಎಂಬ ಸಂಸ್ಥೆ ಈ ಸೇವೆಯನ್ನು ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಆರಂಭಿಸಿತ್ತು. ಮೆಹೈರ್ ಎಂಬ ಸಂಸ್ಥೆ 2011ರಲ್ಲಿ ಅಂಡಮಾನ್ ನಿಕೋಬಾರ್ ದ್ವೀಪ ಹಾಗೂ ಮಹಾರಾಷ್ಟ್ರ ಮತ್ತು ಗೋವಾಗಳಲ್ಲಿ ಸೀಪ್ಲೇನ್ ಸೇವೆಯೊದಗಿಸಿತ್ತು. ಆದರೆ ವಿವಿಧ ಕಾರಣಗಳಿಂದ ನಂತರ ಈ ಸೇವೆ ಸ್ಥಗಿತಗೊಳಿಸಲಾಗಿತ್ತು.

ಇತ್ತೀಚೆಗೆ ಡಿಸೆಂಬರ್ 9ರಂದು ಸ್ಪೈಸ್ ಜೆಟ್ ಸೀ ಟ್ರಯಲ್ ಗಳನ್ನು ಮುಂಬೈಯ ಚೌಪಾಟಿಯಲ್ಲಿ ನಡೆಸಿತ್ತು. ಆಗ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಅಶೋಕ್ ಗಜಪತಿರಾಜು ಹಾಜರಿದ್ದರು. ಸ್ಪೈಸ್ ಜೆಟ್ 100 ಎಂಫಿಬಿಯನ್ ವಿಮಾನಗಳನ್ನು ಈ ಉದ್ದೇಶಕ್ಕೆ ಖರೀದಿಸುವ ಯೋಜನೆ ಹೊಂದಿದೆ. ಗಡ್ಕರಿ ಉಪಯೋಗಿಸಿದ ಸೀಪ್ಲೇನ್ ಅನ್ನೇ ಪ್ರಧಾನಿ ಉಪಯೋಗಿಸಿದ್ದರು. ಅದರ ನೋಂದಣಿ ಸಂಖ್ಯೆ ಎನ್181ಕೆಕ್ಯು ಇದನ್ನು ದೃಢೀಕರಿಸುತ್ತದೆ.

ಈ ಸೀಪ್ಲೇನ್ ಮುಂಬೈಗೆ ಪಾಕಿಸ್ತಾನದ ಕರಾಚಿ ಮೂಲಕ ಡಿ.3ರಂದು ಆಗಮಿಸಿತ್ತು. ಕಳೆದ 90 ದಿನಗಳಲ್ಲಿ ಅದು ಗ್ರೀಸ್, ಸೌದಿ ಅರೇಬಿಯಾ ಹಾಗೂ ನ್ಯೂಜಿಲೆಂಡಿಗೆ ಪ್ರಯಾಣಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X