Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕ್ ಅಧಿಕಾರಿಯೊಂದಿಗೆ 20ಕ್ಕೂ ಹೆಚ್ಚು...

ಪಾಕ್ ಅಧಿಕಾರಿಯೊಂದಿಗೆ 20ಕ್ಕೂ ಹೆಚ್ಚು ರಹಸ್ಯ ಸಭೆ ನಡೆಸಿದ್ದರು ಅಡ್ವಾಣಿ!

ವಾರ್ತಾಭಾರತಿವಾರ್ತಾಭಾರತಿ13 Dec 2017 4:40 PM IST
share
ಪಾಕ್ ಅಧಿಕಾರಿಯೊಂದಿಗೆ 20ಕ್ಕೂ ಹೆಚ್ಚು ರಹಸ್ಯ ಸಭೆ ನಡೆಸಿದ್ದರು ಅಡ್ವಾಣಿ!

ಹೊಸದಿಲ್ಲಿ, ಡಿ.13: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಹಿತ ಹಲವು ಕಾಂಗ್ರೆಸ್ ನಾಯಕರು ಮಣಿಶಂಕರ್ ಅಯ್ಯರ್ ಅವರ ನಿವಾಸದಲ್ಲಿ ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆಂದು ಪ್ರಧಾನಿ ಇತ್ತೀಚೆಗೆ ಆರೋಪಿಸಿದ್ದರು. ಆದರೆ ಹದಿನೇಳು ವರ್ಷಗಳ  ಹಿಂದೆ ಅಂದರೆ 2000ರಲ್ಲಿ ಎನ್ ಡಿಎ-1 ಸರಕಾರದ ಅವಧಿಯಲ್ಲಿ ಕೇಂದ್ರ ಗೃಹಸಚಿವರಾಗಿದ್ದ ಎಲ್.ಕೆ. ಅಡ್ವಾಣಿಯವರು ಪಾಕಿಸ್ತಾನದ ಹೈಕಮಿಷನರ್ ಅಶ್ರಫ್ ಜಹಾಂಗೀರ್ ಖಾಝಿ ಅವರ ಜತೆಗೆ 20ಕ್ಕೂ ಅಧಿಕ ರಹಸ್ಯ ಸಭೆಗಳನ್ನು ನಡೆಸಿದ್ದರೆಂದು ಸ್ವತಃ ಅಡ್ವಾಣಿ 2008ರಲ್ಲಿ ಬಿಡುಗಡೆಯಾದ ತಮ್ಮ ಆತ್ಮಕಥನ `ಮೈ ಕಂಟ್ರಿ, ಮೈ ಲೈಫ್' ನಲ್ಲಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಅಡ್ವಾಣಿ 2006ರಲ್ಲಿ ಹಿರಿಯ ಪತ್ರಕರ್ತ ಕರಣ್ ಥಾಪರ್ ಅವರ ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲೂ ಹೇಳಿಕೊಂಡಿದ್ದರು. ಈ ಸಭೆಗಳನ್ನು ಏರ್ಪಾಟು ಮಾಡುವಲ್ಲಿ ಥಾಪರ್ ಅವರು ಸಹಕರಿಸಿದ್ದರೆಂಬುದನ್ನೂ ಅಡ್ವಾಣಿ ಆಗ ತಿಳಿಸಿದ್ದರು. ಆದರೆ ಮಣಿಶಂಕರ್ ಅಯ್ಯರ್ ಪಾಕ್ ಅಧಿಕಾರಿಗಳೊಂದಿಗೆ 'ರಹಸ್ಯ ಸಭೆ'ಗಳನ್ನು ನಡೆಸಿರಲಿಲ್ಲ.

ಆಗಿನ ರಕ್ಷಣಾ ಸಚಿವ ಜಾರ್ಜ್ ಫೆರ್ನಾಂಡಿಸ್ ಅವರು ಪಂಡಾರ ರಸ್ತೆಯಲ್ಲಿದ್ದ ಅಡ್ವಾಣಿ ನಿವಾಸದಲ್ಲಿ ಬೆಳಗ್ಗೆ 10 ಗಂಟೆಗೆ ಮೊದಲ ಸಭೆಗೆ ಏರ್ಪಾಡು ಮಾಡಲು ಸಹಕರಿಸಿದ್ದರು ಎಂದು 2008ರಲ್ಲಿ ಥಾಪರ್ ತಮ್ಮ 'ಹಿಂದೂಸ್ಥಾನ್ ಟೈಮ್ಸ್' ಅಂಕಣದಲ್ಲಿ, ಬರೆದಿದ್ದರು. ಥಾಪರ್ ಅವರೇ ಖಾಝಿಯವರನ್ನು  ಅಡ್ವಾಣಿ ನಿವಾಸಕ್ಕೆ ಕರೆದೊಯ್ದು ಅಡ್ವಾಣಿಯವರನ್ನು ಭೇಟಿಯಾಗುವ ತನಕ ಕಾದಿದ್ದರು. ಈ ಮೊದಲ ಸಭೆ 90 ನಿಮಿಷಗಳ ತನಕ ನಡೆದಿತ್ತು.

"ಮುಂದಿನ ಒಂದು ವರ್ಷದಲ್ಲಿ ಇಂತಹ 20 ಸಭೆಗಳು ನಡೆದಿದ್ದವು. ಹೆಚ್ಚಿನ ಸಭೆಗಳು ರಾತ್ರಿ ಹೊತ್ತು ನಡೆದಿದ್ದವು. ನಾನು ಅವರನ್ನು ಕರೆದುಕೊಂಡು ಬರುವವನಾಗಿದ್ದೆ. ಪಂಡಾರ ರಸ್ತೆಯಲ್ಲಿದ್ದ ಭದ್ರತಾ ಸಿಬ್ಬಂದಿಗೆ ಕೇವಲ ನನ್ನ ಹೆಸರು ನೀಡಲಾಗಿತ್ತು. ಅಡ್ವಾಣಿ ಮತ್ತು ಅಶ್ರಫ್ ಕೊಠಡಿಗೆ ತೆರಳಿ ಮಾತುಕತೆ ನಡೆಸುತ್ತಿದ್ದರು. ನಾನು ಅಡ್ವಾಣಿ ಅವರ ಪತ್ನಿ ಹಾಗೂ ಪುತ್ರಿಯ ಜತೆ ಮಾತನಾಡುತ್ತಿದ್ದೆ. ಅವರ ಸಭೆ ಮುಗಿದ ನಂತರ ನಮ್ಮ ಜತೆ ಒಂದು ಕಪ್ ಚಹಾ ಸೇವಿಸುತ್ತಿದ್ದರು'' ಎಂದು ಥಾಪರ್ ಬರೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X