Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಂಧಿತ ಮುಸ್ಲಿಮರ ಪರ ವಕಾಲತ್ತಿಗೆ ವಕೀಲರ...

ಬಂಧಿತ ಮುಸ್ಲಿಮರ ಪರ ವಕಾಲತ್ತಿಗೆ ವಕೀಲರ ನಿರಾಕರಣೆ: ಆರೋಪ

ಹೊನ್ನಾವರ ಕೋಮುಘರ್ಷಣೆ

ವಾರ್ತಾಭಾರತಿವಾರ್ತಾಭಾರತಿ13 Dec 2017 9:44 PM IST
share
ಬಂಧಿತ ಮುಸ್ಲಿಮರ ಪರ ವಕಾಲತ್ತಿಗೆ ವಕೀಲರ ನಿರಾಕರಣೆ: ಆರೋಪ

ಹೊನ್ನಾವರ,  ಡಿ.13: ಹೊನ್ನಾವರ ವೃತ್ತದಲ್ಲಿ ಡಿಸೆಂಬರ್ 6ರಂದು ಆಟೊ ಮತ್ತು ಬೈಕ್ ಢಿಕ್ಕಿಯ ಬಳಿಕ ಸಂಭವಿಸಿದ್ದ ಕೋಮುಘರ್ಷಣೆಗೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಮುಸ್ಲಿಮರ ಪರ ವಕಾಲತ್ತು ನಡೆಸದಂತೆ ಹೊನ್ನಾವರ ವಕೀಲರ ಸಂಘ ನಿರ್ಧರಿಸಿದೆ ಎಂದು ಬಂಧಿತರ ಸಂಬಂಧಿಕರು ಆರೋಪಿಸಿದ್ದಾರೆ.

ಈ ಬಗ್ಗೆ ‘ವಾರ್ತಾ ಭಾರತಿ’ಗೆ ಪ್ರತಿಕ್ರಿಯೆ ನೀಡಿದ ಹೊನ್ನಾವರದ ಸಾಮಾಜಿಕ ಕಾರ್ಯಕರ್ತ ಮೂಸಾ ಅವರು, “ಡಿಸೆಂಬರ್ 6ರಂದು ಅಪಘಾತದ ಬಳಿಕ ಭುಗಿಲೆದ್ದ ಕೋಮುಘರ್ಷಣೆಗೆ ಸಂಬಂಧಿಸಿ ಪೊಲೀಸರು ಡಿಸೆಂಬರ್ 7ರ ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಮನೆಗಳಿಗೆ ನುಗ್ಗಿ ಮುಸ್ಲಿಮರನ್ನು ಬಂಧಿಸಿದ್ದರು. ಬಂಧಿತರ ಪೈಕಿ 28 ಮಂದಿಯ ಜಾಮೀನು ಅರ್ಜಿಗಾಗಿ ಡಿಸೆಂಬರ್ 7ರಂದು ನಾವು ಹೊನ್ನಾವರದ ವಕೀಲರಾದ ರವಿ ಹೆಗಡೆಯವರನ್ನು ಸಂಪರ್ಕಿಸಿದ್ದೆವು. ಅಂದು ಜಾಮೀನಿಗಾಗಿ ಅರ್ಜಿ ಸಲ್ಲಿಕೆಯಾಗಿತ್ತು. ಡಿಸೆಂಬರ್ 8ರಂದು ಕೂಡ ನಾವು ರವಿ ಹೆಗಡೆಯವರ ಸಂಪರ್ಕದಲ್ಲಿದ್ದವು. 9, 10ರಂದು ನ್ಯಾಯಾಲಯಕ್ಕೆ ರಜೆ ಇತ್ತು. 11ರಂದು ರವಿ ಹೆಗಡೆಯವರು, ಮುಸ್ಲಿಮರ ಪರ ವಕಾಲತ್ತು ವಹಿಸದಂತೆ ವಕೀಲರ ಸಂಘ ನಿರ್ಧಾರ ಕೈಗೊಂಡಿದೆ. ಅಲ್ಲದೆ ಜಾಮೀನು ಅರ್ಜಿಯನ್ನು ಹಿಂಪಡೆಯುವಂತೆ ನನಗೆ ಒತ್ತಡ ಹಾಕುತ್ತಿದ್ದಾರೆ. ಆದ್ದರಿಂದ ಬಂಧಿತರ ಪರ ವಕಾಲತ್ತು ವಹಿಸಲು ಆಗುವುದಿಲ್ಲ" ಎಂದು ಹೇಳಿರುವುದಾಗಿ ಮೂಸಾ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಚರ್ಚಿಸುವುದಿಲ್ಲ

ಈ ಬಗ್ಗೆ ‘ವಾರ್ತಾ ಭಾರತಿ’ ರವಿ ಹೆಗಡೆಯವರನ್ನು ಸಂಪರ್ಕಿಸಿದಾಗ, “ಈ ಬಗ್ಗೆ ನಾನು ಏನೂ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದ್ದಾರೆ. ನ್ಯಾಯಾಲಯದಲ್ಲಿ ಆರೋಪಿಗಳ ಪರ ಅರ್ಜಿ ಸಲ್ಲಿಕೆಯ ಬಗ್ಗೆ ಪ್ರಶ್ನಿಸಿದಾಗ “ನಾನು ಫೋನ್ ನಲ್ಲಿ ಈ ವಿಷಯವನ್ನು ಹೇಳುವುದಿಲ್ಲ. ಹೇಳಿಕೆ ನೀಡಿ ವಿವಾದ ಸೃಷ್ಟಿಸುವುದಿಲ್ಲ” ಎಂದಿದ್ದಾರೆ.

ಕಾನೂನಿನ ಉಲ್ಲಂಘನೆ: ವಕೀಲ ಇಮ್ರಾನ್

“ಮುಸ್ಲಿಮರ ಪರವಾಗಿ ವಕೀಲರು ವಾದ ಮಂಡಿಸಬಾರದೆಂದು ಹೊನ್ನಾವರ ವಕೀಲರ ಸಂಘ ನಿರ್ಧರಿಸಿದ್ದು, ಇದು ಕಾನೂನಿನ ಉಲ್ಲಂಘನೆಯಾಗಿದೆ” ಎಂದು ಭಟ್ಕಳದ ವಕೀಲ ಇಮ್ರಾನ್ ಲಂಕಾ ‘ವಾರ್ತಾ ಭಾರತಿ’ಗೆ ತಿಳಿಸಿದ್ದಾರೆ.

“ಹೊನ್ನಾವರ ವಕೀಲರ ನಡೆಯು ಆರೋಪಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವಂತೆ ಮಾಡಿದೆ. ಪ್ರಕರಣದಲ್ಲಿ ಆರೋಪಿಗಳ ಪರವಾಗಿ ವಾದ ಮಂಡಿಸಲು ಕಾನೂನಿನಲ್ಲಿ ಅವಕಾಶಗಳಿವೆ. ಅದನ್ನು ನಿರಾಕರಿಸುವಂತಿಲ್ಲ. ವಕೀಲರ ನಡೆ ಸರಿಯಲ್ಲ” ಎಂದಿದ್ದಾರೆ.

“ಈ ಬಗ್ಗೆ ನನಗೆ ಆರೋಪಿಯೊಬ್ಬರ ಸಂಬಂಧಿಯೊಬ್ಬರು ವಿಷಯ ತಿಳಿಸಿದಾಗ ನಾನೇ ಸ್ವತಃ ಹೊನ್ನಾವರ ಕೋರ್ಟ್ ಗೆ ತೆರಳಿ ರವಿ ಹೆಗಡೆಯವರೊಂದಿಗೆ ಮಾತುಕತೆ ನಡೆಸಿದ್ದೇನೆ. ಆಗ ರವಿ ಹೆಗಡೆಯವರೇ ನನಗೆ ಮುಸ್ಲಿಮರ ಪರ ವಕಾಲತು ಮಾಡದಂತೆ ವಕೀಲರ ಸಂಘದಲ್ಲಿ ಸಭೆ ನಡೆಸಿರುವುದಾಗಿ ಹೇಳಿದ್ದಾರೆ”.

“ಅಲ್ಲದೆ ರವಿ ಹೆಗಡೆ ಮತ್ತು ನಾನು ಮಾತುಕತೆ ನಡೆಸುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಇಬ್ಬರು ವಕೀಲರು “ಮುಸ್ಲಿಮರ ಪರ ಯಾರು ಮತ್ತು ಹೇಗೆ ವಾದ ಮಂಡಿಸುತ್ತಾರೆಂಬುದನ್ನು ನೋಡುತ್ತೇವೆ” ಎಂದು ಹೇಳಿರುವುದಾಗಿ ಇಮ್ರಾನ್ ಆರೋಪಿಸಿದ್ದಾರೆ.

ಆರೋಪ ನಿರಾಕರಿಸಿದ ವಕೀಲರ ಸಂಘದ ಅಧ್ಯಕ್ಷರು

“ಬಂಧಿತ ಮುಸ್ಲಿಮರ ಪರವಾಗಿ ಯಾರೂ ವಕಾಲತ್ತು ನಡೆಸಬಾರದು ಎಂದು ಸಂಘ ನಿರ್ಧರಿಸಿಲ್ಲ” ಎಂದು ಹೊನ್ನಾವರ ವಕೀಲರ ಸಂಘದ ಅಧ್ಯಕ್ಷ ಕೆ.ವಿ.ನಾಯ್ಕ ಪ್ರತಿಕ್ರಿಯಿಸಿದ್ದಾರೆ.

“ಆರೋಪಿಗಳ ಪರ ವಕಾಲತ್ತು ವಹಿಸದಂತೆ ಸಂಘಟನೆಯೊಂದು ಮನವಿ ಕೊಟ್ಟಿತ್ತು. ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ್ದೇವೆ. ಆದರೆ ಆರೋಪಿಗಳ ಪರವಾಗಿ ವಕಾಲತ್ತು ಮಾಡಬೇಕೋ, ಬೇಡವೋ ಎನ್ನುವುದು ಆಯಾ ವಕೀಲರಿಗೆ ಬಿಟ್ಟದ್ದು” ಎಂದು ಅವರು 'ವಾರ್ತಾ ಭಾರತಿ'ಗೆ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X