Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಚುನಾವಣೆ: ಶೇಕಡಾ 68 ಮತದಾನ

ಗುಜರಾತ್ ಚುನಾವಣೆ: ಶೇಕಡಾ 68 ಮತದಾನ

ವಾರ್ತಾಭಾರತಿವಾರ್ತಾಭಾರತಿ14 Dec 2017 9:14 PM IST
share
ಗುಜರಾತ್ ಚುನಾವಣೆ: ಶೇಕಡಾ 68 ಮತದಾನ

ಅಹ್ಮದಾಬಾದ್, ಡಿ.14: ಗುಜರಾತ್ ಚುನಾವಣೆಯ ಎರಡನೇ ಹಂತದ ಮತದಾನ ಗುರುವಾರ ನಡೆದಿದ್ದು ಶೇಕಡಾ 68.7 ಮತದಾರರು ತಮ್ಮ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಪ್ರಮಾಣವು ಮೊದಲ ಹಂತದ ಪ್ರಮಾಣದಿಂದ ಸ್ವಲ್ಪವೇ ಹೆಚ್ಚಾಗಿದೆ. ಗುಜರಾತ್‌ನ ಮೊದಲ ಹಂತದ ಮತದಾನದಲ್ಲಿ ಶೇಕಡಾ 68 ಮತದಾನವಾಗಿತ್ತು. 2012ರಲ್ಲಿ ಶೇಕಡಾ 71.3 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದರು.

ಅಹ್ಮದಾಬಾದ್‌ನಲ್ಲಿ ತಮ್ಮ ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ ಶಾಯಿ ಗುರುತು ಹಾಕಲಾಗಿರುವ ತಮ್ಮ ಕೈಬೆರಳನ್ನು ಎತ್ತಿ ನೆರೆದಿದ್ದ ಜನರಿಗೆ ತೋರಿಸುತ್ತಾ ತಾವು ಆಗಮಿಸಿದ್ದ ವಾಹನದ ಕಡೆಗೆ ಸಾಗಿರುವ ಘಟನೆ ವಿವಾದಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಮತದಾನ ನಡೆಯುತ್ತಿರುವಂತೆಯೇ ಪ್ರಧಾನಿ ಮೋದಿ ಈ ರೀತಿ ಜನರತ್ತ ಕೈಬೀಸುವ ಮೂಲಕ ರೋಡ್ ಶೋ ಮಾಡಿದ್ದಾರೆ. ಇದರಿಂದ ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಚುನಾವಣಾ ಆಯೋಗವನ್ನೂ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಆಯೋಗವು ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆಗೆ ಒಂದು ದಿನ ಮುನ್ನ ಟಿವಿ ಸಂದರ್ಶನ ನೀಡಿರುವುದಕ್ಕೆ ಸ್ಪಷ್ಟೀಕರಣ ಕೇಳಿರುವ ಚುನಾವಣಾ ಆಯೋಗ ಬಿಜೆಪಿ ಎಷ್ಟು ಬಾರಿ ನೀತಿಸಂಹಿತೆ ಉಲ್ಲಂಘಿಸಿದರೂ ಯಾವ ಕ್ರಮವನ್ನೂ ತೆಗೆದುಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ ಸೋಲುವ ಭೀತಿ ಎದುರಾಗಿದ್ದು ಈಗ ದ್ರಾಕ್ಷೆ ಹುಳಿಯಾಗಿದೆ ಎಂಬ ನರಿಯಂತೆ ವರ್ತಿಸುತ್ತಿದೆ ಎಂದು ವ್ಯಂಗ್ಯವಾಡಿದೆ. ಎರಡು ಪಕ್ಷಗಳ ನಾಯಕರು ಕೂಡಾ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು ಕಾಂಗ್ರೆಸ್ ಕಾರ್ಯಕರ್ತರು ಆಯೋಗದ ದೆಹಲಿ ಮುಖ್ಯಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಪ್ರಸ್ತುತ ಗುಜರಾತ್ ಚುನಾವಣೆಯನ್ನು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ನಡುವಿನ ಹೋರಾಟ ಎಂದೇ ಬಿಂಬಿಸಲಾಗುತ್ತಿದೆ. ರಾಜ್ಯದ 182 ವಿಧಾನಸಭಾ ಕ್ಷೇತ್ರಗಳ ಪೈಕಿ ಗುರುವಾರದಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ 93 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಎರಡನೇ ಹಂತದಲ್ಲಿ ಬಿಜೆಪಿಯ ಸಾಂಪ್ರದಾಯಿಕ ಮತದಾರರನ್ನು ಹೊಂದಿರುವ ನಗರ ಪ್ರದೇಶಗಳೇ ಹೆಚ್ಚಾಗಿರುವ ಕಾರಣ ಈ ಹಂತವು ಬಿಜೆಪಿಗೆ ಬಹಳ ಪ್ರಮುಖವಾಗಿದೆ. ಮತದಾರರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಪ್ರಧಾನಿ ಮೋದಿ ಗುರುವಾರ ಬೆಳಿಗ್ಗೆಯೇ ಮನವಿ ಮಾಡಿಕೊಂಡಿದ್ದರು.

ಮುಖ್ಯವಾಗಿ ಅಹ್ಮದಾಬಾದ್ ಮತ್ತು ವಡೋದರವನ್ನು ಉಳಿಸಿಕೊಳ್ಳುವುದು ಬಿಜೆಪಿಗೆ ದೊಡ್ಡ ಸವಾಲಾಗಿದೆ. ಈ ಎರಡು ದೊಡ್ಡ ನಗರಗಳ 31 ಸ್ಥಾನಗಳ ಪೈಕಿ ಬಿಜೆಪಿ ಹಿಂದಿನ ಚುನಾವಣೆಯಲ್ಲಿ 26 ಸ್ಥಾನಗಳನ್ನು ಗೆದ್ದಿತ್ತು. ಗುರುವಾರ ಚುನಾವಣೆ ನಡೆದ 93 ಕ್ಷೇತ್ರಗಳಲ್ಲಿ ಬಿಜೆಪಿ ಹಿಂದೆ ನಡೆದ ಚುನಾವಣೆಯಲ್ಲಿ 52 ಸ್ಥಾನಗಳನ್ನು ಹಾಗೂ ಕಾಂಗ್ರೆಸ್ 39 ಸ್ಥಾನಗಳನ್ನು ಗೆದ್ದಿತ್ತು.

ಕಳೆದ 22 ವರ್ಷಗಳಿಂದ ಗಜರಾತ್‌ನಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಈ ಬಾರಿ ಆಡಳಿತವಿರೋಧಿ ಅಲೆಯಿಂದ ಉಂಟಾಗಬಹುದಾದ ಯಾವುದೇ ನಷ್ಟವನ್ನು ಬುಡಕಟ್ಟು ಜನಾಂಗದ ಜನರ ಮತ ಪಡೆಯುವ ಮೂಲಕ ಸರಿಗಟ್ಟಲು ಪ್ರಯತ್ನಿಸುತ್ತಿದೆ. ಪ್ರಧಾನಿ ಮೋದಿ ಕೂಡಾ ಬುಡಕಟ್ಟು ಪ್ರದೇಶಗಳಲ್ಲಿ ಪಕ್ಷದ ಬೇರನ್ನು ಗಟ್ಟಿಗೊಳಿಸುವ ಸಲುವಾಗಿ ಸ್ಥಳೀಯ ನಾಯಕರ ಜೊತೆಗೂಡಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ.

ಗುಜರಾತ್‌ನ 89 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಮತ್ತು ಪಟೇಲರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಡಿಮೆ ಮತದಾನ ದಾಖಲಾಗಿತ್ತು. ಹಿಂದಿನ ಬಹುತೇಕ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದ ಪಟೇಲರು ಈ ಬಾರಿ ಮೀಸಲಾತಿ ವಿವಾದದ ಕಾರಣದಿಂದಾಗಿ ಬಿಜೆಪಿಯನ್ನು ಬೆಂಬಲಿಸದಿರುವ ನಿರ್ಧಾರವನ್ನು ತಳೆದಿದ್ದಾರೆ.

ಜನರ ಆಕ್ರೋಶವನ್ನು ಆಡಳಿತಾರೂಢ ಪಕ್ಷದ ವಿರುದ್ಧ ಬಳಸಲು ಮುಂದಾದ ಕಾಂಗ್ರೆಸ್ ದಲಿತ ನಾಯಕ ಜಿಗ್ನೇಶ್ ಮೆವಾನಿ, ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್ ಮತ್ತು ಪಾಟಿದಾರ್ ಮೀಸಲಾತಿ ಚಳುವಳಿಯ ನಾಯಕ ಹಾರ್ದಿಕ್ ಪಟೇಲ್ ಜೊತೆ ಕೈಜೊಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಚುನಾವಣೆಯನ್ನು ವಿಕಾಸ ಮತ್ತು ವಂಶವಾದದ ನಡುವಿನ ಹೋರಾಟ ಎಂದು ವ್ಯಾಖ್ಯಾನಿಸಿದ್ದಾರೆ. ಡಿಸೆಂಬರ್ 18ರಂದು ಗುಜರಾತ್ ಚುನಾವಣೆಯ ಮತ ಎಣಿಕೆ ನಡೆಯಲಿದ್ದು ಫಲಿತಾಂಶ ಹೊರಬೀಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X