Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮನುಷ್ಯನ ಹತಾಶೆಗಳನ್ನು ಹೇಳುವ ಒಂಟಿ...

ಮನುಷ್ಯನ ಹತಾಶೆಗಳನ್ನು ಹೇಳುವ ಒಂಟಿ ತೆಪ್ಪ‘

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ15 Dec 2017 12:04 AM IST
share
ಮನುಷ್ಯನ ಹತಾಶೆಗಳನ್ನು ಹೇಳುವ ಒಂಟಿ ತೆಪ್ಪ‘

ಒಂಟಿ ತೆಪ್ಪ’ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರ ಕಥಾ ಸಂಕಲನ. ಇದು ಇವರ ಐದನೇ ಕಥಾ ಸಂಕಲನ. ಅರಣ್ಯ ಇಲಾಖೆಯಲ್ಲಿ ಅಧೀಕ್ಷಕರಾಗಿ ಕೆಲಸ ನಿರ್ವಹಿಸಿ ನಿವೃತ್ತರಾಗಿರುವ ಇವರು ಸಾಹಿತ್ಯ ಕೃಷ್ಟಿಯಲ್ಲಿ ಸಕ್ರಿಯರಾಗಿ ತೊಡಗಿಕೊಂಡಿದ್ದಾರೆ. ಅಂತರಂಗದಲ್ಲಿ ಗುಪ್ತಗಾಮಿನಿಯಾಗಿ ಹರಿಯುವ ಮಾನವೀಯತೆಯ ಗುಣ ಇವರ ಕತೆಗಳಲ್ಲಿ ಮಡುಗಟ್ಟಿವೆ. ಹೆಚ್ಚಿನ ಕತೆಗಳು ಇಂತಹ ಮಾನವೀಯ ಕಾರಣಗಳಿಗಾಗಿ ಇಷ್ಟವಾಗುತ್ತವೆ. ಇಲ್ಲಿ ಒಟ್ಟು 16 ಕತೆಗಳಿವೆ. ತಾನು ಕಳೆದುಕೊಂಡದ್ದನ್ನು ಮರಳಿ ಪಡೆಯುವ ಹವಣಿಕೆಯಲ್ಲಿ ವಿಫಲನಾಗುವ ಮನುಷ್ಯನ ಒಳ ಹೊರಗಿನ ದುರಂತವನ್ನು ‘ಕಳಕೊಂಡವನು’ ಹೇಳುತ್ತದೆ. ವೃಂದಾಳ ಒಡೆದ ಕನಸನ್ನು ಹೇಳುವ ‘ಕನಸುಗಳಿಗೆ ದಡಗಳಿರುವುದಿಲ್ಲ’ ಕತೆ, ರಾಜಕಾರಣಿಗಳ ಸಮಯ ಸಾಧಕತನಕ್ಕೆ ಬಲಿಯಾಗುವ ಪ್ರತಿಭಾವಂತ ಯುವಕರ ದುರಂತವನ್ನು ಹೇಳುವ ‘ನಿರಾಳ’ ಕತೆ ಒಂದು ರೀತಿಯ ವಿಷಾದವನ್ನು ಬಿತ್ತುತ್ತವೆ. ವರ್ತಮಾನದ ಆಸೆ ಮತ್ತು ಅದು ವಿಫಲವಾದಾಗ ಎದುರಾಗುವ ಆಘಾತಗಳನ್ನು ತೆರೆದಿಡುತ್ತದೆ. ‘ಒಂದು ಹಿಡಿ ಪ್ರೀತಿ’ ಇಂದಿನ ಕಾಲದ ಕೌಟುಂಬಿಕ ದುರಂತಗಳನ್ನು ಹೇಳುತ್ತದೆ. ವಿದೇಶದಲ್ಲಿರುವ ಮಗ ಸೊಸೆ. ಅವರನ್ನು ನೋಡಬೇಕೆನ್ನುವ ಪಾಲಕರ ತುಡಿತ, ಆದರೆ ಎದುರಾಗುವ ನಿರಾಶೆಯನ್ನು ಈ ಕತೆ ಕಟ್ಟಿಕೊಡುತ್ತದೆ. ತನ್ನ ಮೊಮ್ಮಗನನ್ನು ನೋಡಲಾಗದ ವೃದ್ಧ ದಂಪತಿ, ಬಾಡಿಗೆ ಮನೆಯಲ್ಲಿರುವಾತನ ಮಗುವಿನಲ್ಲಿ ಮೊಮ್ಮಗನನ್ನು ಕಾಣುವಲ್ಲಿ ಕತೆ ಮುಗಿಯುತ್ತದೆ. ಇದೊಂದು ರೀತಿ, ಬಾಂಧವ್ಯವೆನ್ನುವುದು ಹೇಗೆ ರಕ್ತ ಸಂಬಂಧಕ್ಕೂ ಆಚೆಗಿನದು ಎನ್ನುವುದನ್ನು ಹೇಳುತ್ತದೆ.
ಇಲ್ಲಿರುವ ಹೆಚ್ಚಿನ ಕತೆಗಳೂ ಕೌಟುಂಬಿಕ ನೆಲೆಯಿಂದ ಮೂಡಿ ಬಂದಿರುವುದು. ಜನಪ್ರಿಯ ಮಾದರಿಯನ್ನು ಕತೆ ಹೇಳುವ ತಂತ್ರವನ್ನಾಗಿಸಿದ್ದಾರೆ. ಅನಿರೀಕ್ಷಿತ ಅಂತ್ಯ ಕತೆಯ ಹೆಗ್ಗಳಿಕೆ. ಸರಳ ನಿರೂಪಣೆ ಕತೆಯನ್ನು ಆತ್ಮೀಯವಾಗಿಸುತ್ತದೆ. ವಿಜಯಲಕ್ಷ್ಮೀ ಪ್ರಕಾಶನ ಹೊರತಂದಿರುವ ಕೃತಿಯ ಮುಖಬೆಲೆ 120 ರೂ. ಆಸಕ್ತರು 98453 25356 ೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X