Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಡಿಯಲು ನೀರು ಒದಗಿಸಲು ಒತ್ತಾಯಿಸಿ...

ಕುಡಿಯಲು ನೀರು ಒದಗಿಸಲು ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋದ ನಗರ ವಾಸಿ

ವಾರ್ತಾಭಾರತಿವಾರ್ತಾಭಾರತಿ15 Dec 2017 5:27 PM IST
share

ಚಿಕ್ಕಮಗಳೂರು, ಡಿ.15: ಕಳೆದ 4-5 ತಿಂಗಳಿಂದ ತಮ್ಮ ಮನೆಗೆ ಕುಡಿಯಲು ನೀರು ನೀಡದೇ ಅಲದಾಡಿಸುತ್ತಿರುವ ನಗರಸಭೆ ಅಧಿಕಾರಿಗಳ ವಿರುದ್ದ ಬೇಸತ್ತ ವ್ಯಕ್ತಿಯೊಬ್ಬರು ಸ್ಥಳೀಯ ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ.

ನಗರಸಭಾ ವ್ಯಾಪ್ತಿಯ ದಂಟರಮಕ್ಕಿ ಬಡಾವಣೆಯ ವಾರ್ಡ್ ನಂ.22ರಲ್ಲಿ ವಾಸವಿರುವ ಡಿ.ಎನ್.ಚಂದ್ರಶೇಖರ್ ನಲ್ಲಿ ಕಂದಾಯವನ್ನು ಸಮಯಕ್ಕೆ ಸರಿಯಾಗ ಪಾವತಿಸುತ್ತಾ ಬಂದಿದ್ದರೂ ಅವರ ಮನೆಗೆ ನೀರು ಸರಬರಾಜು ಮಾಡದೇ ಇರುವ ಬಗ್ಗೆ ಚಂದ್ರಶೇಖರ್ ಈಗ ನ್ಯಾಯಾಲಾಯದ ಮೊರೆ ಹೋಗಿದ್ದಾರೆ.

ಚಂದ್ರಶೇಖರ್ ವಾಸವಿರುವ ಮನೆ ಹಾಗೂ ಅಕ್ಕಪಕ್ಕದ ಮನೆಗಳಿಗೆ ಈ ಹಿಂದೆ ನಗರಸಭೆ ನೀರು ನಗರಸಭೆ ನೀರು ಸರಬರಾಜು ಮಾಡುತ್ತಿತ್ತು. ಆದರೆ, ನಲ್ಲಿ ಸಂಪರ್ಕದ ಮುಖ್ಯ ಪೈಪುಗಳನ್ನು ಬದಲಾಯಿಸಲು ಹಳೆಯ ಮುಖ್ಯ ಪೈಪ್‍ಅನ್ನು ನಗರಸಭಾ ನೌಕರರು ತೆರವುಗೊಳಿಸಿ ನೂತನ ಪೈಪ್ ಅಳವಡಿಸಿದ್ದಾರೆ. ಇತರೆ ಮನೆಗಳಿಗೆ ಕುಸಿಯುವ ನೀರಿನ ಸಂಪರ್ಕವನ್ನು ಪನಸ್ಥಾಪಿಸಿದ ನಗರಸಭಾ ನೌಕರರು ಚಂದ್ರಶೇಖರ್ ರವರ ಮನೆಯ ನೀರಿನ ಸಂಪರ್ಕ ಮಾತ್ರ ಪುನಸ್ಥಾಪಿಸಿರುವುದಿಲ್ಲ.

ಇದರ ಬಗ್ಗೆ ಚಂದ್ರಶೇಖರ್ ನಗರಸಭೆಗೆ ದೂರು ಸಲ್ಲಿಸಿದ್ದಾರೆ. ಆದರೆ,ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಮ್ಮ ಕುಟುಂಬದಲ್ಲಿ 10 ಮಂದಿ ಇದ್ದು ವಯಸ್ಸಾದ ಹಿರಿಯ ಸಹೋದರ ಪಾರ್ಶವಾಯು ಪೀಡಿತರಾಗಿ ನರಳುತ್ತಿದ್ದಾರೆಂದು ತಿಳಿಸಿ ನಲ್ಲಿ ಕಂದಾಯವನ್ನು ನಿರಂತರವಾಗಿ ನೀಡುತ್ತಾ ಬಂದಿದ್ದರೂ ನಲ್ಲಿ ಸಂಪರ್ಕವನ್ನು ಪುನಃಸ್ಥಾಪಿಸದಿರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. 
ಇದರಿಂದ ಚಂದ್ರಶೇಖರ್ ಸ್ಥಳೀಯ 3ನೇ ಹೆಚ್ಚುವರಿ ಸಿವಿಲ್ ಜೆ.ಎಂ.ಎಫ್.ಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಚಂದ್ರಶೇಖರ್ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ ಚಿಕ್ಕಮಗಳೂರು ನಗರಸಭಾ ಆಯುಕ್ತರಿಗೆ 2017ರ ನವೆಂಬರ್ 17ರಂದು  ಆದೇಶ ನೀಡಿ ಅರ್ಜಿದಾರರಾದ ಚಂದ್ರಶೇಖರ್ ರವರಿಗೆ ನಲ್ಲಿ ಸಂಪರ್ಕ ನೀಡಲು ಆದೇಶಿಸಿದೆ.

ಆದೇಶವನ್ನು ಪಾಲಿಸದ ನಗರಸಭಾ ಆಯುಕ್ತರ ವಿರುದ್ಧ ಈಗ ಚಂದ್ರಶೇಖರ್ ರವರು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದು ಪ್ರಕರಣವನ್ನು ಕೈಗೆತ್ತಿಕೊಂಡಿರುವ 3ನೇ ಹೆಚ್ಚುವರಿ ಸಿವಿಲ್ ಜೆ.ಎಂ.ಎಫ್.ಸಿ ನ್ಯಾಯಾಲಯ ನಗರಸಭಾ ಆಯುಕ್ತರು ಡಿಸೆಂಬರ್ 16 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿದೆ. ಸ್ಥಳೀಯ ರಾಜಕೀಯ ವ್ಯಕ್ತಿಗಳ ಹಸ್ತಕ್ಷೇಪವೇ ತಮ್ಮ ಕುಟುಂಬಕ್ಕೆ ನೀರಿನ ಸಂಪರ್ಕ ನೀಡದಿರಲು ಕಾರಣ ಎಂದು ಚಂದ್ರಶೇಖರ್ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X