Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ; ಪಾವತಿಯಾಗದ ಬಾಡಿಗೆ :...

ಶಿವಮೊಗ್ಗ; ಪಾವತಿಯಾಗದ ಬಾಡಿಗೆ : ಮಳಿಗೆಗಳಿಗೆ ಬೀಗ ಜಡಿಯಲು ಮುಂದಾದ ಪಾಲಿಕೆ ಆಡಳಿತ

ವಾರ್ತಾಭಾರತಿವಾರ್ತಾಭಾರತಿ15 Dec 2017 6:02 PM IST
share

ಶಿವಮೊಗ್ಗ, ಡಿ. 14: ನಗರದ ವಿವಿಧೆಡೆ ಮಹಾನಗರ ಪಾಲಿಕೆ ಒಡೆತನಕ್ಕೆ ಸೇರಿದ ವಾಣಿಜ್ಯ ಸಂಕೀರ್ಣಗಳಲ್ಲಿ ಕಳೆದ ಹಲವು ವರ್ಷಗಳಿಂದ ಬಾಡಿಗೆ ಬಾಕಿ ಉಳಿಸಿಕೊಂಡ ಮಳಿಗೆಗಳಿಗೆ ಬೀಗ ಜಡಿಯುವ ಕಾರ್ಯವನ್ನು ಪಾಲಿಕೆ ಆಡಳಿತ ಶುಕ್ರವಾರದಿಂದ ನಡೆಸಲಾರಂಭಿಸಿದೆ. 

ಹಲವು ಮಳಿಗೆಗಳ ಮಾಲೀಕರು ಕಳೆದ ಹಲವು ವರ್ಷಗಳಿಂದ ಲಕ್ಷಾಂತರ ರೂ. ಮೊತ್ತದ ಬಾಡಿಗೆ ಬಾಕಿ ಉಳಿಸಿಕೊಂಡಿದ್ದರು. ಕೆಲವರು ನಿಯಮಕ್ಕೆ ವಿರುದ್ದವಾಗಿ ಒಳ ಬಾಡಿಗೆ ಕೂಡ ಕೊಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ನಡುವೆ ಬಾಡಿಗೆ ಪಾವತಿಗೆ ಸಂಬಂಧಿಸಿದಂತೆ ತಗಾದೆ ಏರ್ಪಟ್ಟು ಕೆಲವರು ನ್ಯಾಯಾಲಯದ ಮೊರೆ ಕೂಡ ಹೋಗಿದ್ದರು. 

ನ್ಯಾಯಾಲಯವು ಬಾಡಿಗೆ ಪಾವತಿ ಮಾಡುವಂತೆ ಸೂಚಿಸಿತ್ತು. ಆದಾಗ್ಯೂ ಕೆಲ ಬಾಡಿಗೆದಾರರು ಬಾಡಿಗೆ ಪಾವತಿ ಮಾಡಿರಲಿಲ್ಲ. ಸ್ಥಾಯಿ ಸಮಿತಿಯೊಂದರ ಸಭೆಯಲ್ಲಿ ಈ ವಿಷಯ ಚರ್ಚೆಯಾಗಿತ್ತು. ಮಳಿಗೆಗಳಿಂದ ಬಾಡಿಗೆ ವಸೂಲಿ ಮಾಡುವಲ್ಲಿ ವಿಫಲರಾದ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳನ್ನೇ ಹೊಣೆಯನ್ನಾಗಿ ಮಾಡಲು ನಿರ್ಧರಿಸಲಾಗಿತ್ತು. 

ಇದರಿಂದ ಎಚ್ಚೆತ್ತುಕೊಂಡ ಪಾಲಿಕೆಯ ಸಂಬಂಧಿಸಿದ ವಿಭಾಗದ ಅಧಿಕಾರಿ, ನೌಕರರು ಸಮರ್ಪಕವಾಗಿ ಬಾಡಿಗೆ ಪಾವತಿಸದ ಮಳಿಗೆಗಳಿಗೆ ಬೀಗ ಜಡಿಯಲು ಮುಂದಾದರು. ಈ ವೇಳೆ ಕೆಲಸ ಬಾಡಿಗೆದಾರರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾನವೀಯತೆ ದೃಷ್ಟಿಯಿಂದ ಬಾಡಿಗೆ ಪಾವತಿಗೆ ಕಾಲಾವಾಕಾಶ ನೀಡಿ, ಮಳಿಗೆಗಳಿಗೆ ಹಾಕಲಾಗಿದ್ದ ಬೀಗಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದರು. ನಿಗದಿತ ಅವಧಿಯೊಳಗೆ ಬಾಡಿಗೆ ಪಾವತಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಬೀಗ ಜಡಿಯಲಾಗುವುದು ಎಂದು ವರ್ತಕರಿಗೆ ಪಾಲಿಕೆ ಆಡಳಿತ ಎಚ್ಚರಿಕೆ ನೀಡಿದೆ. 

ಬಾಕಿ: ಪಾಲಿಕೆ ಆಡಳಿತಕ್ಕೆ ಮೂರುವರೆ ಕೋಟಿ ರೂ.ಗೂ ಹೆಚ್ಚು ಬಾಡಿಗೆ ಬಾಕಿ ಬರಬೇಕಾಗಿದೆ. ಈ ಪೈಕಿ ದೇವರಾಜ ಅರಸು ವಾಣಿಜ್ಯ ಸಂಕೀರ್ಣವೊಂದರಿಂದಲೇ 1.54 ಕೋಟಿ ರೂ. ಬಾಡಿಗೆ ಬಾಕಿ ಬರಬೇಕಾಗಿದೆ. ಇದೇ ಸಂಕೀರ್ಣದಲ್ಲಿರುವ ಸರ್ಕಾರಿ ಸ್ವಾಮ್ಯದ ಕೆಎಸ್‍ಎಫ್‍ಸಿ ಸಂಸ್ಥೆಯು ಕೂಡ ಸುಮಾರು 1 ಕೋಟಿ ರೂ.ಗಳಷ್ಟು ಬಾಡಿಗೆ ಬಾಕಿ ಉಳಿಸಿಕೊಂಡಿದೆ!

ಇಂದಿರಾ ಗಾಂಧಿ ಸಂಕೀರ್ಣ, ಜೆ.ಹೆಚ್.ಪಟೇಲ್ ವಾಣಿಜ್ಯ ಸಂಕೀರ್ಣ, ಗಾಂಧಿನಗರ, ಬಿ.ಹೆಚ್.ರಸ್ತೆ, ಕುಂಬಾರಗುಂಡಿ, ಜೈಲ್ ರಸ್ತೆ, ಖಾಸಗಿ ಬಸ್ ನಿಲ್ದಾಣ, ಫುಡ್‍ಕೋರ್ಟ್ ಮತ್ತೀತರೆಡೆ ಪಾಲಿಕೆಗೆ ಸೇರಿದ 385 ಮಳಿಗೆಗಳಿವೆ. ಕೆಲ ವರ್ತಕರು ಸಮಯಕ್ಕೆ ಸರಿಯಾಗಿ ಬಾಡಿಗೆ ಪಾವತಿ ಮಾಡದಿರುವುದು ಕಂಡುಬಂದಿದೆ. ಇದರಿಂದ ಇದೀಗ ಮಳಿಗೆಗಳಿಗೆ ಬೀಗ ಜಡಿಯುವ ಕಾರ್ಯಕ್ರಮವನ್ನು ಪಾಲಿಕೆ ಆಡಳಿತ ಆರಂಭಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X