Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ. 29ರಿಂದ ಉಡುಪಿ ಪರ್ಬ, ಅಡ್ವೆಂಚರ್...

ಡಿ. 29ರಿಂದ ಉಡುಪಿ ಪರ್ಬ, ಅಡ್ವೆಂಚರ್ ಫೆಸ್ಟಿವಲ್

ಸಾಹಸಿ ಪ್ರವಾಸೋದ್ಯಮಕ್ಕೆ ಉಡುಪಿ ಸಜ್ಜು

ವಾರ್ತಾಭಾರತಿವಾರ್ತಾಭಾರತಿ15 Dec 2017 8:41 PM IST
share
ಡಿ. 29ರಿಂದ ಉಡುಪಿ ಪರ್ಬ, ಅಡ್ವೆಂಚರ್ ಫೆಸ್ಟಿವಲ್

ಉಡುಪಿ, ಡಿ.15:ಕಡಲ ತೀರದ ಸಾಹಸೀ ಪ್ರವಾಸೋದ್ಯಮಕ್ಕೆ ಉಡುಪಿ ಸಜ್ಜಾಗಿದ್ದು, ಇದೇ ಡಿ.29ರಿಂದ 31ರವರೆಗೆ ಉಡುಪಿ ಪರ್ಬ ಹಾಗೂ ಜಿಲ್ಲೆಯ ನಾನಾ ಕಡೆಗಳಲ್ಲಿ ಉಡುಪಿ ಅಡ್ವೆಂಚರ್ ಫೆಸ್ಟಿವಲ್‌ಗಳನ್ನು ಆಯೋಜಿಸಲಾ ಗುವುದು ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿಯ ವೈಟ್‌ವಾಟರ್ ಹೊಟೇಲ್‌ನಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿ ಯಲ್ಲಿ ಉಡುಪಿ ಪರ್ಬದ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಹಾಗೂ ಕರಾವಳಿ ಪ್ರವಾಸೋದ್ಯಮಗಳ ಸಂಘಟನೆಗಳು ಸಂಯುಕ್ತವಾಗಿ ವಿಶಿಷ್ಟವಾದ ಈ ಉತ್ಸವವನ್ನು ಹಮ್ಮಿಕೊಂಡಿವೆ ಎಂದರು.

ಉತ್ಸವದ ಸಂಘಟನೆಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 60 ಲಕ್ಷ ರೂ. ಹಾಗೂ ಪ್ರವಾಸೋದ್ಯಮ ಇಲಾಖೆ 15 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಉಳಿದ ವೆಚ್ಚವನ್ನು ದಾನಿಗಳ ಮೂಲಕ ಸಂಗ್ರಹಿಸಲಾಗುತ್ತದೆ. ರಾಜ್ಯದ ಒಟ್ಟು ಹತ್ತು ಕಡೆಗಳಲ್ಲಿ ಸಾಹಸಿ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಪ್ರಮೋದ್ ತಿಳಿಸಿದರು.

ದಾಂಡೇಲಿಯಲ್ಲಿ ರಿವರ್ ರಾಫ್ಟಿಂಗ್, ಚಿತ್ರದುರ್ಗದಲ್ಲಿ ಪರ್ವತಾರೋಹಣ ಕ್ರೀಡೆ, ಬೆಂಗಳೂರು ಸೇರಿದಂತೆ ಉಳಿದೆಡೆಗಳಲ್ಲಿ ವಿವಿಧ ಸಾಹಸೀ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ. ಈ ಮೂಲಕ ರಾಜ್ಯದ ಯುವಜನರಿಗೆ ಸಾಹಸಿ ಕ್ರೀಡೆಗಳನ್ನು ಪರಿಚಯಿಸಲಾಗುತ್ತಿದೆ. ಇವುಗಳು ಎಲ್ಲವೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಉತ್ಸವವಾಗಿರುತ್ತದೆ ಎಂದರು.

ಈ ನಿಟ್ಟಿನಲ್ಲಿ ಮಲ್ಪೆ ಬೀಚ್ ಅಲ್ಲದೇ, ಕಾಪು, ಒತ್ತಿನೆಣೆ, ಪಡುಬಿದ್ರಿ, ಪಡುವರಿ, ಕೋಟೇಶ್ವರ ಕೋಡಿ ಕಿನಾರ ಬೀಚ್‌ಗಳಲ್ಲೂ ವಿವಿಧ ಸಮುದ್ರ ಸಾಹಸಿ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಇದರೊಂದಿಗೆ ಮಣ್ಣಪಳ್ಳದಲ್ಲಿ ಶಿಲ್ಪಕಲಾ ಶಿಬಿರ, ಆದಿಉಡುಪಿಯಲ್ಲಿ ಹೆಲಿಟೂರಿಸಂ, ಕುದುರೆಮುಖ, ಹೆಬ್ರಿ, ಕೊಲ್ಲೂರುಗಳಲ್ಲಿ ಟ್ರೆಕ್ಕಿಂಗ್ ಹಾಗೂ ಕ್ಯಾಂಪಿಂಗ್, ಅಜ್ದರಕಾಡು ಬಯಲು ರಂಗಮಂದಿರದಲ್ಲಿ ಶ್ವಾನಪ್ರದರ್ಶನ ಆಯೋಜಿಸಲಾಗುತ್ತಿದೆ ಎಂದು ಪ್ರಮೋದ್ ತಿಳಿಸಿದರು.

ಇವುಗಳ ಜೊತೆಯಲ್ಲೇ ಮಲ್ಪೆಯಲ್ಲಿ ಆಹಾರ ಮೇಳ, ಗೂಡುದೀಪ ಸ್ಪರ್ಧೆ, ಸ್ಕೂಬಾ ಡೈವಿಂಗ್(ಕಾಪು), ವೈನ್ ಉತ್ಸವ, ಸೈಂಟ್ ಮೇರೀಸ್ ದ್ವೀಪದಲ್ಲಿ ಛಾಯಾಚಿತ್ರ ಸ್ಪರ್ಧೆ, ಚಿತ್ರಕಲೆ ಹಾಗೂ ಕಾರ್ಟೂನು ಶಿಬಿರ, ಮರಳು ಶಿಲ್ಪ ಹಾಗೂ ಸಮುದ್ರದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿವಮಣಿ ಅವರ ಸಂಗೀತ ಕಾರ್ಯಕ್ರಮ, ಆಳ್ವಾಸ್ ಸಂಸ್ಥೆಯಿಂದ ನೃತ್ಯ ವೈಭವ, ಪ್ರಹ್ಲಾದ ಆಚಾರ್ಯರ ಜಾದೂ ಪ್ರದರ್ಶನ, ವಿವಿಧ ತಂಡಗಳಿಂದ ಸಂಗೀತ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿವಮಣಿ ಅವರ ಸಂಗೀತ ಕಾರ್ಯಕ್ರಮ, ಆಳ್ವಾಸ್ ಸಂಸ್ಥೆಯಿಂದ ನೃತ್ಯ ವೈವ,ಪ್ರಹ್ಲಾದಆಚಾರ್ಯರಜಾದೂಪ್ರದರ್ಶನ,ವಿವಿ ತಂಡಗಳಿಂದ ಸಂಗೀತ ಸಂಜೆ ಕಾರ್ಯಕ್ರಮಗಳು ನಡೆಯಲಿವೆ. ಈ ಸಾಹಸಿ ಕ್ರೀಡೆಗಳನ್ನು ತನ್ನ ಅಧ್ಯಕ್ಷತೆಯ ಜನರಲ್ ತಿಮ್ಮಯ್ಯ ನ್ಯಾಷನಲ್ ಅಕಾಡೆಮಿ ಆಪ್ ಅಡ್ವೆಂಚರ್‌ನ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಸಾಹಸ ಪ್ರವಾಸೋದ್ಯಮ ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಎಂಬುದೇ ತಮ್ಮ ಉದ್ದೇಶವಾಗಿದೆ ಎಂದವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಪಂ ಅಧ್ಯಕ್ಷ ದಿವಾಕರಬಾಬು, ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಸಿಇಓ ಶಿವಾನಂದ ಕಾಪಸಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕೋಸ್ಟಲ್ ಟೂರಿಸಂನ ಮನೋಹರ ಶೆಟ್ಟಿ, ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.

ಮಲ್ಪೆಯಲ್ಲಿ ರಾಷ್ಟ್ರೀಯ ಓಪನ್ ವಾಟರ್ ಈಜು

ದೇಶದ ಮೊತ್ತಮೊದಲ ರಾಷ್ಟ್ರೀಯ ಜೂನಿಯರ್ ಮುಕ್ತ ಈಜು (ಓಪನ್ ವಾಟರ್ ಸ್ವಿಮ್ಮಿಂಗ್) ಚಾಂಪಿಯನ್‌ಷಿಪ್ ಮಲ್ಪೆ ಕಡಲಿನಲ್ಲಿ ಡಿ.30 ಮತ್ತು 31ರಂದು ನಡೆಯಲಿದೆ ಎಂದು ಪ್ರಮೋದ್ ಮಧ್ವರಾಜ್ ತಿಳಿಸಿದರು.

ಭಾರತದ ಈಜು ಫೆಡರೇಷನ್‌ನ ಆಶ್ರಯದಲ್ಲಿ ಕರ್ನಾಟಕ ಈಜು ಸಂಸ್ಥೆ ಈ ಚಾಂಪಿಯನ್‌ಷಿಪ್‌ನ್ನು ಉಡುಪಿ ಜಿಲ್ಲಾಡಳಿತ ಹಾಗೂ ಯುವಜನ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಿದೆ. ತೆರೆದ ಸಮುದ್ರದಲ್ಲಿ ದೇಶದಲ್ಲೇ ನಡೆಯುವ ಮೊತ್ತ ಮೊದಲ ಮುಕ್ತ ಈಜು ಸ್ಪರ್ಧೆ ಇದಾಗಿದೆ ಎಂದವರು ನುಡಿದರು.

 ಇದರಲ್ಲಿ ಅಗ್ರಸ್ಥಾನ ಪಡೆದ ಈಜುಪಟುಗಳು ವಿಶ್ವ ಜೂನಿಯರ್ ಮುಕ್ತ ಈಜು ಚಾಂಪಿಯನ್‌ಷಿಪ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಅರ್ಹತೆ ಪಡೆಯಲಿದ್ದಾರೆ ಎಂದೂ ಪ್ರಮೋದ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X