Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹ್ಯಾಟ್ರಿಕ್ ಗೆಲುವಿನೊಂದಿಗೆ ಸಿಂಧು...

ಹ್ಯಾಟ್ರಿಕ್ ಗೆಲುವಿನೊಂದಿಗೆ ಸಿಂಧು ಸೆಮಿಫೈನಲ್ಗೆ ಲಗ್ಗೆ

ದುಬೈ ವರ್ಲ್ಡ್ ಸೂಪರ್ ಸರಣಿ ಫೈನಲ್ಸ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ15 Dec 2017 11:45 PM IST
share
ಹ್ಯಾಟ್ರಿಕ್ ಗೆಲುವಿನೊಂದಿಗೆ ಸಿಂಧು ಸೆಮಿಫೈನಲ್ಗೆ ಲಗ್ಗೆ

ದುಬೈ, ಡಿ.15: ದುಬೈ ವರ್ಲ್ಡ್ ಸೂಪರ್ ಸರಣಿ ಫೈನಲ್ಸ್ ಟೂರ್ನಿಯಲ್ಲಿ ಮೂರನೇ ಹಾಗೂ ಕೊನೆಯ ಲೀಗ್ ಪಂದ್ಯವನ್ನು ನೇರ ಗೇಮ್‌ಗಳಿಂದ ಜಯಿಸಿರುವ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅಜೇಯವಾಗಿ ಸೆಮಿ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಇಲ್ಲಿ ಶುಕ್ರವಾರ ನಡೆದ ‘ಎ’ ಗುಂಪಿನ ತನ್ನ 3ನೇ ಪಂದ್ಯದಲ್ಲಿ ಸಿಂಧು ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಕೇವಲ 36 ನಿಮಿಷಗಳ ಹೋರಾಟದಲ್ಲಿ 21-9, 21-13 ಗೇಮ್‌ಗಳ ಅಂತರದಿಂದ ಮಣಿಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದರು.

ಈ ವರ್ಷ ಎರಡು ಸೂಪರ್ ಸರಣಿ ಜಯಿಸಿರುವ ವಿಶ್ವದ ನಂ.3ನೇ ಆಟಗಾರ್ತಿ ಸಿಂದು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಜಯಿಸಿದ್ದರು. ಶನಿವಾರ ನಡೆಯಲಿರುವ ಸೆಮಿಫೈನಲ್‌ನಲ್ಲಿ ಚೀನಾದ ಚೆನ್ ಯುಫಿ ಅವರನ್ನು ಎದುರಿಸಲಿದ್ದಾರೆ. ಮತ್ತೊಂದು ಬಿ ಗುಂಪಿನ ಪಂದ್ಯದಲ್ಲಿ ಚೆನ್ ಥಾಯ್ಲೆಂಡ್‌ನ ರಚನೊಕ್ ಇಂತನಾನ್‌ರನ್ನು 21-18, 13-21, 21-18 ಗೇಮ್‌ಗಳ ಅಂತರದಿಂದ ಮಣಿಸಿದ್ದಾರೆ.

  22ರ ಹರೆಯದ ಸಿಂಧು ಅವರು ಯಮಗುಚಿ ವಿರುದ್ಧ ಪಂದ್ಯದ ಆರಂಭದಲ್ಲೇ 5-0 ಮುನ್ನಡೆ ಸಾಧಿಸಿ ಮೇಲುಗೈ ಸಾಧಿಸಿದರು. ಎರಡನೇ ಗೇಮ್‌ನ ಆರಂಭದಲ್ಲಿ ಯಮಗುಚಿ ತಿರುಗೇಟು ನೀಡಲು ಯತ್ನಿಸಿದರು. ಆದರೆ ಸಿಂಧು 10 ಅಂಕ ದಾಟಿದ ಬಳಿಕ ಯಮಗುಚಿ ಅಸಹಾಯಕರಾದರು. ಸಿಂಧು ಪಂದ್ಯದುದ್ದಕ್ಕೂ ಪ್ರಾಬಲ್ಯ ಸಾಧಿಸಿದರು.

  ಈ ಪಂದ್ಯಕ್ಕಿಂತ ಮೊದಲು ಸಿಂಧು ಅವರು ಯಮಗುಚಿ ವಿರುದ್ಧ 4-2 ಹೆಡ್-ಟು-ಹೆಡ್ ಗೆಲುವು-ಸೋಲಿನ ದಾಖಲೆ ಹೊಂದಿದ್ದರು. ಇದರಲ್ಲಿ ಕಳೆದ ತಿಂಗಳ ಹಾಂಕಾಂಗ್ ಓಪನ್ ಸರಣಿ ಗೆಲುವು ಸೇರಿದೆ.

 ಸಿಂಧು ಗ್ರೂಪ್ ಹಂತದ ಮೊದಲೆರಡು ಪಂದ್ಯಗಳನ್ನು ಜಯಿಸುವ ಮೂಲಕ ಈಗಾಗಲೇ ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಚೀನಾದ ಹೀ ಬಿಂಗ್‌ಜಾವೊ ವಿರುದ್ಧದ ಮೊದಲ ಪಂದ್ಯದಲ್ಲಿ 21-11, 16-21, 21-18 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದ್ದರು.

ಗುರುವಾರ ನಡೆದ ಎರಡನೇ ಪಂದ್ಯದಲ್ಲಿ ಜಪಾನ್‌ನ ಸಯಾಕಾ ಸಾಟೊ ಅವರನ್ನು 21-13, 21-12 ಅಂತರದಿಂದ ಸೋಲಿಸಿ ಸತತ ಎರಡನೇ ಗೆಲುವು ದಾಖಲಿಸಿದ್ದರು.

►ಶ್ರೀಕಾಂತ್‌ಗೆ ಸತತ 3ನೇ ಸೋಲು: ಶ್ರೀಕಾಂತ್ ಪುರುಷರ ಸಿಂಗಲ್ಸ್ ವಿಭಾಗದ ‘ಬಿ’ ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಚೀನಾದ ಆಲ್ ಇಂಗ್ಲೆಂಡ್ ಫೈನಲಿಸ್ಟ್ ಶಿ ಯೂಖಿ ವಿರುದ್ಧ 17-21,21-19, 14-21 ಅಂತರದಿಂದ ಸೋತಿದ್ದಾರೆ.

ಸತತ 3 ಪಂದ್ಯಗಳನ್ನು ಸೋತಿರುವ ಕೆ.ಶ್ರೀಕಾಂತ್ ಟೂರ್ನಿಯ ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದ್ದಾರೆ. ಚೀನಾದ ಯೂಖಿ ಅಜೇಯ ಗೆಲುವಿನ ದಾಖಲೆಯೊಂದಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಶ್ರೀಕಾಂತ್ ತನ್ನ ಮೊದಲ ಪಂದ್ಯದಲ್ಲಿ ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್‌ಸನ್ ವಿರುದ್ದ 13-21, 17-21 ಗೇಮ್‌ಗಳ ಅಂತರದಿಂದ ಸೋತಿದ್ದರು. ಎರಡನೇ ಪಂದ್ಯದಲ್ಲಿ ಚೌ ಟಿಯೆನ್ ಚೆನ್ ವಿರುದ್ಧ 18-21, 18-21 ಗೇಮ್‌ಗಳಿಂದ ಸೋತಿದ್ದು ಸೆಮಿಫೈನಲ್‌ಗೆ ತೇರ್ಗಡೆಯಾಗುವುದರಿಂದ ವಂಚಿತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X