Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶಾಖಪಟ್ಟಣದಲ್ಲಿ ವಿಶೇಷ ಮೈಲುಗಲ್ಲು...

ವಿಶಾಖಪಟ್ಟಣದಲ್ಲಿ ವಿಶೇಷ ಮೈಲುಗಲ್ಲು ತಲುಪುವ ವಿಶ್ವಾಸದಲ್ಲಿ ಎಂ.ಎಸ್.ಧೋನಿ

ವಾರ್ತಾಭಾರತಿವಾರ್ತಾಭಾರತಿ15 Dec 2017 11:55 PM IST
share
ವಿಶಾಖಪಟ್ಟಣದಲ್ಲಿ ವಿಶೇಷ ಮೈಲುಗಲ್ಲು ತಲುಪುವ ವಿಶ್ವಾಸದಲ್ಲಿ ಎಂ.ಎಸ್.ಧೋನಿ

ವಿಶಾಖಪಟ್ಟಣ, ಡಿ.15:ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ನೆಚ್ಚಿನ ವಿಶಾಖಪಟ್ಟಣ ಕ್ರಿಕೆಟ್ ಸ್ಟೇಡಿಯಂನಲ್ಲಿ ವಿಶೇಷ ಮೈಲುಗಲ್ಲು ತಲುಪುವ ವಿಶ್ವಾಸದಲ್ಲಿದ್ದಾರೆ.

 ಭಾರತ-ಶ್ರೀಲಂಕಾ ನಡುವೆ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ರವಿವಾರ ಇಲ್ಲಿ ನಡೆಯಲಿದ್ದು, ಧೋನಿಗೆ 10,000 ರನ್ ಪೂರೈಸಿದ ವಿಶ್ವದ ಎರಡನೇ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಎನಿಸಿಕೊಳ್ಳಲು ಇನ್ನು 102 ರನ್ ಅಗತ್ಯವಿದೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಶ್ರೀಲಂಕಾದ ಕುಮಾರ ಸಂಗಕ್ಕರ ಮಾತ್ರ 10,000ಕ್ಕೂ ಅಧಿಕ ರನ್ ಗಳಿಸಿದ ವಿಕೆಟ್‌ಕೀಪರ್ ಆಗಿದ್ದಾರೆ.

ಧೋನಿ 12 ವರ್ಷಗಳ ಹಿಂದೆ ವಿಶಾಖಪಟ್ಟಣ ಸ್ಟೇಡಿಯಂನಲ್ಲಿ ಪಾಕಿಸ್ತಾನದ ವಿರುದ್ಧ ಅಬ್ಬರದ ಬ್ಯಾಟಿಂಗ್ ಮಾಡಿ ಎಲ್ಲರ ಚಿತ್ತ ತನ್ನತ್ತ ಸೆಳೆದಿದ್ದರು.

ದೇಶೀಯ ಕ್ರಿಕೆಟ್‌ನಲ್ಲಿ ನೀಡಿದ ಉತ್ತಮ ಪ್ರದರ್ಶನ ಆಧಾರದಲ್ಲಿ 2004ರಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದ ಧೋನಿ ಬಾಂಗ್ಲಾದೇಶ ವಿರುದ್ಧ ಆಡಿದ್ದ ಚೊಚ್ಚಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಮುಂದಿನ 3 ಪಂದ್ಯಗಳಲ್ಲಿ 12, ಅಜೇಯ 7 ಹಾಗೂ 3 ರನ್ ಗಳಿಸಿದ್ದರು.

ವಿಶಾಖಪಟ್ಟಣದಲ್ಲಿ 2005ರ ಎಪ್ರಿಲ್ 5 ರಂದು ಪಾಕಿಸ್ತಾನ ವಿರುದ್ಧ ಆಡಿರುವ ತನ್ನ 5ನೇ ಏಕದಿನ ಪಂದ್ಯ ಧೋನಿಯ ವೃತ್ತಿಜೀವನಕ್ಕೆ ಹೊಸ ತಿರುವು ನೀಡಿತ್ತು. ಸಚಿನ್ ತೆಂಡುಲ್ಕರ್ ವಿಕೆಟ್ ಪತನಗೊಂಡ ನಂತರ 3ನೇ ಕ್ರಮಾಂಕದಲ್ಲಿ ಭಡ್ತಿ ಪಡೆದು ಬ್ಯಾಟಿಂಗ್‌ಗೆ ಇಳಿದಿದ್ದ ಧೋನಿ ಕೇವಲ 123 ಎಸೆತಗಳಲ್ಲಿ 15 ಬೌಂಡರಿ ಹಾಗೂ 4 ಸಿಕ್ಸರ್‌ಗಳನ್ನು ಒಳಗೊಂಡ 148 ರನ್ ಗಳಿಸಿದ್ದರು. 9 ವಿಕೆಟ್‌ಗೆ 356 ರನ್ ಗಳಿಸಿದ್ದ ಭಾರತ ಆ ಪಂದ್ಯವನ್ನು 58 ರನ್‌ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದ ಮೂಲಕ ಭಾರತದ ಕ್ರಿಕೆಟ್‌ನಲ್ಲಿ ಸೂಪರ್‌ಸ್ಟಾರ್ ಆಟಗಾರನೊಬ್ಬ ಮೂಡಿಬಂದಿದ್ದ.

ಐಸಿಸಿ ಆಯೋಜಿಸುವ ಎಲ್ಲ 3 ಪ್ರಮುಖ ಟೂರ್ನಿಗಳನ್ನು ಜಯಿಸಿರುವ ಏಕೈಕ ನಾಯಕ ಧೋನಿ ಈಗ ಮಾಜಿ ನಾಯಕನಾಗಿದ್ದಾರೆ. ಪ್ರಸ್ತುತ ಸರಣಿಯಲ್ಲಿ ಧರ್ಮಶಾಲಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ 65 ರನ್ ಗಳಿಸಿ ಟೀಕಾಕಾರರ ಬಾಯಿ ಮುಚ್ಚಿಸಿರುವ ಧೋನಿಗೆ ವಿಶಾಖಪಟ್ಟಣದಲ್ಲಿ 12 ವರ್ಷಗಳ ಹಿಂದಿನ ಮ್ಯಾಜಿಕ್ ಪುನರಾವರ್ತಿಸಲು ಉತ್ತಮ ಅವಕಾಶ ಒದಗಿಬಂದಿದೆ.

ಏಕದಿನದಲ್ಲಿ 10,000 ರನ್ ಪೂರೈಸುವ ಜೊತೆಗೆ ಭಾರತಕ್ಕೆ ಏಕದಿನ ಸರಣಿಯನ್ನು ಗೆದ್ದುಕೊಡುವ ಅವಕಾಶವೂ ಧೋನಿ ಮುಂದಿದೆ. ಈ ಮೂಲಕ 2019ರ ವಿಶ್ವಕಪ್ ತನಕ ಟೀಕಾಕಾರರ ಬಾಯಿ ಮುಚ್ಚಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X