Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಡಿ: ಬ್ಯಾರೀಸ್ ಶಿಕ್ಷಣ ಸಂಸ್ಥೆಯ 111ನೆ...

ಕೋಡಿ: ಬ್ಯಾರೀಸ್ ಶಿಕ್ಷಣ ಸಂಸ್ಥೆಯ 111ನೆ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ16 Dec 2017 8:00 PM IST
share
ಕೋಡಿ: ಬ್ಯಾರೀಸ್ ಶಿಕ್ಷಣ ಸಂಸ್ಥೆಯ 111ನೆ ವಾರ್ಷಿಕೋತ್ಸವ

ಕುಂದಾಪುರ, ಡಿ.16: ಕೋಡಿ ಬೀಚ್ ರಸ್ತೆಯ ಬ್ಯಾರೀಸ್ ನಾಲೆಜ್ ಕ್ಯಾಂಪಸ್‌ನಲ್ಲಿ ಶನಿವಾರ ಆಯೋಜಿಸಲಾದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 111ನೆ ವಾರ್ಷಿಕ ಸಮಾರಂಭದಲ್ಲಿ 111ನೆ ವರ್ಷದ ಲಾಂಛನವನ್ನು ರಾಜ್ಯ ನಗರಾಭಿ ವೃದ್ಧಿ ಮತ್ತು ಹಜ್ ಸಚಿವ ರೋಶನ್ ಬೇಗ್ ಅನಾವರಣಗೊಳಿಸಿದರು.

 ಬಳಿಕ ಮಾತನಾಡಿದ ಅವರು ಜನರಿಂದ ಲಕ್ಷಾಂತರ ರೂ. ಹಣ ವಸೂಲಿ ಮಾಡುವ ಮೂಲಕ ಶಿಕ್ಷಣವನ್ನು ವ್ಯಾಪರೀಕರಣ ಮಾಡಲಾಗಿದೆ. ಆದರೆ ಬ್ಯಾರೀಸ್ ಶಿಕ್ಷಣ ಸಂಸ್ಥೆಯು ಯಾವುದೇ ಡೊನೆಶನ್ ಇಲ್ಲದೆ ಬಡವರಿಗೆ ಶಿಕ್ಷಣ ನೀಡಬೇಕೆಂಬ ಸಾಮಾಜಿಕ ಬದ್ಧತೆ ಯೊಂದಿಗೆ ಈ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಅವರು ತಿಳಿಸಿದರು.

ಪೋಷಕರು ಮಕ್ಕಳಿಗೆ ವಿನಾಕಾರಣ ಹೊಡೆಯಬಾರದು. ಅವರಿಗೆ ಪ್ರೀತಿ ತೋರಿಸಿ ಅವರ ಜೊತೆ ಬೆರೆಯುವ ಕೆಲಸ ಮಾಡಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ, ಕೆಲಸಕ್ಕೆ ಕಳುಹಿಸಿ ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಿದರೆ ಅವರು ತಮ್ಮ ಭವಿಷ್ಯ ವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಬ್ಯಾರೀಸ್ ಸಂಸ್ಥೆಯು ಅದ್ಭುತ ಸಾಧನೆಯನ್ನು ಮಾಡಿದೆ. ಇದಕ್ಕೆ ದೇವರ ಅನುಗ್ರಹವೇ ಕಾರಣ. ಹಣ ಇಲ್ಲ ಎಂಬ ಕಾರಣಕ್ಕೆ ಬಡವರು ಶಿಕ್ಷಣದಿಂದ ವಂಚಿತರಾಗಬಾರದು. ಬ್ಯಾರೀಸ್ ಸಂಸ್ಥೆಯಲ್ಲಿ ದುಡ್ಡಿನ ಮುಖಕ್ಕಿಂತ ಮಾನವೀಯ ಮುಖಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ ಎಂದು ಹೇಳಿದರು.

ಮುಸ್ಲಿಮರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಬಹಳ ಪ್ರಾಮುಖ್ಯತೆ ನೀಡಬೇಕು. ಅವರನ್ನು ಶಿಕ್ಷಣ ದಿಂದ ವಂಚಿತರನ್ನಾಗಿಸುವ ಕೆಲಸ ಮಾಡಬಾರದು ಎಂದ ಅವರು, ಉಡುಪಿ ನಗರಸಭೆ ಮತ್ತು ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗೆ ಜನವರಿ ತಿಂಗಳೊಳಗೆ ಚಾಲನೆ ನೀಡುವ ಕಾರ್ಯ ಮಾಡಲಾಗುವುದು ಎಂದರು.

ಶಾಲೆಯ ಕ್ರೀಡಾಂಗಣಗಳನ್ನು ಇಲಾಖೆಯ ಹೆಸರಿಗೆ ಮಾಡಿದರೆ ಅನುದಾನ ಒದಗಿಸಲಾಗುವುದು ಎಂಬ ಫರ್ಮಾನು ಹೊರಡಿಸಿದ ಪರಿಣಾಮ ರಾಜ್ಯದಲ್ಲಿ ಈವರೆಗೆ ಇದ್ದ ಇಲಾಖೆಯ ಆಸ್ತಿಯು 2000 ಎಕರೆಯಿಂದ 2500 ಎಕರೆಗೆ ಏರಿಕೆಯಾಗಿದೆ ಎಂದು ಅವರು ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ರಿಜಿಸ್ಟ್ರಾರ್ ಡಾ.ಎ.ಎಂ.ಖಾನ್, ಮುಂಬೈ ಸ್ಟಾರ್ ಟಿವಿಯ ಉಪಾಧ್ಯಕ್ಷ ಹಾಗೂ ಆಡಳಿತಾ ಧಿಕಾರಿ ಗಣೇಶ್ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು. ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣಸಂಸ್ಥೆಗಳ ಅಧ್ಯಕ್ಷ ಹಾಜಿ ಮಾಸ್ಟರ್ ಮಹಮೂದ್ ವಹಿಸಿದ್ದರು.

ಪುರಸಭೆ ಸದಸ್ಯರಾದ ಪ್ರಭಾಕರ್ ಶೇರಿಗಾರ್, ಜ್ಯೋತಿ ಉಪಸ್ಥಿತರಿದ್ದರು.

ಪ್ರೌಢಶಾಲೆಯ ಜಯಶೀಲ ಶೆಟ್ಟಿ ಹಾಗೂ ಡಿಎಡ್ ಕಾಲೇಜಿನ ಫಿದೌಸ್ ವರದಿ ವಾಚನ ಮಾಡಿದರು. ವಿದ್ಯಾರ್ಥಿ ಪೋಷಕ ಶಿವಾನಂದ ಜುಮ್ಮಣ್ಣನವರ್ ಅನಿಸಿಕೆ ವ್ಯಕ್ತಪಡಿಸಿದರು. ಕ್ರೀಡಾ ಸಾಧಕ ವಿದ್ಯಾರ್ಥಿ ಮುಹಮ್ಮದ್ ಅಝೀಝ್ ಗುಲ್ವಾಡಿ ಅವರನ್ನು ಸನ್ಮಾನಿಸಲಾಯಿತು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸೈಯದ್ ಮುಹಮ್ಮದ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಉಪನ್ಯಾಸಕ ಸಂದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.

ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ವಂದಿಸಿದರು. ಶ್ರೀಲಕ್ಷ್ಮೀ ಹಾಗೂ ಪರಾಝ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X