Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಲು ಮರದ ತಿಮ್ಮಕ್ಕನ ಹೆಸರಲ್ಲಿ ಸರಕಾರಿ...

ಸಾಲು ಮರದ ತಿಮ್ಮಕ್ಕನ ಹೆಸರಲ್ಲಿ ಸರಕಾರಿ ನರ್ಸರಿ: ಎಚ್.ಆಂಜನೇಯ

ವಾರ್ತಾಭಾರತಿವಾರ್ತಾಭಾರತಿ16 Dec 2017 9:08 PM IST
share
ಸಾಲು ಮರದ ತಿಮ್ಮಕ್ಕನ ಹೆಸರಲ್ಲಿ ಸರಕಾರಿ ನರ್ಸರಿ: ಎಚ್.ಆಂಜನೇಯ

ಬೆಂಗಳೂರು, ಡಿ. 16: ಸಾಲುಮರದ ತಿಮ್ಮಕ್ಕ ಅವರಿಗೆ 5 ಎಕರೆ ಜಮೀನು ಮಂಜೂರು ಮಾಡಿ, ಅಲ್ಲೆ ಸರಕಾರಿ ನರ್ಸರಿ, ಮನೆ ನಿರ್ಮಿಸಿ ಕೊಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಶನಿವಾರ ಇಲ್ಲಿನ ವಸಂತನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಷನ್ ಆಶ್ರಯದಲ್ಲಿ ಏರ್ಪಡಿಸಿದ್ದ ಸಾಲುಮರದ ತಿಮ್ಮಕ್ಕರಿಗೆ ಅಭಿನಂದನಾ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಬೆಂಗಳೂರು ಸುತ್ತಮುತ್ತ ಭೂಮಿ ಮಂಜೂರಿಗೆ ಕಾಲಾವಕಾಶ ಬೇಕಾಗುತ್ತದೆ. ಇಲ್ಲಿ ಭೂಮಿ ಬೆಲೆ ದುಬಾರಿಯಾಗಿದೆ ಎಂದ ಅವರು, ಒಂದು ವೇಳೆ ಸಾಲುಮರದ ತಿಮ್ಮಕ್ಕ ಅವರು ಚಿತ್ರದುರ್ಗ ಅಥವಾ ಇನ್ಯಾವುದೇ ಭಾಗದಲ್ಲಿ ಭೂಮಿ ಬಯಸಿದರೆ 5 ಎಕರೆ ಅಲ್ಲ, 10 ಎಕರೆಯನ್ನು ನೀಡಲು ಸಿದ್ಧವಿದ್ದೇವೆ. ಇದರ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸಲಿದೆ. ಆದರೆ ಬೆಂಗಳೂರಿನ ಸುತ್ತಮುತ್ತ ಭೂಮಿ ನೀಡಲು ಕಾಲಾವಕಾಶ ಹಿಡಿಯಲಿದೆ ಎಂದು ತಿಳಿಸಿದರು.

ಪರಿಸರಕ್ಕಾಗಿ ಸಾಲು ಮರದ ತಿಮ್ಮಕ್ಕ ಅಪಾರ ಕೊಡುಗೆ ನೀಡಿದ್ದಾರೆ. ಇಂದಿನ ಯುವ ಪೀಳಿಗೆಗೆ ಇಂತಹ ಯಾವುದೆ ಕಾಳಜಿ ಇಲ್ಲ. ತಿಮ್ಮಕ್ಕ ಅವರು ತಮ್ಮ ಜೀವನವನ್ನೇ ಇದಕ್ಕಾಗಿ ಮುಡುಪಾಗಿಟ್ಟಿದ್ದಾರೆ. ಇದನ್ನು ಸ್ಮರಿಸಬೇಕು. ಈಗಾಗಲೇ ತಿಮ್ಮಕ್ಕ ಅವರ ಸಮಸ್ಯೆಗಳಿಗೆ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದೇವೆ. ಇನ್ನಷ್ಟು ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹಾಗಾಗಿ ನಾವು ಅಗತ್ಯವಾದ ಎಲ್ಲ ಕ್ರಮಗಳನ್ನು ವಹಿಸಲಿದ್ದೇವೆ ಎಂದು ಆಂಜನೇಯ ತಿಳಿಸಿದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಸಾಹಿತಿ ನಿಸಾರ್ ಅಹಮ್ಮದ್ ಅವರು ತಿಮ್ಮಕ್ಕ ಅವರಿಗೆ ನ್ಯಾಷನಲ್ ಗ್ರೀನರಿ-2017 ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಜಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ವಿಶ್ವ ಸಂತೋಷ ಭಾರತಿ ಸ್ವಾಮಿ, ಸೋಮಶೇಖರ ಶಿವಾಚಾರ್ಯ ಸ್ವಾಮಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿ, ಶರಣ ಡಾ.ಈಶ್ವರ ಮಂಟೂರ ಸ್ವಾಮಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್, ಪತ್ರಕರ್ತ ಶಿವಾನಂದ ತಗಡೂರು, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ನಾಗಾಂಬಿಕ ದೇವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಿಮ್ಮಕ್ಕ ಅವರಿಗೆ ಪದೇ ಪದೇ ಅನಾರೋಗ್ಯ ಕಾಡುತ್ತಿದೆ. ಅವರ ಚಿಕಿತ್ಸೆಗಾಗಿಯೇ ಅವರಿಗೆ ಸಂದಿದ್ದ ಚಿನ್ನದ ಪದಕ ಸೇರಿ ಅನೇಕ ಪ್ರಶಸ್ತಿಗಳನ್ನು ಮಾರಾಟ ಮಾಡಿದ್ದಾರೆ. ಸರಕಾರಗಳು ಕ್ರೀಡಾಪಟುಗಳಿಗೆ ಕೋಟ್ಯಂತರ ರೂ.ನೀಡುತ್ತವೆ. ಆದರೆ, ಪರಿಸರಕ್ಕಾಗಿ ಜೀವನವನ್ನೇ ಮೀಸಲಿರಿಸಿದ ತಿಮ್ಮಕ್ಕ ಅವರಿಗೆ ಸೂಕ್ತ ಸೌಲಭ್ಯ ನೀಡಲು ಹಿಂದೇಟು ಹಾಕುತ್ತಿವೆ. ಆಸ್ಪತ್ರೆ ವೆಚ್ಚ ಸೇರಿದಂತೆ ಮನೆ, ಇನ್ನಿತರ ಸೌಲಭ್ಯವಿಲ್ಲ. ಸರಕಾರ ಕೂಡಲೇ ಇದಕ್ಕೆ ಸ್ಪಂದಿಸಬೇಕು.

-ಡಾ.ಉಮೇಶ್, ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಷನ್ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X