Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕೀಯ ಪಕ್ಷಗಳಿಗೆ ಬುದ್ಧಿ ಕಲಿಸಲು...

ರಾಜಕೀಯ ಪಕ್ಷಗಳಿಗೆ ಬುದ್ಧಿ ಕಲಿಸಲು ರಾಜ್ಯದ ದಲಿತರು ಒಗ್ಗೂಡಬೇಕು : ಚಂದ್ರಕಾಂತ್ ಕರೆ

ವಾರ್ತಾಭಾರತಿವಾರ್ತಾಭಾರತಿ16 Dec 2017 11:30 PM IST
share
ರಾಜಕೀಯ ಪಕ್ಷಗಳಿಗೆ ಬುದ್ಧಿ ಕಲಿಸಲು ರಾಜ್ಯದ ದಲಿತರು ಒಗ್ಗೂಡಬೇಕು : ಚಂದ್ರಕಾಂತ್ ಕರೆ

ಕಡೂರು, ಡಿ.16: ಕಡೂರು ದಲಿತರ ಮತಗಳನ್ನು ಪಡೆದು ದಲಿತರನ್ನೇ ತುಳಿಯುತ್ತಾ ಬರುತ್ತಿರುವ ರಾಜಕೀಯ ಪಕ್ಷಗಳಿಗೆ ಬುದ್ಧಿ ಕಲಿಸಲು ರಾಜ್ಯದ ಎಲ್ಲ ದಲಿತರು ಒಗ್ಗೂಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಚಂದ್ರಕಾಂತ್ ಎಸ್. ಕಾದ್ರೋಳಿ ಕರೆ ನೀಡಿದ್ದಾರೆ.

ಅವರು ಕಡೂರು ಪಟ್ಟಣದ ಬನಶಂಕರಿ ಸಮುದಾಯ ಭವನದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್‌ರವರ 61ನೇ ಪರಿನಿರ್ವಾಣ ದಿನದ ಅಂಗವಾಗಿ ನಡೆದ ಬೃಹತ್ ಜಾಗೃತಿ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿರು ಸುಮಾರು 1.50 ಕೋಟಿ ದಲಿತರು ಶೋಷಿತರಾಗಿಯೇ ಉಳಿದಿದ್ದು, ಮೇಲ್ವರ್ಗದವರು ಶೋಷಿತ ಸಮುದಾಯಗಳನ್ನು ಶೋಷಿಸುತ್ತಲೇ ಬರುತ್ತಿದ್ದಾರೆ. ದಲಿತರ ಉದ್ದಾರಕ್ಕಾಗಿ ನಾವಿದ್ದೇವೆ ಎಂದು ಬೊಗಳೆ ಬಿಡುವ ಬಿಜೆಪಿ, ಜೆಡಿಎಸ್ ಹಾಗು ಕಾಂಗ್ರೆಸ್ ಪಕ್ಷಗಳು ದಲಿತರನ್ನು ಮತ ಬ್ಯಾಂಕಿಗಾಗಿ ಮೀಸಲಿಟ್ಟುಕೊಂಡವೇ ಹೊರತು ದಲಿತರ ಉದಾರಕ್ಕಾಗಿ ಏನನ್ನೂ ಮಾಡಲಿಲ್ಲ ಎಂದು ಆರೋಪಿಸಿದರು.

ದಲಿತರ ಮನೆಯಲ್ಲಿ ಊಟ ಮಾಡಿ ಪ್ರಚಾರ ಗಿಟ್ಟಿಸಿದ ಯಡಿಯೂರಪ್ಪ ಅವರ ಸರಕಾರವಿದ್ದಾಗಲೇ ದಲಿತೋದ್ದಾರಕ್ಕಾಗಿ ಯಾವ ಕಾರ್ಯಕ್ರಮವೂ ರೂಪಿಸಲಿಲ್ಲ. ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮಕ್ಕೆ 25 ಸಾವಿರ ದಲಿತರನ್ನು ಕರೆದೊಯ್ದರೂ ಕೂಡ ದಲಿತರು ಹಾಗೂ ದಲಿತ ಮುಖಂಡರನ್ನು ಮಾತನಾಡಿಸುವ ಸೌಜನ್ಯವನ್ನೂ ತೋರದ ಯಡಿಯೂರಪ್ಪರಿಂದ ಯಾವ ದಲಿತೋದ್ಧಾರ ಸಾಧ್ಯ ಎಂದು ಪ್ರಶ್ನಿಸಿದರು.

ಮಹಾನ್ ನಾಯಕ ಡಾ ಬಿ.ಆರ್. ಅಂಬೇಡ್ಕರ್ ನಮಗೆ ನೀಡಿರುವ ಶಕ್ತಿಯಿಂದ ಇಂತಹ ವೇದಿಕೆ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ. ಈ ನಿಟ್ಟಲ್ಲಿ ದಲಿತರ ಮುಂದಿನ ಪೀಳಿಗೆ ಎಲ್ಲ ರೀತಿಯ ಅವಕಾಶ ಪಡೆಯಲು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಆಗ ಮಾತ್ರ ದಲಿತರ ಉದ್ದಾರ ಸಾಧ್ಯ ಎಂದರು.
ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವಸಂತ ಕುಮಾರಿ ಮಾತನಾಡಿ, ಶೊಷಿತ ಸಮುದಾಯಗಳಲ್ಲಿರುವ ಮಹಿಳೆಯರು ಸಂಘಟನೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಹೆಣ್ಣು ಸಾಧಿಸುವ ಛಲ ಹೊಂದಿದಲ್ಲಿ ಏನಾದರೂ ಸಾಧಿಸಬಹುದು. ಎಂಬುದಕ್ಕೆ ಇತಿಹಾಸಗಳಲ್ಲಿನ ನಿದರ್ಶನಗಳೇ ಸಾಕ್ಷಿಯಾಗಿದೆ. ಈ ನಿಟ್ಟಲ್ಲಿ ರಾಜ್ಯಾದ್ಯಂತ ಮಹಿಳೆಯರನ್ನು ಹೋರಾಟದ ಸಂಘಟನೆಗೆ ತರಲಾಗುತ್ತಿದೆ ಎಂದರು.

ಸಮಾವೇಶವನ್ನು ರಾಜ್ಯ ಕಾರ್ಯದರ್ಶಿ ಎಸ್.ಆನಂದ್ ಉಧ್ಘಾಟಿಸಿ, ಅಂಬೇಡ್ಕರ್ ಹೇಳಿರುವಂತೆ ಶೋಷಿತರು ನೀರಿನಲ್ಲಿ ಕೊಚ್ಚಿ ಹೋಗುವ ಮಣ್ಣಿನಂತಾಗಬಾರದು ಕಿಚ್ಚನ್ನು ಹೋರಾಟವಾಗಿ ರೂಪಿಸಬೇಕು ಎಂದಿದ್ದಾರೆ. ದಲಿತೋದ್ಧಾರಕ್ಕೆ ಕೇವಲ ಬಾಯಿ ಮಾತಿನಲ್ಲಿ ಹೇಳದರೆ, ಸಾಲದು ಕಾರ್ಯರೂಪಕ್ಕೆ ಬರಲು ಸಂಘಟಿತರಾಗಬೇಕು ಎಂದರು.
ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಜಿತೇಂದ್ರ ಬಾಬು, ಜಿಲ್ಲಾ ಮಹಿಳಾಧ್ಯಕ್ಷೆ ನಾಝಿಯಾ ಬೇಗಂ, ಬಿ.ಎನ್. ನಾಗಮ್ಮ, ಅಂಜಿ ಸಿದ್ದಾರ್ಥನಗರ, ಮಾರ್ತಾಂಡಪ್ಪ ಹಾದಿಮನಿ, ಬಿ.ಆರ್. ನಾರಾಯಣ. ತಿರುಕಪ್ಪ, ಬಸವರಾಜ ಮಾರಡಗಿ, ನಿರ್ಮಲ, ಜಯಮ್ಮ, ರುಕ್ಮಿಣಿ, ಸುಮನ್ ಗಿರೀಶ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X