Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರವಾದಿ ಸಂದೇಶ ಎಲ್ಲಾ ಧರ್ಮದವರಿಗೂ...

ಪ್ರವಾದಿ ಸಂದೇಶ ಎಲ್ಲಾ ಧರ್ಮದವರಿಗೂ ಅನುಕರಣೀಯ: ಆಲ್ಬನ್ ರೊಡ್ರಿಗಸ್

ಸೀರತ್ ಸೌಹಾರ್ದ ಕೂಟ

ವಾರ್ತಾಭಾರತಿವಾರ್ತಾಭಾರತಿ17 Dec 2017 8:09 PM IST
share
ಪ್ರವಾದಿ ಸಂದೇಶ ಎಲ್ಲಾ ಧರ್ಮದವರಿಗೂ ಅನುಕರಣೀಯ: ಆಲ್ಬನ್ ರೊಡ್ರಿಗಸ್

ಕಾಪು, ಡಿ. 17: ಪ್ರವಾದಿ ಮಹಮ್ಮದ್‌ರ ಸಂದೇಶ, ತತ್ವ, ಪ್ರತಿಪಾದನೆ ಮತ್ತು ಆದರ್ಶಗಳು ಎಲ್ಲಾ ಧರ್ಮದವರಿಗೂ ಅನುಕರಣೀಯವಾಗಿದೆ. ಅದನ್ನು ಪ್ರತಿಯೋರ್ವರು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದು ಅವಶ್ಯಕತೆತಯಾಗಿದೆ ಎಂದು ದಂಡ ತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ಅಭಿಪ್ರಾಯಪಟ್ಟರು.

ಅವರು ರವಿವಾರ ಜಮಾಅತೆ ಇಸ್ಲಾಮೀ ಹಿಂದ್ ಕಾಪು ಇವರ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಅವರ ಹುಟ್ಟಿದ ತಿಂಗಳ ಪ್ರಯುಕ್ತ ಕಾಪು ಸ್ಟೇಟ್ ಬ್ಯಾಂಕ್‌ನ ಬಳಿಯ ಹೀರಾ ಕಾಂಪ್ಲೆಕ್ಸ್‌ನಲ್ಲಿ ಜರಗಿದ ಸೀರತ್ ಸೌಹಾರ್ದ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜಸೇವಕ ಸುರೇಶ್ ಪಿ. ಶೆಟ್ಟಿ ಗುರ್ಮೆ ಮಾತನಾಡಿ, ಪರಸ್ಪರ ಅಪನಂಬಿಕೆ ದೂರವಾಗಿ ಸಮಾಜದಲ್ಲಿ ಸರ್ವ ಧರ್ಮೀಯರೂ ಒಂದಾಗಿ ಬಾಳುವುದು ಇಂದಿನ ಅವಶ್ಯಕತೆ ಮತ್ತು ಅನಿವಾರ್ಯತೆಯಾಗಿದೆ. ಸೌಹಾರ್ದ ಕಾರ್ಯಕ್ರಮಗಳ ಮೂಲಕವಾಗಿ ಸಮಾಜವನ್ನು ಕಟ್ಟುವ ಮತ್ತು ಪರಸ್ಪರ ಮನಸ್ಸುಗಳನ್ನು ಒಂದಾಗಿಸುವ ಕಾರ್ಯ ನಡೆಯುತ್ತಿದ್ದು, ಇದಕ್ಕೆ ಎಲ್ಲರೂ ಕೈ ಜೋಡಿಸಬೇಕು. ಜಮಾಅತೆ ಇಸ್ಲಾಮೀ ಹಿಂದ್‌ನ ಈ ಕಾರ್ಯಕ್ರಮ ಅಭಿನಂದನಾರ್ಹವಾಗಿದೆ ಎಂದರು.

ಮಲ್ಪೆ ಮಸ್ಜಿದ್‌ನ ಧರ್ಮಗುರು ಮೌಲಾನಾ ಇಮ್ರಾನುಲ್ಲಾ ಖಾನ್ ಮನ್ಸೂರಿ ಮಾತನಾಡಿ, ಮನುಷ್ಯ, ಜಾತಿ ಮತ್ತು ಧರ್ಮವನ್ನು ಬಲವಂತವಾಗಿ ಬದಲಾಯಿಸುವುದಕ್ಕೆ ಯಾವುದೇ ಧರ್ಮದಲ್ಲೂ ಅವಕಾಶವಿಲ್ಲ. ಬಲವಂತದ ಮತಾಂತರಕ್ಕೆ ಇಸ್ಲಾಂನಲ್ಲಿ ಯಾವತ್ತೂ ಕೂಡಾ ಬೆಂಬಲವಿಲ್ಲ. ಇಸ್ಲಾಂ ಮತ್ತು ಪ್ರವಾದಿಯ ಬಗ್ಗೆ ಇತರರಲ್ಲಿ ಇರುವ ಸಂಶಯ ಪ್ರವೃತ್ತಿಯನ್ನು ನಿವಾರಣೆಗೊಳಿಸುವ ಕಾರ್ಯ ನಮ್ಮಿಂದ ನಡೆಯಬೇಕಿದೆ ಎಂದರು.

ಜಮಾಅತೆ ಇಸ್ಲಾಮೀ ಹಿಂದ್‌ನ ರಾಜ್ಯ ಸಲಹಾ ಸಮಿತಿ ಸದಸ್ಯ ಅಕ್ಬರ್ ಅಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಲಿತ ಸಂಘರ್ಷ ಸಮಿತಿಯ ಉಚ್ಚಿಲ ಸಮಿತಿಯ ಅಧ್ಯಕ್ಷ ದಿನಕರ ಉಚ್ಚಿಲ, ಗಣ್ಯರಾದ ಶಭೀ ಅಹ್ಮದ್ ಕಾಝಿ., ಕಾಪು ಪುರಸಭೆ ಉಪಾಧ್ಯಕ್ಷ ಕೆ. ಎಚ್. ಉಸ್ಮಾನ್, ಅರುಣ್ ಶೆಟ್ಟಿ ಪಾದೂರು, ಮೋಹಿನಿ ಶೆಟ್ಟಿ, ಶಾಬು ಸಾಹೇಬ್ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಜೇಸಿಐನ ವಲಯಾಧ್ಯಕ್ಷರಾಗಿ ಆಯ್ಕೆಯಾದ ಪತ್ರಕರ್ತ ರಾಕೇಶ್ ಕುಂಜೂರು ಅವರನ್ನು ಸಮ್ಮಾನಿಸಲಾಯಿತು. ಜಮಾಅತೆ ಇಸ್ಲಾಮಿ ಹಿಂದ್‌ನ ಕಾಪು ಸ್ಥಾನೀಯ ಅಧ್ಯಕ್ಷ ಅನ್ವರ್ ಅಲಿ ಸ್ವಾಗತಿಸಿದರು. ಎಸ್.ಐ.ಒ. ಎಸೋಸಿಯೇಟ್ ಆಲೆ ರಸೂಲ್ ಕರ್‌ಆನ್ ಪಠಿಸಿದರು. ಜಮಾತೆ ಇಸ್ಲಾಮಿ ಹಿಂದ್‌ನ ಸದಸ್ಯ ನಿಸಾರ್ ಅಹಮದ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X