Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾನೂನಿನಲ್ಲಿ ಸಾಹಿತ್ಯದ ಕೊರತೆಯಿದೆ:...

ಕಾನೂನಿನಲ್ಲಿ ಸಾಹಿತ್ಯದ ಕೊರತೆಯಿದೆ: ಸಿ.ಎಚ್.ಹನುಮಂತರಾಯ

ವಾರ್ತಾಭಾರತಿವಾರ್ತಾಭಾರತಿ17 Dec 2017 8:17 PM IST
share

ಬೆಂಗಳೂರು, ಡಿ.17: ಕಾನೂನಿನಲ್ಲಿ ಸಾಹಿತ್ಯ ಸಿಂಚನದ ಕೊರತೆಯಿದ್ದು ಸಾರ್ವಜನಿಕ ಅಭಿಪ್ರಾಯಗಳನ್ನು ಆಧರಿಸಿ ರೂಪಿಸಲಾದ ಕಾನೂನುಗಳು ಭಾರತದಲ್ಲಿ ಕಡಿಮೆ ಎಂದು ವಕೀಲ ಸಿ.ಎಚ್.ಹನುಮಂತರಾಯ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದಲ್ಲಿ ಬೆಂಗಳೂರು ವಕೀಲರ ಸಾಹಿತ್ಯ ಕೂಟದ ವತಿಯಿಂದ ಆಯೋಜಿಸಿದ್ದ ಕಾನೂನು ಮತ್ತು ಸಾಹಿತ್ಯ ಕುರಿತಾದ ಉಪನ್ಯಾಸದಲ್ಲಿ, ಭಾರತದಲ್ಲಿ ಕಾನೂನುಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯ ವ್ಯಕ್ತವಾಗುತ್ತವೆಯೇ ಹೊರತು ಸಾರ್ವಜನಿಕ ಅಭಿಪ್ರಾಯಗಳಿಂದ ಕಾನೂನು ರೂಪುಗೊಂಡ ಉದಾಹರಣೆಗಳು ವಿರಳ ಎಂದರು.

ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ರೂಪಿಸುವಾಗ ಶಾಸಕ ಮುಕ್ಕಣ್ಣಪ್ಪ ಸಾಹಿತಿ ಕೆ.ಶಿವರಾಮ ಕಾರಂತರ ಚೋಮನದುಡಿ ಕಾದಂಬರಿಯನ್ನು ಆಧಾರವಾಗಿ ಇಟ್ಟುಕೊಂಡು ವಿಧಾನಸಭೆಯಲ್ಲಿ ಮೂರು ದಿವಸ ಮಾತನಾಡಿದ್ದರು. ಅಂತೆಯೇ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ತಡೆ ಕಾಯ್ದೆ ರೂಪಿಸುವಾಗ ದೇವನೂರು ಮಹದೇವ ಅವರ ಒಡಲಾಳ ಕೃತಿಯನ್ನೂ ಸದನದಲ್ಲಿ ಚರ್ಚಿಸಲಾಗಿತ್ತು ಎಂದರು.

ಸಾಹಿತ್ಯ ಎಂದರೆ ಸಂವೇದನೆಗಳ ಕಣಜ. ಅವುಗಳಲ್ಲಿ ಕರ್ತೃ ತನ್ನ ಅನುಭವಕ್ಕೆ ಬಂದ ವೇದನೆ, ಹಿಂಸೆ, ಕ್ಲೀಷೆಗಳನ್ನು ಹಿಡಿದಿಡುತ್ತಾನೆ. ವಕೀಲರು ವಾರದಲ್ಲಿ ಒಂದು ದಿನವಾದರೂ ಕಾನೂನು ಪುಸ್ತಕಗಳನ್ನು ಬಿಟ್ಟು ಸಾಹಿತ್ಯ ಕೃತಿಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ವಾದ ಮಂಡನೆ ಮತ್ತು ಪ್ರಕರಣಗಳ ಕರಡು ತಯಾರಿಕೆಯಲ್ಲಿ ಸಾಹಿತ್ಯ ಬಳಕೆಗೆ ಆದ್ಯತೆ ನೀಡಬೇಕು ಎಂದರು.

ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಮಾತನಾಡಿ, ಇಂಗ್ಲಿಷ್‌ನಲ್ಲಿರುವ ಕಾನೂನು ಪುಸ್ತಕಗಳನ್ನು ಕನ್ನಡ್ಕಕೆ ಭಾಷಾಂತರ ಮಾಡುವಾಗ ಎಚ್ಚರಿಕೆ ವಹಿಸಬೇಕು. ಅರ್ಥ ನಿಖರವಾಗಿರಬೇಕು. ಇಲ್ಲದಿದ್ದರೆ ಅನರ್ಥವಾಗುವುದೇ ಹೆಚ್ಚು ಎಂದರು.

ಕನ್ನಡ ಸಾಹಿತ್ಯ ಲೋಕದಲ್ಲಿ ಕಾನೂನು ಪುಸ್ತಕಗಳ ಕೊರತೆಯಿದೆ. ಅನುವಾದಗಳೂ ಕಡಿಮೆ ಇವೆ. ಈ ದಿಸೆಯಲ್ಲಿ ವಕೀಲರು ಹೆಚ್ಚು ಹೆಚ್ಚು ಅಧ್ಯಯನಶೀಲರಾಗಬೇಕು ಎಂದು ಆಶಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X