Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನನ್ನು ಅಕ್ರಮವಾಗಿ ಮತಾಂತರಿಸಲಾಗಿದೆ...

ತನ್ನನ್ನು ಅಕ್ರಮವಾಗಿ ಮತಾಂತರಿಸಲಾಗಿದೆ ಎಂದು ಆರೋಪಿಸಿದ್ದವ ಬಜರಂಗದಳ ಕಾರ್ಯಕರ್ತ!

ವಾರ್ತಾಭಾರತಿವಾರ್ತಾಭಾರತಿ17 Dec 2017 9:44 PM IST
share
ತನ್ನನ್ನು ಅಕ್ರಮವಾಗಿ ಮತಾಂತರಿಸಲಾಗಿದೆ ಎಂದು ಆರೋಪಿಸಿದ್ದವ ಬಜರಂಗದಳ ಕಾರ್ಯಕರ್ತ!

ಭೋಪಾಲ,ಡಿ.17: ಕ್ರೈಸ್ತರ ಗುಂಪೊಂದು ತನ್ನನ್ನು ಅಕ್ರಮವಾಗಿ ಮತಾಂತರಗೊಳಿಸಿದೆ ಎಂದು ಆರೋಪಿಸಿದ್ದ ಧರ್ಮೇಂದ್ರ ದೋಹರ್, ತಾನು ಒಂದು ವರ್ಷ ಬಜರಂಗ ದಳದ ಸದಸ್ಯನಾಗಿದ್ದೆ ಎಂದು ರವಿವಾರ ಸುದ್ದಿಗಾರರಿಗೆ ತಿಳಿಸಿದ್ದಾನೆ. ಮತಾಂತರಗೊಳ್ಳಲು ತನಗೆ 5,000 ರೂ.ಗಳನ್ನು ನೀಡಲಾಗಿತ್ತು ಎಂದು ಪೊಲೀಸ್ ದೂರಿನಲ್ಲಿ ತಿಳಿಸಿರುವ ಆತ ಆ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ.

“ನೀನು ನಿಜಕ್ಕೂ ಮತಾಂತರಗೊಂಡಿದ್ದೀಯಾ” ಎಂಬ ಸುದ್ದಿಗಾರರ ಪ್ರಶ್ನೆಗೆ ಆತ, ತಾನು ಈ ಬಗ್ಗೆ ಮಾತನಾಡುವಂತಿಲ್ಲ. ಹಾಗೆ ಮಾಡಿದರೆ ವಿವಾದದಲ್ಲಿ ಸಿಲುಕಿಕೊಳ್ಳುತ್ತೇನೆ. ತಾನು ಹೇಳಿಕೆಯನ್ನು ಬದಲಿಸುತ್ತಿದ್ದೇನೆ ಎಂದು ಹೇಳಬಹುದು. ‘ಗುಂಪು’ ಇಂತಹ ಜನರು(ಕ್ರೈಸ್ತರು)ಇಲ್ಲಿಗೆ ಬರುವುದನ್ನು ಇಷ್ಟಪಡುವುದಿಲ್ಲ ಎಂದು ಉತ್ತರಿಸಿದ್ದಾನೆ.

ದೋಹರ್‌ನ ದೂರಿನ ಮೇರೆಗೆ ಸತ್ನಾ ಪೊಲೀಸರು 30 ಕೈಸ್ತರನ್ನು ಮತ್ತು ಇಬ್ಬರು ಧರ್ಮಗುರುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಜರಂಗ ದಳದ ಸದಸ್ಯರು ಪೊಲೀಸ್ ಠಾಣೆಯೊಳಗೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಧರ್ಮಗುರುಗಳು ಆರೋಪಿಸಿದ್ದು ,ಇದನ್ನು ಪೊಲೀಸರು ಅಲ್ಲಗಳೆದಿದ್ದಾರೆ.

“ನೀನು ಪೊಲೀಸರಿಗೆ ಅಥವಾ ಬಜರಂಗದಳಕ್ಕೆ ಹೆದರಿಕೊಂಡಿದ್ದೀಯಾ” ಎಂಬ ಪ್ರಶ್ನೆಗೆ ದೋಹಾರ್, “ನಾನು ನನ್ನ ಕುಟುಂಬದ ಬಗ್ಗೆ ಕಳವಳಗೊಂಡಿದ್ದೇನೆ. ನನ್ನಿಂದಾಗಿ ಅವರು ತೊಂದರೆಗೆ ಸಿಲುಕಿದ್ದಾರೆ. ಈ ಜನರು(ಕ್ರೈಸ್ತರು) ನಮ್ಮ ಮನೆಗೆ ಬರಲು ಮತ್ತು ನಮ್ಮೊಂದಿಗೆ ಬೆರೆಯಲು ಅವಕಾಶ ನೀಡಬಾರದು ಎಂದು ನಮಗೆ ಹೇಳಲಾಗಿತ್ತು” ಎಂದು ಉತ್ತರಿಸಿದ.

ಗುರುವಾರ ಸಂಜೆ ಭೂಮಕಾರ್ ಗ್ರಾಮದಲ್ಲಿ ಕ್ರಿಸ್‌ಮಸ್ ಪೂರ್ವ ಆಚರಣೆ ನಡೆಯುತ್ತಿದ್ದ ಹಾಲ್‌ಗೆ ನುಗ್ಗಿದ ಕೆಲವರು ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ದಾಂಧಲೆ ನಡೆಸಿದ್ದರು. ಸೈರೊ-ಮಲಬಾರ್ ಚರ್ಚ್ ಅಲ್ಲಿ ಮಕ್ಕಳಿಗಾಗಿ ಕಾರ್ಯಕ್ರಮ ವೊಂದನ್ನು ಏರ್ಪಡಿಸಿತ್ತು ಎಂದು ಸತ್ನಾ ಧರ್ಮಪ್ರಾಂತ್ಯದ ಸಾಮಾಜಿಕ ಕಾರ್ಯ ನಿರ್ದೇಶಕ ಫಾ.ಎಂ.ರಾನಿ ತಿಳಿಸಿದರು.

  ಠಾಣೆಯೊಳಗೆ ಕೈಸ್ತರ ಮೇಲೆ ಹಲ್ಲೆ ನಡೆದಿರುವುದನ್ನು ನಿರಾಕರಿಸಿದ ಪೊಲೀಸರು, ಕೈಸ್ತರ ಗುಂಪಿನ ಮೇಲೆ ಠಾಣೆಯ ಹೊರಗಡೆ ಹಲ್ಲೆ ನಡೆದಿತ್ತು. ಅವರಗೆ ಸೇರಿದ ಕಾರಿಗೆ ಬೆಂಕಿ ಹಚ್ಚಿದ್ದಕ್ಕೆ ಸಂಬಂಧಿಸಿದಂತೆ 18ರ ಹರೆಯದ ಯುವಕನನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ. ತಮ್ಮನ್ನು ಥಳಿಸಲಾಗಿದೆ ಎಂದು ಕ್ರೈಸ್ತರು ನಮಗೆ ದೂರು ಸಲ್ಲಿಸಿದರೆ ಖಂಡಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಬಲವಂತದ ಮತಾಂತರದ ದೂರಿನ ಮೇರೆಗೆ ಫಾ.ಜಾರ್ಜ್ ಎ. ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X