Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಷ್ಕರ್, ಜೆಯುಡಿಗೆ ಮುಶರ್ರಫ್ ಸ್ನೇಹಹಸ್ತ

ಲಷ್ಕರ್, ಜೆಯುಡಿಗೆ ಮುಶರ್ರಫ್ ಸ್ನೇಹಹಸ್ತ

ಪಾಕ್ ಮಾಜಿ ಸೇನಾ ಆಡಳಿತಗಾರನಿಂದ ವಿವಾದಾತ್ಮಕ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ17 Dec 2017 10:58 PM IST
share
ಲಷ್ಕರ್, ಜೆಯುಡಿಗೆ ಮುಶರ್ರಫ್ ಸ್ನೇಹಹಸ್ತ

ಕರಾಚಿ,ಡಿ.17: ಲಷ್ಕರ್ ಎ ತೊಯ್ಬಾ ಹಾಗೂ ಜಮೀಯತುದ್ದಾವಾ ಗುಂಪುಗಳು ‘ದೇಶಭಕ್ತ ಸಂಘಟನೆ’ಗಳೆಂದು ಪಾಕಿಸ್ತಾನದ ಮಾಜಿ ಸೇನಾ ಆಡಳಿತಗಾರ ಪರ್ವೇಝ್ ಮುಶರ್ರಫ್ ಹೇಳಿದ್ದು, ಪಾಕಿಸ್ತಾನದ ‘ಸುರಕ್ಷತೆ ಹಾಗೂ ಭದ್ರತೆ’ಯ ದೃಷ್ಟಿಯಿಂದ ತಾನು ಅವುಗಳೊಂದಿಗೆ ಮೈತ್ರಿಯೇರ್ಪಡಿಸಲು ಸಿದ್ಧನಿರುವುದಾಗಿ ಹೇಳಿದ್ದಾರೆ.

 ಪ್ರಸ್ತುತ ಸ್ವಯಂ ದೇಶಭ್ರಷ್ಟರಾಗಿ, ದುಬೈನಲ್ಲಿ ನೆಲೆಸಿರುವ 74 ವರ್ಷ ವಯಸ್ಸಿನ ಮುಶರ್ರಫ್, ಕಳೆದ ತಿಂಗಳು ಸಂದರ್ಶನವೊಂದರಲ್ಲಿ ತಾನೋರ್ವ ಲಷ್ಕರ್ ಎ ತೊಯ್ಬಾ ಹಾಗೂ ಅದರ ಸ್ಥಾಪಕ ಹಾಗೂ ಮುಂಬೈ ಭಯೋತ್ಪಾದಕ ದಾಳಿಯ ಸೂತ್ರಧಾರನೆನ್ನಲಾದ ಹಾಫೀಝ್ ಸಯೀದ್‌ನ ಅತಿ ದೊಡ್ಡ ಬೆಂಬಲಿಗನೆಂಬುದಾಗಿ ಹೇಳಿಕೊಂಡಿದ್ದರು.

‘‘ಲಷ್ಕರ್ ಎ ತೊಯ್ಬಾ ಹಾಗೂ ಜೆಯುಡಿಯವರು ಅತ್ಯಂತ ದೇಶಭಕ್ತರು. ಕಾಶ್ಮೀರದಲ್ಲಿ ಅವರು ಪಾಕಿಸ್ತಾನಕ್ಕಾಗಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದ್ದಾರೆ ’’ ಎಂದು ಮುಶರ್ರಫ್ ಹೇಳಿರುವುದಾಗಿ ಎಆರ್‌ವೈ ಸುದ್ದಿವಾಹಿನಿ ವರದಿ ಮಾಡಿದೆ.

  ಈ ಎರಡು ಸಂಘಟನೆಗಳಿಗೆ ಭಾರೀ ಸಾರ್ವಜನಿಕ ಬೆಂಬಲವಿದೆ ಹಾಗೂ ಅವರು ಒಳ್ಳೆಯ ವ್ಯಕ್ತಿಗಳಾಗಿದ್ದಾರೆ. ಒಂದು ವೇಳೆ ಅವರು ರಾಜಕೀಯ ಪಕ್ಷವನ್ನು ಸ್ಥಾಪಿಸಿದಲ್ಲಿ ಯಾರೂ ಕೂಡಾ ಅದಕ್ಕೆ ವಿರೋಧ ವ್ಯಕ್ತಪಡಿಸಲಾರರು ಎಂದು ಮುಶರ್ರಫ್ ತಿಳಿಸಿದ್ದಾರೆ.

ಆದರೆ ಈ ಎರಡು ಗುಂಪುಗಳ ನಾಯಕರು ತನ್ನನ್ನು ಈವರೆಗೆ ಸಂಪರ್ಕಿಸಿಲ್ಲವೆಂದು ಅವರು ಸ್ಪಷ್ಟಪಡಿಸಿದರು. ಆದರೆ ಅವರು ತನ್ನ ಪಕ್ಷದ ಜೊತೆ ಮೈತ್ರಿಯೇರ್ಪಡಿಸಲು ಬಯಸಿದ್ದಲ್ಲಿ ತನ್ನ ಆಕ್ಷೇಪವಿಲ್ಲವೆಂದು ತಿಳಿಸಿದರು.

    ಸುಮಾರು 24 ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಸಮಾಲೋಚನಾ ಸಭೆಯನ್ನು ನಡೆಸಿದ ಬಳಿಕ ಫರ್ವೇಝ್ ಮುಶರ್ರಫ್ ಅವರು ಕಳೆದ ತಿಂಗಳು ತಾನು ಮಹಾ ಮೈತ್ರಿಕೂಟವೊಂದನ್ನು ರಚಿಸುವುದಾಗಿ ಘೋಷಿಸಿದ್ದರು.

2008ರಲ್ಲಿ ನಡೆದ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 166 ಮಂದಿ ಮೃತಪಟ್ಟ ಘಟನೆಯ ಬಳಿಕ ಲಷ್ಕರ್ ಎ ತೊಯ್ಬಾ ಸಂಘಟನೆಯನ್ನು ನಿಷೇಧಿಸಲಾಗಿತ್ತು.2014 ಜೂನ್‌ನಲ್ಲಿ ಅಮೆರಿಕವು, ಜೆಯುಡಿಯನ್ನು ವಿದೇಶಿ ಭಯೋತ್ಪಾದಕ ಸಂಘಟನೆಯೆಂದು ಘೋಷಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X