Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಾನಪದ ಕಲಾವಿದರ ನೆರವಿಗೆ ಸರಕಾರ...

ಜಾನಪದ ಕಲಾವಿದರ ನೆರವಿಗೆ ಸರಕಾರ ಮುಂದಾಗಲಿ: ಡಾ.ವಿಜಯಮ್ಮ

ವಾರ್ತಾಭಾರತಿವಾರ್ತಾಭಾರತಿ18 Dec 2017 8:24 PM IST
share
ಜಾನಪದ ಕಲಾವಿದರ ನೆರವಿಗೆ ಸರಕಾರ ಮುಂದಾಗಲಿ: ಡಾ.ವಿಜಯಮ್ಮ

ಬೆಂಗಳೂರು, ಡಿ.18: ಸೂಕ್ತ ಸೌಲಭ್ಯಗಳಿಲ್ಲದೆ ಬದುಕು ನಡೆಸುತ್ತಿರುವ ಜಾನಪದ ಕಲಾವಿದರ ನೆರವಿಗೆ ಸರಕಾರವು ಮುಂದಾಗಬೇಕಿದೆ ಎಂದು ಹಿರಿಯ ಪತ್ರಕರ್ತೆ ಡಾ.ವಿಜಯಮ್ಮ ಹೇಳಿದರು.

ಸೋಮವಾರ ನಗರದ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ವೇದಿಕೆಯಲ್ಲಿ ಭಾರತೀಯ ಜಾನಪದ ಬುಡಕಟ್ಟು ಕಲಾ ಪರಿಷತ್ತು ಹೊಸದಿಲ್ಲಿ ಹಾಗೂ ಅಖಿಲ ಕರ್ನಾಟಕ ಜಾನಪದ ಕಲಾವಿದ ಒಕ್ಕೂಟದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕಕಲಾ ಮಹೋತ್ಸವದಲ್ಲಿ ಮಾತನಾಡಿದರು.

ಹಳ್ಳಿಗಳಲ್ಲಿನ ಅನೇಕ ಜಾನಪದ ಕಲಾವಿದರು ಕಲೆಯನ್ನೆ ನಂಬಿ ಬದುಕದೆ, ಬಿಡುವಿನ ವೇಳೆಯಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿಯೂ ಜೀವನ ಸಾಗಿಸುತ್ತಿದ್ದಾರೆ. ಈ ಕಲಾವಿದರಿಗೆ ಇದುವರೆಗೆ ಕನಿಷ್ಠ ಸೌಲಭ್ಯವೂ ದೊರೆತಿಲ್ಲ. ಹೀಗಾಗಿ, ಸರಕಾರವು ಇಂತಹ ಕಲಾವಿದರನ್ನು ಗುರುತಿಸಿ ವಾಸಿಸಲು ಮನೆ, ವ್ಯವಸಾಯಕ್ಕೆ ಭೂಮಿ ನೀಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಭಾರತೀಯ ಸಂಸ್ಕೃತಿಯನ್ನು ಕಲೆ, ಕಲಾವಿದರು ಶ್ರೀಮಂತಗೊಳಿಸಿದ್ದಾರೆ. ಸರಕಾರ ಜಾತಿಗೊಂದು ಜಯಂತಿ ಎಂದು ಘೋಷಿಸಿ, ಕಲಾವಿದರನ್ನು ಬಳಸಿಕೊಳ್ಳುತ್ತದೆಯೆ ಹೊರತು ಅವರ ಜೀವನ ಭದ್ರತೆಗೆ ನೆರವು ನೀಡಲು ನಿರಾಸಕ್ತಿ ತೋರಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಲೆಯನ್ನು ಶ್ರೀಮಂತಗೊಳಿಸಿ, ಕಲಾವಿದರ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ಜಾನಪದ ಬುಡಕಟ್ಟು ಕಲಾ ಅಕಾಡೆಮಿ ಸ್ಥಾಪಿಸಬೇಕೆಂದು ಸರಕಾರಕ್ಕೆ ಮನವಿ ಮಾಡಿದರು.

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಜಾನಪದ ಅಕಾಡೆಮಿ ಇದ್ದರೆ ಕಲಾವಿದರಿಗೆ ನೆರವಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುತ್ತಿರುವ ಕಲಾವಿದರ ಹೋರಾಟ ಯಶಸ್ವಿಯಾಗಲಿ, ಮಾಧ್ಯಮ ಅಕಾಡೆಮಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ, ರತನ್ ಲಾಲ್ ವೈದ್ಯ, ರಂಗನಟ ಮಾಂಗಿಲಾಲ್, ಅಶೋಕ್ ಛಲವಾದಿ, ಸುಂದರಂ, ಹಾಸನ ರಾಜು, ಜೋಗಿಲ ಸಿದ್ದರಾಜು ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X