Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಧುನಿಕ ಶಿಕ್ಷಣದಿಂದ ಮೂಢನಂಬಿಕೆಯ ಪೋಷಣೆ:...

ಆಧುನಿಕ ಶಿಕ್ಷಣದಿಂದ ಮೂಢನಂಬಿಕೆಯ ಪೋಷಣೆ: ಪ್ರೊ. ಶ್ರೀಕಂಠ ಕೂಡಿಗೆ ವಿಷಾದ

ಶಿವಮೊಗ್ಗ: 12ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ18 Dec 2017 9:44 PM IST
share
ಆಧುನಿಕ ಶಿಕ್ಷಣದಿಂದ ಮೂಢನಂಬಿಕೆಯ ಪೋಷಣೆ: ಪ್ರೊ. ಶ್ರೀಕಂಠ ಕೂಡಿಗೆ ವಿಷಾದ

ಶಿವಮೊಗ್ಗ, ಡಿ. 18: ಆಧುನಿಕ ಶಿಕ್ಷಣ ನಮ್ಮನ್ನು ಮೂಢನಂಬಿಕಸ್ಥರನ್ನಾಗಿ ಮಾಡುತ್ತಿದೆ. ಉನ್ನತ ಶಿಕ್ಷಣದಿಂದ ಮಾತ್ರ ಸಾಮಾಜಿಕ ಪರಿವರ್ತನೆ ಸಾಧ್ಯ. ಜಾತಿವಾದಿಗಳು, ಮೂಢನಂಬಿಕಸ್ಥರು ಮತ್ತು ಭ್ರಷ್ಟರು ಶಿಕ್ಷಣದಿಂದ ನಿರ್ಮಾಣವಾದರೆ ಅದು ಶಿಕ್ಷಣದ ಸೋಲಾಗುತ್ತದೆ. ಸೈದಾಂತಿಕ ತಿಳುವಳಿಕೆ, ಬದ್ಧತೆ, ಪ್ರಾಮಾಣಿಕತೆ ಮತ್ತು ಚಿಂತನೆಯನ್ನು ಬೆಳೆಸುವ ಕೆಲಸ ಶಿಕ್ಷಣದಿಂದ ಆಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ. ಶ್ರೀಕಂಠ ಕೂಡಿಗೆ ವಿಷಾದ ವ್ಯಕ್ತ ಪಡಿಸಿದ್ದಾರೆ.

ಸೋಮವಾರ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ನಡೆದ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡುತ್ತಿದ್ದರು.

ಸರಕಾರಗಳು, ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಭಾಷಾ ನೀತಿ ರೂಪಿಸಬೇಕು. ಕಡ್ಡಾಯವಾಗಿ ಮಾತೃಭಾಷೆಯನ್ನು ಕಲಿಸಬೇಕು. ಬಡವರು, ಶ್ರೀಮಂತರಿಗೆ ಒಂದೊಂದು ಶಾಲೆಗಳೆಂಬ ವರ್ಗಭೇದವನ್ನು ನಿವಾರಿಸಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ಶಾಲೆ ಮುಚ್ಚುವುದನ್ನು ತಪ್ಪಿಸಲು ಸರಕಾರ ದೃಢ ನಿಲುವು ತೆಗೆದುಕೊಳ್ಳಬೇಕು. ಕನ್ನಡ ಶಾಲೆಗಳ ಮತ್ತು ಶಿಕ್ಷಕರ ವಿಲೀನೀಕರಣವನ್ನು ವೈಜ್ಞಾನಿಕವಾಗಿ ಮಾಡಬೇಕು. ಮಕ್ಕಳನ್ನು ನಿರ್ದಿಷ್ಟ ಮಾರ್ಗಗಳ ಮೂಲಕ ಒಟ್ಟಿಗೆ ವಾಹನದಲ್ಲಿ ಕರೆದೊಯ್ದು ಮತ್ತೆ ಬಿಡುವ ವ್ಯವಸ್ಥೆಯಾಗಬೇಕು. ಪ್ರಾಥಮಿಕ ಪೂರ್ವ ತರಗತಿಗಳನ್ನು ತೆರೆದು ಮಕ್ಕಳ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ನುಡಿದರು.

ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸಲು ನುರಿತ ಶಿಕ್ಷಕರನ್ನು ನೇಮಿಸಬೇಕು. ಶಿಕ್ಷಕರಿಗೆ ಇತರ ಕೆಲಸಗಳನ್ನು ಹೊರಿಸುವುದನ್ನು ಬಿಟ್ಟು ಪೂರ್ಣಾವಧಿ ಬೋಧನೆಗೆ ಅವಕಾಶ ಮಾಡಿಕೊಡಬೇಕು. ಇದರಿಂದ ಕೌಶಲ್ಯ ಬೆಳೆದು ಶೈಕ್ಷಣಿಕ ಗುಣಮಟ್ಟ ವೃದ್ಧಿಸುತ್ತದೆ. ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ಇಂಗ್ಲೀಷ್ ಮಾಧ್ಯಮದ ಮಕ್ಕಳಿಗೆ ಲೌಖಿಕ ವ್ಯವಹಾರ ಪ್ರಯೋಜನದ ದೃಷ್ಟಿಯಿಂದ ಅನುಕೂಲವಿದೆ. ಆದರೆ, ಮುಂದೆಂದೂ ಸಾಂಸ್ಕೃತಿಕ ಅನಾಥ ಪ್ರಜ್ಞೆ ಅವರನ್ನು ಕಾಡಬಾರದು ಎಂದಾದಲ್ಲಿ, ಕನ್ನಡ ಲಿಪಿ ಮತ್ತು ನುಡಿಗಳನ್ನು ಎಳೆ ವಯಸ್ಸಿನಲ್ಲೇ ಅವರಿಗೆ ಕಲಿಸುವುದು ಸೂಕ್ತ ಎಂದರು.

ಇಂದು ಬಳಸುತ್ತಿರುವ ಆಂಟಿ ಮತ್ತು ಅಂಕಲ್ ಪದಗಳು, ಕನ್ನಡದಲ್ಲಿ ಸುಂದರ ಸಂಬಂಧ ವಾಚಕಗಳ ಸ್ಥಾನವನ್ನು ಹೊಂದಿದ್ದರೂ ಅವುಗಳನ್ನು ಬಳಸದೆ ಭಾವಶೂನ್ಯ, ಅನಿರ್ದಿಷ್ಟ ಸಂಬಂಧ ಸೂಚಕಗಳನ್ನು ಬಳಸುವ ಮೂಲಕ ಭಾಷೆಯ ಆರ್ದ್ರತೆ ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಕನ್ನಡದ ಪತ್ರಿಕೆಗಳನ್ನು ಓದುವಲು ಕಲಿಸುವ ಕೆಲಸವನ್ನು ಪಾಲಕರು ಮಾಡಬೇಕು. ಈ ಮೂಲಕ ಕನ್ನಡ ಅವರಲ್ಲಿ ಅಚ್ಚಳಿಯದಂತೆ ಮಾಡಬೇಕು ಎಂದು ಕರೆ ನೀಡಿದರು.

ಕನ್ನಡ ನಾಡಿನಲ್ಲಿ ಕನ್ನಡ ಪ್ರಥಮ ಭಾಷೆಯಾಗಬೇಕು. ಕನ್ನಡವೇ ಶಿಕ್ಷಣ, ಆಡಳಿತ ಭಾಷೆಯಾಗಬೇಕು ಎಂದು 1955ರಲ್ಲಿ ಕುವೆಂಪು ಹಂಬಲಿಸಿದ್ದ ಆದರ್ಶ ಇಂದಿಗೂ ಕೈಗೂಡಿಲ್ಲ.

- ಪ್ರೊ. ಶ್ರೀಕಂಠ ಕೂಡಿಗೆ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X