Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಶ್ರಯ ಯೋಜನೆಯಡಿ ಹೊಸ ಅರ್ಜಿ: ಸದಸ್ಯರ...

ಆಶ್ರಯ ಯೋಜನೆಯಡಿ ಹೊಸ ಅರ್ಜಿ: ಸದಸ್ಯರ ಆಕ್ರೋಶ

ಮಹಾನಗರ ಪಾಲಿಕೆ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ18 Dec 2017 10:25 PM IST
share
ಆಶ್ರಯ ಯೋಜನೆಯಡಿ ಹೊಸ ಅರ್ಜಿ: ಸದಸ್ಯರ ಆಕ್ರೋಶ

ಶಿವಮೊಗ್ಗ, ಡಿ. 18: ಹಳೆಯ ಅರ್ಜಿಗಳ ಬಾಕಿ ಉಳಿಸಿಕೊಂಡು ಆಶ್ರಯ ಸಮಿತಿ ಹೊಸದಾಗಿ ಬಡವರಿಗೆ ಮನೆ ನೀಡಲು ಅರ್ಜಿ ಕರೆದಿರುವುದಕ್ಕೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಸೋಮವಾರ ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಆಶ್ರಯ ಸಮಿತಿ ಈ ಹಿಂದೆ ಗೋಪಿಶೆಟ್ಟಿಕೊಪ್ಪಮತ್ತು ಗೋವಿಂದಪುರಗಳಲ್ಲಿ ಆಶ್ರಯ ನಿವೇಶನ ನೀಡಲು ಅರ್ಜಿ ಕರೆದಿದ್ದಾಗ 17 ಸಾವಿರ ಜನರು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕಾಗಿ ಹಗಲು ರಾತ್ರಿ ಎನ್ನದೆ ಪಾಲಿಕೆ ಬಳಿ ಸರದಿನಿಂತು ಹಣ ಖರ್ಚು ಮಾಡಿಕೊಂಡು ನಿವೇಶನಕ್ಕಾಗಿ ಕಾಯುತ್ತಿದ್ದವರಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಆಶ್ರಯ ಸಮಿತಿ ಸೂಚನೆಯಿಂದ ಜನರು ಗೊಂದಲಕ್ಕೀಡಾಗಿದ್ದಾರೆ ಎಂದು ಸದಸ್ಯರು ಅಭಿಪ್ರಾಯಪಟ್ಟರು.

 ಜಿ ಪ್ಲಸ್ 2 ಮಾದರಿಯ ಆಶ್ರಯ ಮನೆಗಳ ವಿತರಣೆಯಲ್ಲಿ ಆಶ್ರಯ ಸಮಿತಿಗೆ 6 ವರ್ಷಗಳ ಹಿಂದೆ ನಗರದ ಬಡವರು ಸಲ್ಲಿಸಿದ್ದ ಅರ್ಜಿಗಳಿಗೆ ಮೊದಲ ಆದ್ಯತೆ ನೀಡಬೇಕು ಹಾಗೂ ಈ ಆಶ್ರಯ ಮನೆಗೆ ಅರ್ಜಿ ಹಾಕುವಾಗ 8 ಸಾವಿರ ರೂ. ಮುಂಗಡ ಹಣ ಪಡೆಯದಿರಲು ಇಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಆಶ್ರಯ ಸಮಿತಿಗೆ ಕಳುಹಿಸಲು ನಿರ್ಣಯಿಸಲಾಯಿತು.

ಸದಸ್ಯ ಮೋಹನ ರೆಡ್ಡಿ ಸಭೆಯ ಆರಂಭದಲ್ಲಿ ವಿಷಯ ಪ್ರಸ್ತಾಪಿಸಿ, 17 ಸಾವಿರ ಜನ ಅರ್ಜಿದಾರರು ಮತ್ತೆ ಅರ್ಜಿ ಸಲ್ಲಿಸುವುದು ಎಷ್ಟು ಸರಿ ಎಂದರು. ಸದಸ್ಯರಾದ ಸುಭಾಷ್, ನಾಗರಾಜ್ ಕಂಕಾರಿ, ಪಾಲಾಕ್ಷಿ, ನರಸಿಂಹಮೂರ್ತಿ, ರಮೇಶ್ ಸೇರಿದಂತೆ ಅನೇಕರು ಹೊಸದಾಗಿ ಆಶ್ರಯ ಸಮಿತಿ ಅರ್ಜಿ ಕರೆದಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು.

ಪಾಲಿಕೆಯ 35 ಸದಸ್ಯರು ಈ ಹಿಂದೆ ತಮ್ಮ ಬಡಾವಣೆಯ ಬಡವರಿಗೆ ನಿವೇಶನ ಕೊಡಿಸಲು ಅರ್ಜಿ ಹಾಕಿಸಿ, ಅವರ ಅರ್ಜಿ ಪರಿಶೀಲನೆಯನ್ನು ಮಾಡಿಸಿ ನಿವೇಶನ ಕೊಡಿಸುವ ಭರವಸೆ ನೀಡಿದ್ದೆವು. ಈಗ ಅವರಿಗೆ ಅನ್ಯಾಯವಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. 8,200ರೂ.ನ್ನು ಅರ್ಜಿಯೊಂದಿಗೆ ಕಟ್ಟುವುದನ್ನು ಕೈಬಿಡಬೇಕು. ಫಲಾನುಭವಿಯಾಗಿ ಆಯ್ಕೆಯಾದ ನಂತರವಷ್ಟೇ ಹಣ ಕಟ್ಟುವ ವ್ಯವಸ್ಥೆಯಾಗಬೇಕು ಎಂದು ಆಗ್ರಹಿಸಿದರು.

ಮೇಯರ್ ಏಳುಮಲೈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಮೇಯರ್ ರೂಪಾ ಲಕ್ಷ್ಮಣ್, ಆಯುಕ್ತ ಮುಲ್ಲೈ ಮುಹಿಲನ್ ಉಪಸ್ಥಿತರಿದ್ದರು. .

ಗಂಭೀರ ಚರ್ಚೆ........

ಆಶ್ರಯ ಸಮಿತಿ ಸಭೆಗೆ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಅವರನ್ನು ಆಹ್ವಾನಿಸದಿರುವುದು ಪಾಲಿಕೆ ಸಭೆಯಲ್ಲಿ ಗಂಭೀರ ಚರ್ಚೆಗೆ ಎಡೆಮಾಡಿ ಕೊಟ್ಟಿತು. ಆಶ್ರಯ ಸಮಿತಿ ಮನೆ ನೀಡಲು ಅರ್ಜಿ ಕರೆದಿರುವ ಬಗ್ಗೆ ವಿಪ ಸದಸ್ಯ ಆರ್. ಪ್ರಸನ್ನಕುಮಾರ್ ಅವರಲ್ಲಿ ಸದಸ್ಯ ಸುಭಾಶ್ ಮಾಹಿತಿ ಕೇಳಿದಾಗ, ತನಗೆ ಸಭೆಗೆ ಆಹ್ವಾನ ನೀಡಿಲ್ಲ ಎಂದು ಅವರು ಅಧಿಕಾರಿಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಆಯುಕ್ತರು, ಆಶ್ರಯ ಸಮಿತಿಯಲ್ಲಿ ಒಬ್ಬರೇ ವಿಧಾನ ಪರಿಷತ್ ಸದಸ್ಯರಿರಬೇಕು. ಈಗಾಗಲೇ ಶಂಕರಮೂರ್ತಿ ಇದ್ದಾರೆ. ಮತ್ತೊಬ್ಬರು ಇದೇ ಸಮಿತಿ ಸದಸ್ಯರಾಗಲು ಬಯಸಿ ನಮಗೆ ಒಪ್ಪಿಗೆ ಪತ್ರ ನೀಡಿದಲ್ಲಿ ಸರಕಾರಕ್ಕೆ ಕಳುಹಿಸುತ್ತೇವೆ. ಅವರು ಆಯ್ಕೆ ಮಾಡಿದ ಒಬ್ಬರು ವಿಧಾನಪರಿಷತ್ ಸದಸ್ಯರು ಸಮಿತಿ ಸದಸ್ಯರಾಗುತ್ತಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X