Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಮಹತ್ವದ ಜಾಗತಿಕ ಶಕ್ತಿ: ಅಮೆರಿಕ...

ಭಾರತ ಮಹತ್ವದ ಜಾಗತಿಕ ಶಕ್ತಿ: ಅಮೆರಿಕ ಅಧ್ಯಕ್ಷರ ‘ರಾಷ್ಟ್ರೀಯ ಭದ್ರತಾ ತಂತ್ರಗಾರಿಕೆ’ಯಲ್ಲಿ ಬಣ್ಣನೆ

ವಾರ್ತಾಭಾರತಿವಾರ್ತಾಭಾರತಿ19 Dec 2017 10:20 PM IST
share
ಭಾರತ ಮಹತ್ವದ ಜಾಗತಿಕ ಶಕ್ತಿ: ಅಮೆರಿಕ ಅಧ್ಯಕ್ಷರ ‘ರಾಷ್ಟ್ರೀಯ ಭದ್ರತಾ ತಂತ್ರಗಾರಿಕೆ’ಯಲ್ಲಿ ಬಣ್ಣನೆ

ವಾಶಿಂಗ್ಟನ್, ಡಿ. 19: ‘ಪ್ರಮುಖ ಜಾಗತಿಕ ಶಕ್ತಿ’ಯಾಗಿ ಭಾರತದ ಏಳಿಗೆಯನ್ನು ಅಮೆರಿಕ ಸ್ವಾಗತಿಸುತ್ತದೆ ಹಾಗೂ ಭಾರತ, ಜಪಾನ್ ಮತ್ತು ಆಸ್ಟ್ರೇಲಿಯಗಳೊಂದಿಗೆ ಚತುಷ್ಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಬಯಸುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಬಿಡುಗಡೆ ಮಾಡಿದ ನೂತನ ‘ರಾಷ್ಟ್ರೀಯ ಭದ್ರತಾ ತಂತ್ರಗಾರಿಕೆ’ ಹೇಳಿದೆ.

ಚೀನಾ ಮತ್ತು ರಶ್ಯಗಳು ಅಮೆರಿಕದ ಪ್ರಮುಖ ಪ್ರತಿಸ್ಪರ್ಧಿಗಳು ಎಂಬುದಾಗಿ ಬಣ್ಣಿಸಿರುವ ತಂತ್ರಗಾರಿಕೆಯು, ಈ ದೇಶಗಳು ‘ಸುಧಾರಣೆಗೊಳ್ಳುತ್ತಿರುವ’ ಶಕ್ತಿಗಳು ಎಂದಿದೆ.

ಅದೇ ವೇಳೆ, ಭಯೋತ್ಪಾದನೆ ನಿಗ್ರಹದಲ್ಲಿ ಹೆಚ್ಚಿನ ಪ್ರಯತ್ನಗಳನ್ನು ಮಾಡುವಂತೆ ಹಾಗೂ ತನ್ನ ಪರಮಾಣು ಅಸ್ತ್ರಗಳ ‘ಜವಾಬ್ದಾರಿಯುತ ಕಾವಲುಗಾರ’ನಾಗುವಂತೆ ಪಾಕಿಸ್ತಾನದ ಮೇಲೆ ಒತ್ತಡ ಹೇರುವುದನ್ನು ಮುಂದುವರಿಸಲಾಗುವುದು ಎಂದಿದೆ.

 ಚೀನಾ ಮತ್ತು ರಶ್ಯಗಳಂತಹ ‘ಸುಧಾರಣಾವಾದಿ ಶಕ್ತಿಗಳು’, ಉತ್ತರ ಕೊರಿಯ ಮತ್ತು ಇರಾನ್‌ಗಳಂತಹ ‘ಧೂರ್ತ ದೇಶಗಳು’ ಮತ್ತು ಪಾಕಿಸ್ತಾನದಿಂದ ಕಾರ್ಯಾಚರಿಸುವ ‘ದೇಶದ ಹೊರಗಿನ ಭಯೋತ್ಪಾದಕ ಸಂಘಟನೆ’ಗಳಿಂದ ಅಮೆರಿಕಕ್ಕೆ ಬೆದರಿಕೆಯಿದೆ ಎಂದು ತಂತ್ರಗಾರಿಕೆ ತಿಳಿಸಿದೆ.

ಪಾಕ್‌ನಿಂದ ನಿರಂತರ ಬೆದರಿಕೆ

ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿರುವ ದೇಶದ ಹೊರಗಿನ ಭಯೋತ್ಪಾದಕ ಮತ್ತು ಬಂಡುಕೋರ ಸಂಘಟನೆಗಳಿಂದ ಅಮೆರಿಕ ನಿರಂತರವಾಗಿ ಬೆದರಿಕೆಗಳನ್ನು ಎದುರಿಸುತ್ತಿದೆ ಎಂದು ‘ರಾಷ್ಟ್ರೀಯ ಭದ್ರತಾ ತಂತ್ರಗಾರಿಕೆ’ ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನಗಳ ನಡುವೆ ಸೇನಾ ಸಂಘರ್ಷ ನಡೆಯುವ ಸಾಧ್ಯತೆ ಅಮೆರಿಕದ ಅತಿ ದೊಡ್ಡ ಕಳವಳವಾಗಿದೆ ಹಾಗೂ ಒಂದು ವೇಳೆ, ಉಭಯ ದೇಶಗಳ ನಡುವೆ ಯುದ್ಧ ಸ್ಫೋಟಿಸಿದರೆ, ಅದು ಪರಮಾಣು ದಾಳಿಗೆ ಕಾರಣವಾಗಬಹುದು ಎಂದಿದೆ.

ಭಯೋತ್ಪಾದನೆ ನಿಗ್ರಹದಲ್ಲಿ ಪಾಕಿಸ್ತಾನ ‘ನಿರ್ಣಾಯಕ ಕ್ರಮ’ವನ್ನು ತೆಗೆದುಕೊಳ್ಳಬೇಕಿದೆ ಎಂದು ದಾಖಲೆಯನ್ನು ಬಿಡುಗಡೆಗೊಳಿಸಿದ ಟ್ರಂಪ್ ಹೇಳಿದರು.

‘‘ಅಮೆರಿಕ ಪಾಕಿಸ್ತಾನಕ್ಕೆ ತುಂಬಾ ಹಣವನ್ನು ನೀಡುತ್ತಿದೆ. ಅದು ಸದ್ಬಳಕೆಯಾಗಬೇಕು’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X