Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಸೃಜನಶೀಲ ಶಿಕ್ಷಣ - ಒಂದು ಚರ್ಚೆ

ಸೃಜನಶೀಲ ಶಿಕ್ಷಣ - ಒಂದು ಚರ್ಚೆ

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ19 Dec 2017 11:28 PM IST
share
ಸೃಜನಶೀಲ ಶಿಕ್ಷಣ - ಒಂದು ಚರ್ಚೆ

ಶಿಕ್ಷಣದ ಕುರಿತಂತೆಯೂ ಸೃಜನಶೀಲತೆಯ ಕುರಿತಂತೆಯೂ ಡಾ. ಮಹಾಬಲೇಶ್ವರ ರಾವ್ ಹಲವು ಬಾರಿ ಬರೆದಿದ್ದಾರೆ. ಸೃಜನಶೀಲತೆಯ ಕುರಿತಂತೆ ತೀವ್ರ ಅಧ್ಯಯನ ಮಾಡಿದ ಹಿರಿಮೆಯೂ ಅವರಿಗಿದೆ. ಹಾಗೆಯೇ ಹೇಗೆ ಶಿಕ್ಷಣ ಅಂಕ ಪಟ್ಟಿಗಳಿಗೆ ಸೀಮಿತವಾಗಿ ಯಾಂತ್ರಿಕವಾಗಿದೆ ಎನ್ನುವುದರ ಬಗ್ಗೆಯೂ ಅವರು ಸಾಕಷ್ಟು ಬರೆದಿದ್ದಾರೆ. ಶಿಕ್ಷಣವನ್ನು ಹೇಗೆ ಸೃಜನಶೀಲಗೊಳಿಸಿ ಆ ಮೂಲಕ ವಿದ್ಯಾರ್ಥಿಗಳ ಒಳ ಪ್ರತಿಭೆಗಳನ್ನು ಬಹಿರಂಗವಾಗಿಸಬಹುದು ಎನ್ನುವ ಬಗ್ಗೆ ಅವರು ಚರ್ಚಿಸಿದ್ದಾರೆ. ‘ಸೃಜನಶೀಲ ಶಿಕ್ಷಣ’ ಈ ನಿಟ್ಟಿನಲ್ಲಿ ಸೃಜನಶೀಲತೆಯನ್ನು, ಶಿಕ್ಷಣವನ್ನು ವಿವರಿಸುವ ಅವರ ಇನ್ನೊಂದು ಕೃತಿಯಾಗಿದೆ.

ಸಂಶೋಧನೆಳ ಹಿಂದಿರುವ ಸೃಜನಶೀಲ ಮನಸ್ಸುಗಳನ್ನು ತೆರೆದಿಡುವ ಮೊದಲ ಲೇಖನ ‘‘ನಿಗೂಢತೆಯ ನಾಡಿನಲ್ಲಿ’’ ಜಗತ್ತಿನ ಸಂಸ್ಕೃತಿ, ನಾಗರಿಕತೆ, ಮಾನವನ ಸ್ಮತಿ ಪರಂಪರೆ ಮತ್ತು ಅನುವಂಶೀಯತೆಯ ಫಲಸ್ವರೂಪವಾದ ಸೃಜನಶೀಲತೆಯು ಜಾಗತಿಕ ಜನಜೀವನದ ಮೇಲೆ ಬೀರಿರುವ ಪರಿಣಾಮಗಳನ್ನು ವಿವರಿಸುತ್ತದೆ. ಶಿಕ್ಷಣ ಮುಚ್ಚು ಮಾದರಿಯಾಗಬಾರದು ಬಿಚ್ಚು ಮಾದರಿಯಾಗಬೇಕು ಎಂದು ಅವರು ‘ಭಂಗದ ಬೆನ್ನೇರಿ ಬಂತು...’ ಲೇಖನದಲ್ಲಿ ಆಶಿಸುತ್ತಾರೆ. ಕಾವ್ಯದ ಸಾಲುಗಳನ್ನು ನೆನಪಿಸಿಕೊಳ್ಳುತ್ತಾ ಸೃಜನಶೀಲತೆ ಆಗಾಧ ಸಾಧ್ಯತೆಯನ್ನು ಅವರು ನಮಗೆ ಮನಗಾಣಿಸುತ್ತಾರೆ. ‘ಹರಿವ ತೊರೆಯ ಸೆಲೆ’ ಕೃತಿಯಲ್ಲಿ ಮಕ್ಕಳ ಮನಸ್ಸುಗಳನ್ನು ಅರ್ಥ ಮಾಡಿಕೊಳ್ಳುವ ಬಗೆಯನ್ನು ಹೇಳುತ್ತಾರೆ. ಹಾಗೆಯೇ ಸೃಜನಶೀಲತೆಯ ನಡುವಿನ ಕಚ್ಚಾಟಗಳು, ತಿಕ್ಕಾಟಗಳೂ ಹೇಗೆ ಧನಾತ್ಮಕ ಪರಿಣಾಮ ಬೀರಬಲ್ಲವು ಎನ್ನುವುದನ್ನು ವಿವರಿಸುತ್ತಾರೆ. ‘ಫಲಮಾನವುದೋ...’ ಲೇಖನದಲ್ಲಿ ಸೃಜನಶೀಲವಾಗಿ ಯೋಚಿಸುವುದರಿಂದ ಸಿಗುವ ಪ್ರಯೋಜನದ ಬಗ್ಗೆ ಹೇಳುತ್ತಾರೆ. ಇಂತಹ ಸುಮಾರು 12 ಲೇಖನಗಳು ಇಲ್ಲಿವೆ.

ಸೃಜನಶೀಲತೆ ಎಂಬ ವಿಸ್ಮಯವೊಂದನ್ನು ಹಲವು ಹತ್ತು ದಿಕ್ಕುಗಳಲ್ಲಿ ಹರಿದಾಡಿಸಿ ಅದರ ಎಲ್ಲ ಮಗ್ಗುಲುಗಳನ್ನೂ ಬೆನ್ನಟ್ಟಿ ತೆರೆದು ತೋರಿಸಲಾಗಿದೆ ಈ ಕೃತಿಯಲ್ಲಿ. ಹಾಗೆಯೇ ನಮ್ಮಲ್ಲಿ ಶಿಕ್ಷಣವೆಂಬುದು ನೊಗಕ್ಕೆ ಕಟ್ಟಿದ ಜೋಡೆತ್ತುಗಳಂತೆ. ಹೀಗೆ ಸಾಗಬೇಕೆಂಬ ಮತ್ತು ಇಂಥ ಪ್ರಶ್ನೆಗೆ ಇಂಥದೇ ಉತ್ತರವೆಂಬ, ಯೋಚಿಸಿ ಒಂದಕ್ಷರವೂ ಮಾತನಾಡಬಾರದೆಂಬ ಶಿಸಲ್ತಿಗೆ ಒಳಪಟ್ಟು ಅವನತಿಯತ್ತ ಸಾಗಿರುವುದು ಇಲ್ಲಿನ ಲೇಖನಗಳಿಂದ ನಮಗೆ ಮನನವಾಗುತ್ತದೆ. ಇಂದು ಶಿಕ್ಷಣ ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳಿಗೆ ಕೆಲವು ಉತ್ತರಗಳನ್ನು ಈ ಕೃತಿ ನೀಡುತ್ತದೆ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 100 ರೂಪಾಯಿ.

share
ಕಾರುಣ್ಯಾ
ಕಾರುಣ್ಯಾ
Next Story
X