Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ದಿಲೀಪ್-ಮಂಜು ವಾರಿಯರ್ ವಿಚ್ಛೇದನಕ್ಕೆ...

ದಿಲೀಪ್-ಮಂಜು ವಾರಿಯರ್ ವಿಚ್ಛೇದನಕ್ಕೆ ದೌರ್ಜನ್ಯಕ್ಕೊಳಗಾದ ನಟಿಯೇ ಕಾರಣ: ಕಾವ್ಯಾ ಮಾಧವನ್

ವಾರ್ತಾಭಾರತಿವಾರ್ತಾಭಾರತಿ20 Dec 2017 4:08 PM IST
share
ದಿಲೀಪ್-ಮಂಜು ವಾರಿಯರ್ ವಿಚ್ಛೇದನಕ್ಕೆ ದೌರ್ಜನ್ಯಕ್ಕೊಳಗಾದ ನಟಿಯೇ ಕಾರಣ: ಕಾವ್ಯಾ ಮಾಧವನ್

ಕೊಚ್ಚಿ, ಡಿ.20: ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ನಟ ದಿಲೀಪ್ ಪತ್ನಿ ಕಾವ್ಯಾ ಮಾಧವನ್‍ ಪೊಲೀಸ್ ತನಿಖಾ ತಂಡಕ್ಕೆ ನೀಡಿದ್ದ ಹೇಳಿಕೆಗಳು ಬಹಿರಂಗವಾಗಿದೆ. ದಿಲೀಪ್ ಮತ್ತು ಮಂಜು ವಾರಿಯರ್ ಪರಸ್ಪರ ದೂರವಾಗಲು ತಾನು ಕಾರಣವೆಂದು ದೌರ್ಜನ್ಯಕ್ಕೊಳಗಾದ ನಟಿ ಹೇಳುತ್ತಿದ್ದರು ಎಂದು ಕಾವ್ಯಾ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಜಾಹೀರಾತು ನಿರ್ದೇಶಕ ಶ್ರೀಕುಮಾರ್ ಮೆನನ್ ಸಾಮಾಜಿಕ ಜಾಲತಾಣದಲ್ಲಿ ದಿಲೀಪ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದರು ಎಂದು ಕಾವ್ಯಾ ಆರೋಪಿಸಿದ್ದಾರೆ. "ರಿಹರ್ಸಲ್ ಕ್ಯಾಂಪ್‍ನಲ್ಲಿ ದಿಲೀಪ್ ಮತ್ತು ನನ್ನ ಬಗ್ಗೆ ನಟಿ ಮಾತನಾಡುತ್ತಿದ್ದರು. ನಾನು ಮತ್ತು ದಿಲೀಪ್ ನೃತ್ಯ ಮಾಡುತ್ತಿರುವ ಫೋಟೊಗಳನ್ನು ಮಂಜು ವಾರಿಯರ್ ಗೆ ಕಳುಹಿಸಿಕೊಟ್ಟಿದ್ದರು. ಈ ವಿಷಯವನ್ನು ದಿಲೀಪ್ ನನಗೆ ಹೇಳಿದ್ದರು. 2012ರಲ್ಲಿ ಸಮಸ್ಯೆ ಹೆಚ್ಚು ಬಿಗಡಾಯಿಸಿತು. ಅದಕ್ಕೆ ನಟಿಯೂ ಕಾರಣವಾಗಿದ್ದರು. ದಿಲೀಪ್ ಮತ್ತು ಮಂಜು ವಿವಾಹ ವಿಚ್ಛೇದನಕ್ಕೆ ತಾನೇ ಕಾರಣ ಎಂದು ನಟಿ ಹಲವರ ಬಳಿ ಹೇಳಿದ್ದಾರೆ. ದಿಲೀಪ್ ಮತ್ತು ಮಂಜು ವಾರಿಯರ್ ನಡುವಿನ ಸಮಸ್ಯೆಗಳಿಗೆ ನಟಿ ಕೂಡಾ ಕಾರಣವಾಗಿದ್ದಾರೆ" ಎಂದು ಕಾವ್ಯಾ ಆರೋಪಿಸಿದ್ದಾರೆ.

ರಿಹರ್ಸಲ್ ಕ್ಯಾಂಪ್‍ನ ಘಟನೆಯ ನಂತರ ನಟಿಯೊಂದಿಗೆ ದಿಲೀಪ್ ಮಾತನಾಡಿಲ್ಲ. ಆದರೆ ಕ್ಯಾಂಪ್‍ನ ಘಟನೆಗಳ ಕುರಿತು ನಟ ಸಿದ್ದೀಕ್ ಜೊತೆ ದೂರಿದ್ದರು. ಅನಾವಶ್ಯಕ ಮಾತುಗಳನ್ನಾಡಬಾರದೆಂದು ನಟಿಗೆ ಸಿದ್ದೀಕ್ ಉಪದೇಶಿಸಿದ್ದರು ಎಂದು ಕಾವ್ಯಾ ತಿಳಿಸಿದ್ದಾರೆ.

"ರಿಮಿ ಟಾಮಿ ಕರೆ ಮಾಡಿದಾಗಲೇ ನನಗೆ ನಟಿಯ ಮೇಲೆ ದೌರ್ಜನ್ಯ ನಡೆದ ವಿಷಯ ತಿಳಿಯಿತು. ಪಲ್ಸರ್ ಸುನಿಯ ಬಗ್ಗೆ ನನಗೆ ಗೊತ್ತಿಲ್ಲ. ಮನೆಗೆ ಬಂದಿದ್ದಾನೆಯೇ ಎಂದೂ ಗೊತ್ತಿಲ್ಲ. ಆದರೆ ಆರೋಪಿಗಳಲ್ಲಿ ಒಬ್ಬನಾದ ವಿಷ್ಣು ಕಾಕ್ಕಾನಾಡ್ ಲಕ್ಷ್ಯ ಕಚೇರಿಗೆ ಬಂದಿದ್ದ. ನನ್ನ ಚಾಲಕನೊಡನೆ ತಂದೆ ಮತ್ತು ತಾಯಿಯ ನಂಬರ್ ಕೇಳಿದ್ದಾನೆ. ಆದರೆ ನಂಬರ್ ಕೊಟ್ಟಿಲ್ಲ. ಲಕ್ಷ್ಯದಲ್ಲಿ ಸಿಸಿ ಕ್ಯಾಮರಾ ಇದೆ. ಅದರ ದೃಶ್ಯಗಳನ್ನು ಪೊಲೀಸರಿಗೆ ನೀಡಲಾಗಿದೆ. ಬೆದರಿಕೆಯೊಡ್ಡಿ ಹಣ ಕೀಳಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ದಿಲೀಪ್ ಡಿಜಿಪಿ ಲೋಕನಾಥ್ ಬೆಹ್ರಾರಿಗೆ ಕರೆ ಮಾಡಿ ತಿಳಿಸಿದ್ದರು. ನಂತರ ಪೊಲೀಸರಿಗೆ ದೂರನ್ನು ನೀಡಿದೆವು" ಕಾವ್ಯಾ ತನಿಖಾ ತಂಡಕ್ಕೆ ಹೇಳಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X