Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾ ವಿಡಿಯೋ ಬಿಡುಗಡೆ ಒಂದು ಪಿತೂರಿ:...

ಜಯಲಲಿತಾ ವಿಡಿಯೋ ಬಿಡುಗಡೆ ಒಂದು ಪಿತೂರಿ: ಎಐಎಡಿಎಂಕೆ

ವಾರ್ತಾಭಾರತಿವಾರ್ತಾಭಾರತಿ20 Dec 2017 6:45 PM IST
share
ಜಯಲಲಿತಾ ವಿಡಿಯೋ ಬಿಡುಗಡೆ ಒಂದು ಪಿತೂರಿ: ಎಐಎಡಿಎಂಕೆ

ಚೆನ್ನೈ, ಡಿ.20: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಆಸ್ಪತ್ರೆಯಲ್ಲಿದ್ದ ವೇಳೆ ಚಿತ್ರೀಕರಣ ಮಾಡಲಾದ ವಿಡಿಯೋವೊಂದನ್ನು ಈಗ ಬಿಡುಗಡೆ ಮಾಡಿರುವ ವಿಕೆ ಶಶಿಕಲಾ ಕುಟುಂಬವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಆಡಳಿತಾರೂಢ ಎಐಎಡಿಎಂಕೆ ಡಿಸೆಂಬರ್ 21ರಂದು ನಡೆಯಲಿರುವ ಆರ್‌ಕೆ ನಗರ ಉಪಚುನಾವಣೆಯನ್ನು ಗಮನದಲ್ಲಿಟ್ಟು ಮಾಡಿದಂಥ ಪಿತೂರಿಯಾಗಿದೆ ಎಂದು ಆರೋಪಿಸಿದೆ.

ಈ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ಶಶಿಕಲಾ ಕುಟುಂಬ ಜಯಲಲಿತಾ ಅವರ ವರ್ಚಸ್ಸು ಮತ್ತು ಅವರು ಗಳಿಸಿದ್ದ ಖ್ಯಾತಿಗೆ ಮಸಿಬಳಿಯಲು ಪ್ರಯತ್ನಿಸುತ್ತಿದೆ ಎಂದು ಎಐಎಡಿಎಂಕೆಯ ಹಿರಿಯ ನಾಯಕ ಮತ್ತು ಮೀನುಗಾರಿಕಾ ಸಚಿವ ಡಿ ಜಯಕುಮಾರ್ ಆರೋಪಿಸಿದ್ದಾರೆ. ಎಐಎಡಿಎಂಕೆ ಬೆಂಬಲಿಗರು ಮತ್ತು ಜನರು ಇದನ್ನು ಒಪ್ಪುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಈ ದೃಶ್ಯ ತುಣುಕುಗಳನ್ನು ಬಿಡುಗಡೆ ಮಾಡಿದ ಟಿಟಿವಿ ದಿನಕರನ್ ಗುಂಪು, ಜಯಲಲಿತಾ ಅವರ ಸಾವಿನ ತನಿಖೆಯನ್ನು ನಡೆಸಲು ರಾಜ್ಯ ಸರಕಾರ ರಚಿಸಿರುವ ಮಂಡಳಿಗೆ ಈ ದೃಶ್ಯತುಣುಕುಗಳನ್ನು ಯಾಕೆ ತೋರಿಸಿಲ್ಲ ಎಂದು ಸಚಿವರು ಪ್ರಶ್ನಿಸಿದ್ದಾರೆ. ಜಯಲಲಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗಿನಿಂದ ಡಿಸೆಂಬರ್ 5ರಂದು ಅವರು ಮೃತರೆಂದು ಘೋಷಿಸುವವರೆಗೆ ಅವರಿಗೆ ನೀಡಲಾದ ವೈದ್ಯಕೀಯ ಚಿಕಿತ್ಸೆಗಳ ಬಗ್ಗೆ ನ್ಯಾಯಾಧೀಶರಾದ ಎ ಆರುಮುಘಸ್ವಾಮಿ ಅವರನ್ನೊಳಗೊಂಡ ಏಕಸದಸ್ಯ ಮಂಡಳಿ ತನಿಖೆ ನಡೆಸುತ್ತಿದೆ.

ಜಯಲಲಿತಾ ಅವರ ಸಾವಿನಿಂದಾಗಿ ತೆರವಾಗಿರುವ ಆರ್‌ಕೆ ನಗರ ಸ್ಥಾನಕ್ಕೆ ಎಐಎಡಿಎಂಕೆ ಅಭ್ಯರ್ಥಿ ಇ ಮಧುಸೂಧನ್ ವಿರುದ್ಧ ಪಕ್ಷದಿಂದ ಉಚ್ಛಾಟಿತ ನಾಯಕ ದಿನಕರನ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ದಿನಕರನ್ ಸದ್ಯ ಬೆಂಗಳೂರಿನ ಕಾರಾಗೃಹದಲ್ಲಿ ಬಂಧಿಯಾಗಿರುವ ಶಶಿಕಲಾ ಅವರ ಅಳಿಯನಾಗಿದ್ದಾರೆ.

ಈಗ ಬಿಡುಗಡೆ ಮಾಡಲಾಗಿರುವ ದೃಶ್ಯತುಣುಕನ್ನು ಯಾರು ಚಿತ್ರೀಕರಣ ಮಾಡಿದರು ಎಂದು ಪ್ರಶ್ನಿಸಿರುವ ಜಯಕುಮಾರ್ ಝಡ್ ಪ್ಲಸ್ ಭದ್ರತೆ ಹೊಂದಿದ್ದ ಜಯಲಲಿತಾ ಅವರ ಭದ್ರತಾ ವ್ಯವಸ್ಥೆಯನ್ನು ಮುರಿಯಲಾಗಿತ್ತೇ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ರೀತಿ ವಿಡಿಯೊ ಬಿಡುಗಡೆ ಮಾಡಿರುವುದು ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಯಾಗಿದ್ದು ದಿನಕರನ್ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳುವಂತೆ ಜಯಕುಮಾರ್ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X