Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.24: ಪಡುಬಿದ್ರೆಯಲ್ಲಿ ಜಿಲ್ಲಾ ಮಟ್ಟದ...

ಡಿ.24: ಪಡುಬಿದ್ರೆಯಲ್ಲಿ ಜಿಲ್ಲಾ ಮಟ್ಟದ ಅಂತರ್‌ ಯುವ ಮಂಡಲಗಳ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ20 Dec 2017 7:39 PM IST
share

ಪಡುಬಿದ್ರೆ, ಡಿ. 20: ಜಿಲ್ಲಾ ಮಟ್ಟದ ಅಂತರ್‌ಯುವ ಮಂಡಲಗಳ ಕ್ರೀಡಾಕೂಟ ಎರ್ಮಾಳು ತೆಂಕ ಕಿನಾರ ಆಂಗ್ಲ ಮಾಧ್ಯಮ ಕಿನಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.24ರಂದು ನಡೆಯಲಿದೆ.

ಕಾಪು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಯುವಕ ಮಂಡಲ ಗೌರವಾಧ್ಯಕ್ಷ ಸತೀಶ್ ಸಾಲ್ಯಾನ್ ಹೇಳಿದರು.

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರೂ ಯುವಕೇಂದ್ರ ಉಡುಪಿ, ಯುವಕ ಮಂಡಲ ಎರ್ಮಾಳು ತೆಂಕ ಹಾಗೂ ಯೂತ್‌ಕ್ಲಬ್ ಮುಂಬಯಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ವಾಲಿಬಾಲ್, ತ್ರೋಬಾಲ್, ಗ್ರಾಮೀಣ ಕ್ರೀಡೆಗಳಾದ ತೆಂಗಿನ ಕಾಯಿ ಓಟ, ಸಂಗೀತ ಕುರ್ಚಿ, ನಿಧಿ ಶೋಧನ, ಬಲೂನ್ ಹೊಡೆಯುವುದು, ಒಂಟಿ ಕಾಲು ಓಟ ಸಹಿತ ಹಲವು ಕ್ರೀಡೆಗಳು ನಡೆಯಲಿದೆ.

ಬೆಳಗ್ಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದು, ಮುಂಬಯ ಯೂತ್‌ಕ್ಲಬ್ ಅಧ್ಯಕ್ಷ ಯೋಗೀಶ್ ಕರ್ಕೇರ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಯುವಕ ಮಂಡಲ ಉಪಾಧ್ಯಕ್ಷ ಕಿಶನ್ ಪುತ್ರನ್ ಅಧ್ಯಕ್ಷತೆ ವಹಿಸಲಿದ್ದು, ನೆಹರೂ ಯುವಕೇಂದ್ರ ಜಿಲ್ಲಾ ಯುವಸಮನ್ವಯ ಅಧಿಕಾರಿ ವಿಲ್‌ಫ್ರೆಡ್ ಡಿಸೋಜ ಮತ್ತಿತರರು ಭಾಗವಹಿಸಲಿದ್ದಾರೆ.

ಸುವರ್ಣ ಸಂಭ್ರಮ, ರಜತಮಹೋತ್ಸವ: ಯುವಕ ಮಂಡಲ ಎರ್ಮಾಳು ಇದರ 50ನೆ ವರ್ಷದ ಅಂಗವಾಗಿ ಸುವರ್ಣ ಸಂಭ್ರಮ ಯೂತ್‌ಕ್ಲಬ್ 25ನೆ ವರ್ಷದ ಅಂಗವಾಗಿ ರಜತಮಹೋತ್ಸವವು ಡಿ.29ರಂದು ಕಿನಾರ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಯುವಕ ಮಂಡಲ ಅಧ್ಯಕ್ಷ ಮೋಹನ ಸುವರ್ಣ ಹೇಳಿದರು.

1968ರಲ್ಲಿ ಗ್ರಾಮದ ಯುವಶಕ್ತಿಯನ್ನು ಸಮಘಟಿಸಿ ಅವರಲ್ಲಿರುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ತೆಂಕ ಎರ್ಮಾಳಿನಲ್ಲಿ ಯುವಕ ಮಂಡಲವನ್ನು ರಚಿಸಲಾಯಿತು. 50ವರ್ಷಗಳಿಂದಲೂ ಸಂಸ್ಥೆಯ ಹಲವಾರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಆ ಬಳಿಕ ಮುಂಬೈಯಲ್ಲಿ ಯೂತ್‌ಕ್ಲಬ್ ಸ್ಥಾಪಿಸಲಾಯಿತು. ಇದೀಗ ಯೂತ್‌ಕ್ಲಬ್ 25ವರ್ಷ ಪೂರೈಸಿದೆ. ವಿದ್ಯಾನಿಧಿ, ಆರೋಗ್ಯನಿಧಿ, ಕ್ರೀಡಾನಿಧಿ, ಸೇವಾ ನಿಧಿ, ಸಾಂಸ್ಕೃತಿಕ ನಿಧಿ, ಧಾರ್ಮಿಕ ಸೇವಾನಿಧಿ, ಪರಿಸರ ನಿಧಿ ಭವಿಷ್ಯದ ಯೋಜನೆಗಳಾಗಿವೆ ಎಂದು ಅವರು ಹೇಳಿದರು.

ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್ ಉದ್ಘಾಟಿಸಲಿದ್ದಾರೆ. ಯುವಕ ಮಂಡಲ ಅಧ್ಯಕ್ಷ ಮೋಹನ ಸುವರ್ಣ ಅಧ್ಯಕ್ಷತೆ ವಹಿಸಲಿದ್ದು, ಸಮಾಜ ಸೇವಕ ಸುರೇಶ್ ಶೆಟ್ಟಿ ಗುರ್ಮೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಾಜಿ ಶಾಸಕ ಲಾಲಾಜಿ ಮೆಂಡನ್, ದಕ. ಉಡುಪಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಅದಾನಿ-ಯುಪಿಸಿಎಲ್ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ ಮತ್ತಿತತರು ಭಾಗವಹಿಸಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಕಿರಣ್ ಕಾಂಚನ್, ಸಾಂಸ್ಕೃತಿಕ ಕಾರ್ಯದರ್ಶಿ ಧರ್ಮರಾಜ್ ಎರ್ಮಾಳು, ಸುಕೇಶ್ ಸುವರ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X