Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರಳು ಪೂರೈಕೆಗೆ ಆನ್‌ಲೈನ್ ಮೂಲಕ ಅರ್ಜಿ:...

ಮರಳು ಪೂರೈಕೆಗೆ ಆನ್‌ಲೈನ್ ಮೂಲಕ ಅರ್ಜಿ: ಶಿವಮೊಗ್ಗ ಡಿಸಿ

ಪ್ರತಿ ತಾಲೂಕಿನಲ್ಲಿ ಕೌಂಟರ್ ಆರಂಭಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 Dec 2017 8:02 PM IST
share

ಶಿವಮೊಗ್ಗ, ಡಿ. 20: ಸಾರ್ವಜನಿಕರಿಗೆ ಸುಲಭವಾಗಿ ಮರಳು ಸಿಗುವಂತಾಗಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅವರು ತಿಳಿಸಿದ್ದಾರೆ.

 ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ ಅವರು, ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದಲ್ಲಿ ಸಾರ್ವಜನಿಕರಿಗೆ ಮರಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಸಾಫ್ ್ಟವೇರ್ ಸಿದ್ಧವಿದ್ದು, ಆದಷ್ಟು ಬೇಗನೆ ಪ್ರಾಯೋಗಿಕವಾಗಿ ಜಿಲ್ಲೆಯ ಎಲ್ಲ್ಲ ತಾಲೂಕುಗಳಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.

ಪ್ರತಿ ತಾಲೂಕಿನಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಇದಕ್ಕಾಗಿ ಕೌಂಟರ್ ತೆರೆಯಲಾಗುವುದು. ಮರಳು ಅಗತ್ಯವಿರುವವರು ಈ ಕೇಂದ್ರಕ್ಕೆ ಬಂದು ತಮಗೆ ಬೇಕಾಗಿರುವ ಮರಳಿನ ಪ್ರಮಾಣ ಇತ್ಯಾದಿ ಮಾಹಿತಿಯನ್ನು ಅಗತ್ಯ ದಾಖಲೆಗಳೊಂದಿಗೆ ಒದಗಿಸಬೇಕು. ಆನ್‌ಲೈನ್ ಮೂಲಕ ಸಹ ಈ ರೀತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಆನ್‌ಲೈನ್ ವಿಳಾಸದ ಮಾಹಿತಿಯನ್ನು ಆದಷ್ಟು ಬೇಗನೆ ಜಾಹೀರುಪಡಿಸಲಾಗುವುದು ಎಂದರು.

ಪ್ರತಿ ತಾಲೂಕಿನಲ್ಲಿ ಒಂದು ವಾರದ ಒಳಗಾಗಿ ಕೌಂಟರ್ ಆರಂಭಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಆಯಾ ತಾಲೂಕಿನ ಮರಳು ಬ್ಲಾಕಿಗೆ ನಿಗದಿಪಡಿಸಿರುವ ದರವನ್ನು ವಿಧಿಸಲಾಗುವುದು. ಮರಳು ಬ್ಲಾಕಿನಿಂದ ದೂರಕ್ಕೆ ಅನುಗುಣವಾಗಿ ಸಾಗಾಟ ವೆಚ್ಚವನ್ನು ಅಂತಿಮಪಡಿಸಿ ನೀಡಲು ಸಾರಿಗೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಪ್ತಿ ಮಾಡಿದ ಮರಳಿನ ಮಾಹಿತಿ ನೀಡಲು ಸೂಚನೆ: ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ಜಪ್ತಿ ಮಾಡಲಾಗಿರುವ ಮರಳಿನ ಪ್ರಮಾಣದ ವರದಿಯನ್ನು ತಾಲೂಕುವಾರು ಸಲ್ಲಿಸಬೇಕು. ಆಶ್ರಯ ಮನೆ ನಿರ್ಮಾಣಕ್ಕಾಗಿ ಹಾಗೂ ಸರಕಾರಿ ಕಾಮಗಾರಿಗಳಿಗೆ ಈ ಮರಳನ್ನು ಸರಕಾರ ನಿಗದಿಪಡಿಸಿದ ದರದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು. ಆಶ್ರಯ ಮನೆಗಳಿಗೆ ಅಗತ್ಯವಿರುವ ಮರಳಿನ ಪ್ರಮಾಣದ ಬಗ್ಗೆ ಗ್ರಾಮ ಪಂಚಾಯತ್ ಪಿಡಿಒ ಅಥವಾ ತಾಲೂಕು ಕಾರ್ಯನಿರ್ವಹಣಾಧಿಕಾರಿ ಅವರು ಪತ್ರ ನೀಡಿದರೆ ತಕ್ಷಣ ಒದಗಿಸಲಾಗುವುದು ಎಂದು ಅವರು ಹೇಳಿದರು.

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ದೊರೆತ ತಕ್ಷಣ ನೇರವಾಗಿ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ನೇರವಾಗಿ ಮಾಹಿತಿಯನ್ನು ಒದಗಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ತಾಲೂಕು ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಆಗಾಗ್ಗೆ ಸಭೆ ಸೇರಿ ಮರಳು ಸಾಗಾಟ, ಅಕ್ರಮಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಉಪವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳು ಸಭೆಯನ್ನು ನಡೆಸಬೇಕು. ಈ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞ್ಞಾನ ಅಧಿಕಾರಿಗಳು ಭಾಗವಹಿಸಬೇಕು ಎಂದು ಅವರು ಹೇಳಿದರು.

ತೀರ್ಥಹಳ್ಳಿ ತಾಲೂಕಿನ ಬಗ್ಗೋಡಿನಲ್ಲಿರುವ ಸಾಮಾನ್ಯ ಮರಳು ಬ್ಲಾಕ್‌ನಿಂದ ದಿನನಿತ್ಯ ಸಾಗಾಟಕ್ಕೆ ಅನುಮತಿ ನೀಡಲಾಗಿರುವ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಈ ಭಾಗದಲ್ಲಿ ಮರಳುಗಾರಿಕೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಎಸ್ಪಿ ಅಭಿನವ ಖರೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಹಿರಿಯ ಭೂವಿಜ್ಞಾನಿ ರಶ್ಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮರಳಿಗಾಗಿ ಅರ್ಜಿ ಸಲ್ಲಿಸಿರುವ ಗ್ರಾಹಕರ ದೃಢೀಕರಣಕ್ಕಾಗಿ ಆಧಾರ್ ಸಂಖ್ಯೆ ಅಥವಾ ಅವರ ಮೊಬೈಲ್‌ಗೆ ಒಟಿಪಿ ಕಳುಹಿಸಿ ದೃಢೀಕರಿಸಲಾಗುವುದು. ಬಳಿಕ ಸಂಬಂಧಪಟ್ಟ ತಾಲೂಕಿನಲ್ಲಿ ಈಗಾಗಲೇ ಜಿಪಿಎಸ್ ಅಳವಡಿಸಲಾಗಿರುವ ಲಾರಿ ನಿರ್ವಾಹಕರಿಗೆ ಸರದಿ ಪ್ರಕಾರ ಹಾಗೂ ಮರಳು ಪೂರೈಕೆದಾರರಿಗೆ ಪೂರೈಸಬೇಕಾದ ಮರಳಿನ ಪ್ರಮಾಣ ಹಾಗೂ ಮರಳು ತಲುಪಿಸಬೇಕಾಗಿರುವ ವಿಳಾಸದ ವಿವರನ್ನು ಕಳುಹಿಸಲಾಗುವುದು.

-ಡಾ.ಎಂ.ಲೋಕೇಶ್, ಡಿಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X