Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಜ.16 ರಿಂದ...

ಬೆಂಗಳೂರಿನಲ್ಲಿ ಜ.16 ರಿಂದ ಅಂತಾರಾಷ್ಟ್ರೀಯ ಕಾಫಿ ಉತ್ಸವ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ21 Dec 2017 6:27 PM IST
share
ಬೆಂಗಳೂರಿನಲ್ಲಿ ಜ.16 ರಿಂದ ಅಂತಾರಾಷ್ಟ್ರೀಯ ಕಾಫಿ ಉತ್ಸವ : ಪ್ರಿಯಾಂಕ್ ಖರ್ಗೆ

ಬೆಂಗಳೂರು, ಡಿ.21: ಅತ್ಯುತ್ತಮ ಕಾಫಿ ಬೆಳೆಯುವ ಜಗತ್ತಿನ ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ‘ಇಂಡಿಯಾ ಇಂಟರ್‌ನ್ಯಾಷನಲ್ ಕಾಫಿ ಫೆಸ್ಟಿವಲ್’(ಐಐಸಿಎಫ್) 7ನೇ ಆವೃತ್ತಿಯನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಗುರುವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಕಾಫಿ ಬೋರ್ಡ್ ಸಹಯೋಗದಲ್ಲಿ ಮುಂದಿನ ಸಾಲಿನ ಜ.16 ರಿಂದ 19ರವರೆಗೆ ನಡೆಯಲಿರುವ ಇಂಡಿಯಾ ಇಂಟರ್‌ನ್ಯಾಷನಲ್ ಕಾಫಿ ಫೆಸ್ಟಿವಲ್‌ನ 7ನೆ ಆವೃತ್ತಿಯ ಪೂರ್ವಭಾವಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಮ್ಮೇಳನದ ಮೂಲಕ ರಾಜ್ಯದ ಕೊಡಗು, ಚಿಕ್ಕಮಗಳೂರು ಮತ್ತು ಸಕಲೇಶಪುರ ಪ್ರದೇಶಗಳನ್ನು ಕೇವಲ ಕಾಫಿ ಬೆಳೆಯುವ ಜಿಲ್ಲೆಗಳಾಗಿ ಗುರುತಿಸುವುದು ಮಾತ್ರವಲ್ಲದೆ, ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಅತ್ಯುತ್ತಮ ಪರಿಸರ, ಸುಂದರ ಭೌಗೋಳಿಕ ಸೊಬಗು ಹಾಗೂ ಪ್ರವಾಸಿಗರು ತಂಗಲು ಅಗತ್ಯವಿರುವ, ಅತ್ಯುತ್ತಮ ಸೌಲಭ್ಯಗಳನ್ನು ಒಳಗೊಂಡ ಹೋಮ್‌ಸ್ಟೇ, ಇಲ್ಲಿನ ಸಂಸ್ಕೃತಿ, ಸಂಪ್ರದಾಯಗಳನ್ನು ಅಡಕವಾಗಿಸಿಕೊಂಡಿರುವ ಈ ಎಲ್ಲ ಜಿಲ್ಲೆಗಳಿಗೆ ಪ್ರವಾಸೋದ್ಯಮ ದೃಷ್ಟಿಯಿಂದಲೂ ಪ್ರಚಾರ ನೀಡಲು ಐಐಸಿಎಫ್ ಅನ್ನು ಒಂದು ಸಮರ್ಪಕ ವೇದಿಕೆಯನ್ನಾಗಿ ಬಳಸಿಕೊಳ್ಳುವ ಉದ್ದೇಶವನ್ನು ಪ್ರವಾಸೋದ್ಯಮ ಇಲಾಖೆ ಹೊಂದಿದೆ ಎಂದು ಅವರು ತಿಳಿಸಿದರು.

ಈ ಕಾರಣಕ್ಕಾಗಿ ನಾವು ಕಾಫಿ ಮಾರ್ಗ(ಕಾಫಿ ಟ್ರೇಲ್) ಮತ್ತು ಹೋಮ್‌ಸ್ಟೇಗಳ ಮೂಲಕ ಅನುಭವಿಕ ಪ್ರವಾಸೋದ್ಯಮಕ್ಕೆ ಅಗತ್ಯವಿರುವ ಅಥವಾ ಪೂರಕವಾಗಿರುವ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಬದ್ಧರಾಗಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕೇಂದ್ರ ಸರಕಾರದ ಕಾಫಿ ಬೋರ್ಡ್ ಆಫ್ ಇಂಡಿಯಾದ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಮಾತನಾಡಿ, 2000ನೇ ಇಸವಿಯಲ್ಲಿ ಕಾಫಿ ಬೋರ್ಡ್‌ನ ಸಹಕಾರದೊಂದಿಗೆ ಕಾಫಿ ಉದ್ಯಮವು ಜಂಟಿಯಾಗಿ ಆರಂಭಿಸಿದ ಇಂಡಿಯಾ ಇಂಟರ್‌ನ್ಯಾಷನಲ್ ಕಾಫಿ ಫೆಸ್ಟಿವಲ್ ಕಾರ್ಯಕ್ರಮವು, ಇಂದು ಕಾಫಿ ಉದ್ಯಮಕ್ಕೆ ಅತೀ ಮುಖ್ಯ ಹಾಗೂ ಪ್ರಮುಖ ವೇದಿಕೆಯಾಗಿ ಬೆಳೆದು ನಿಂತಿದೆ ಎಂದರು.

ಭಾರತದಲ್ಲಿ ಕಾಫಿ ಸೇವನೆಯನ್ನು ಉತ್ತೇಜಿಸಲು ಕಾಫಿ ಬೋರ್ಡ್ ಆಫ್ ಇಂಡಿಯಾ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರೊಂದಿಗೆ, ಜಾಗತಿಕ ಕಾಫಿ ಖರೀದಿದಾರರಿಗೆ ‘ಕಾಫಿ ಆಫ್ ಇಂಡಿಯಾ’ವನ್ನು ಪ್ರದರ್ಶಿಸುವ ಕಾರ್ಯವನ್ನು ಐಐಸಿಎಫ್ ಮಾಡಲಿದೆ. ಕೇಂದ್ರ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಚಿವ ಸುರೇಶ್‌ಪ್ರಭು ಈ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.

ಇಂಡಿಯಾ ಕಾಫಿ ಟ್ರಸ್ಟ್ ಅಧ್ಯಕ್ಷ ಅನಿಲ್‌ಕುಮಾರ್ ಭಂಡಾರಿ ಮಾತನಾಡಿ, ಈ ವರ್ಷದ ಸಮ್ಮೇಳನದಲ್ಲಿ ಭಾರತದ ಕಾಫಿ ಉದ್ಯಮದ ಪರಿಣಿತರ ಜತೆಗೆ ಬ್ರೆಝಿಲ್, ಯುಕೆ, ಯುಎಸ್‌ಎ, ಕೊಲಂಬಿಯಾ, ಇಟಲಿ, ಸ್ವಿಡ್ಜರ್‌ಲ್ಯಾಂಡ್, ಜರ್ಮನಿ, ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶಗಳ ಕಾಫಿ ಉದ್ಯಮದ ಪರಿಣಿತರು ಪಾಲ್ಗೊಳ್ಳಲಿದ್ದಾರೆ ಎಂದರು.

ಅಂತಾರಾಷ್ಟ್ರೀಯ ಕಾಫಿ ಒಕ್ಕೂಟದ ಕಾರ್ಯನಿರ್ವಾಹಕ ನಿರ್ದೇಶಕ ಜೋಸ್ ಸೆಟ್ಟ್, ಕೊಲಂಬಿಯಾ ಕಾಫಿ ಬೆಳೆಗಾರರ ಒಕ್ಕೂಟದ ಸಿಇಒ ರಾಬರ್ಟ್ ವೆಲೆಝ್, ಹಾರ್ವರ್ಡ್ ಮೆಡಿಕಲ್ ಸ್ಕೂಲ್‌ನ ಪ್ರೊಫೆಸರ್ ಆಫ್ ಮೆಡಿಸಿನ್ ಡಾ.ಸಂಜೀವ್ ಚೋಪ್ರಾ ಸೇರಿದಂತೆ ಹಲವಾರು ಗಣ್ಯರು ಈ ಸಮ್ಮೇಳನದಲ್ಲಿ ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ನಾಲ್ಕು ದಿನಗಳ ಕಾಲ ನಡೆಯುವ ಕಾಫಿ ಉತ್ಸವವು ಕಾಫಿಗೆ ಸಂಬಂಧಿಸಿದ ಎಲ್ಲ ವಿಧದ ಅಂತಾರಾಷ್ಟ್ರೀಯ ಕಾಫಿ ಪ್ರದರ್ಶನ, ಕೌಶಲ್ಯಾಭಿವೃದ್ಧಿ ಕಾರ್ಯಾಗಾರಗಳು, ಉತ್ಪನ್ನಗಳ ಬಿಡುಗಡೆ, ಕಾಫಿ ಕುರಿತು ರಸಪ್ರಶ್ನೆ, ಕಾಫಿ ಪ್ರಶಸ್ತಿಗಳು, ಗಾಲ್ಫ್ ಚಾಂಪಿಯನ್‌ಶಿಪ್ ಸೇರಿದಂತೆ ಹಲವಾರು ರೋಚಕ ಹಾಗೂ ಅತ್ಯಾಕರ್ಷಕ ಚಟುವಟಿಕೆಗಳನ್ನು ಒಳಗೊಂಡಿರಲಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X