Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾಲೂಕು ಕಚೇರಿಗೆ ರೈತಸಂಘದ ಕಾರ್ಯಕರ್ತರ...

ತಾಲೂಕು ಕಚೇರಿಗೆ ರೈತಸಂಘದ ಕಾರ್ಯಕರ್ತರ ಮುತ್ತಿಗೆ

ಪಡೆದ ಲಂಚ ವಸೂಲಿ; ಅಧಿಕಾರಿಗಳಿಗೆ ತರಾಟೆ

ವಾರ್ತಾಭಾರತಿವಾರ್ತಾಭಾರತಿ21 Dec 2017 10:11 PM IST
share
ತಾಲೂಕು ಕಚೇರಿಗೆ ರೈತಸಂಘದ ಕಾರ್ಯಕರ್ತರ ಮುತ್ತಿಗೆ

ಮದ್ದೂರು, ಡಿ.21: ತಾಲೂಕು ಮತ್ತಿತರೆ ಕಚೇರಿಯಲ್ಲಿನ ಭ್ರಷ್ಟಾಚಾರ ನಿಯಂತ್ರಣ ಮತ್ತು ಪಾರದರ್ಶಕ ಆಡಳಿತ ಹಾಗೂ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ(ಮೂಲ ಸಂಘಟನೆ)ದ ಕಾರ್ಯಕರ್ತರು ಗುರುವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದರು.

ಸರಕಾರಿ ಕಚೇರಿಗಳಲ್ಲಿ ಜನಸಾಮಾನ್ಯರು ಕೆಲಸಗಳು ಸರಿಯಾಗಿ ಆಗುತ್ತಿಲ್ಲ. ಭೂ ದಾಖಲೆ ಸಂಬಂಧದ, ಜಮೀನು ಖಾತಾ, ತಿದ್ದುಪಡಿ, ಪಹಣಿ ಹದ್‍ಬಸ್ತ್ ಅಳತೆ, ತತ್ಕಾಲ್ ಪೋಡಿ, ಸಾಮಾಜಿಕ ಭದ್ರತಾ ಯೋಜನೆಗಳ, ಪಡಿತರ ಚೀಟಿ ಮುಂತಾದ ಕೆಲಸಗಳಿಗೆ ಅಲೆಯಬೇಕಾಗಿದೆ ಎಂದು ಅವರು ಕಿಡಿಕಾರಿದರು.

ಹಿಂಗಾರು ಬೆಳೆ ಬಿತ್ತಲು ಹಣಕಾಸು ನೆರವು ಸಿಗುತ್ತಿಲ್ಲ. ಹೊಸದಾಗಿ ಬೆಳೆ ಸಾಲ ನೀಡುತ್ತಿಲ್ಲ. ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‍ಗಳ ರೈತರ ಸಾಲಮನ್ನಾಗೆ ಮುಂದಾಗುತ್ತಿಲ್ಲ. ಹಾಲಿನ ಬೆಲೆ ಕಡಿಮೆಯಾಗಿದೆ. ತೆಂಗಿಗೆ ಪರಿಹಾರ ಬಂದಿಲ್ಲ. ಅಡವಿಟ್ಟ ಆಭರಣಗಳ ಹರಾಜು ಹಾಕಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ವಾಣಿಜ್ಯ ಬ್ಯಾಂಕ್‍ನಲ್ಲಿನ ರೈತರ ಸಾಲಮನ್ನಾ ಮಾಡಬೇಕು. ಹಿಂಗಾರು ಬೆಳೆಗೆ ಹೊಸ ಸಾಲ ವಿತರಿಸಬೇಕು. ಹಾಲಿಗೆ ಕನಿಷ್ಠ 40 ರೂ. ನಿಗದಿ ಮಾಡಬೇಕು. ರೇಷ್ಮೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಒಣಗಿದ ತೆಂಗಿನ ಮರವೊಂದಕ್ಕೆ 10 ಸಾವಿರ ರೂ. ಪರಿಹಾರ ನೀಡಬೇಕು. ಟನ್ ಕಬ್ಬಿಗೆ 3,500 ರೂ.ನಿಗದಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ಉಪಾಧ್ಯಕ್ಷ ಎಸ್.ವಿಶ್ವನಾಥ್, ತಾಲೂಕು ಅಧ್ಯಕ್ಷ ರಮೇಶ್, ರಾಮಲಿಂಗೇಗೌಡ, ಸೋ.ಸಿ. ಪ್ರಕಾಶ್, ಕೆ.ರಾಮೇಗೌಡ, ನಿಂಗೇಗೌಡ, ಕೆ.ಜಿ.ಉಮೇಶ್, ಮಾದೇಗೌಡ, ಕೆಂಪೇಗೌಡ, ಗಣೇಶ್, ರಾಮಲಿಂಗಯ್ಯ, ಶ್ರೀಧರ್, ಪ್ರಭುಲಿಂಗ, ಕಿರಣ್ ಕುಮಾರ್, ತಮ್ಮಣ್ಣಗೌಡ, ಜೆ.ದಿನೇಶ್, ಕಾ.ಮ.ಮಹೇಶ್, ಎಳೇಗೌಡ, ಇತರ ಮುಖಂಡರು ಭಾಗವಹಿಸಿದ್ದರು.

ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡರು:
ತಮ್ಮ ಅಹವಾಲುಗಳನ್ನು ಸಾರ್ವಜನಿಕವಾಗಿ ಆಲಿಸಲು ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕೆಂದು ರೈತರು ಪಟ್ಟುಹಿಡಿದ ಪರಿಣಾಮ ತಹಸೀಲ್ದಾರ್ ಸೇರಿದಂತೆ ತಾಲೂಕು ಕಚೇರಿ, ಕೃಷಿ, ವಿದ್ಯುತ್, ಸರ್ವೆ, ಇತರೆ ಇಲಾಖೆ ಅಧಿಕಾರಿಗಳು ಕಚೇರಿ ಬಿಟ್ಟು ಸ್ಥಳಕ್ಕಾಗಮಿಸಿದರು.

ಸಾರ್ವಜನಿಕರ ಸಮ್ಮುಖದಲ್ಲಿ ದಾಖಲೆ ಸಮೇತ ಒಂದೊಂದೇ ಅಧಿಕಾರಿಯ ಬೆವರಿಳಿಸಿದ ಚಳವಳಿಗಾರರು, ಹಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಂಡರು. ಇನ್ನು ಮುಂದೆ ಸರಿಯಾಗಿ, ಸಮರ್ಪಕವಾಗಿ, ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಎಚ್ಚರಿಕೆ ನೀಡಿದರು.

ಪಡೆದ ಲಂಚ ವಸೂಲಿ:
ಕೃಷಿಪತ್ತಿನ ಸಹಕಾರ ಸಂಘದ ಸಾಲಕ್ಕೆ ಭೂಮಿ ರಿಜಿಸ್ಟರ್ ಮಾಡಲು ಕ್ಯಾತಘಟ್ಟದ ರೈತ ಕೆಂಪೇಗೌಡರಿಂದ ನಿಗದಿಗಿಂತ ಹೆಚ್ಚು ಪಡೆದಿದ್ದ ಹಣವನ್ನು ಸಬ್‍ರಿಜಿಸ್ಟ್ರಾರ್ ನಂಜಪ್ಪ ಪ್ರತಿಭಟನಾಕಾರರ ಸಮ್ಮುಖದಲ್ಲಿ ರೈತನಿಗೆ ಹಿಂತಿರುಗಿಸಿದರು.

ಸ್ಥಳಕ್ಕಾಗಮಿಸಿದ್ದ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರವಿ, ಸೆಸ್ಕ್ ಎಇಇ ಮಂಜುನಾಥ್, ತಾಲೂಕು ಕಚೇರಿ ಆಹಾರ ಶಾಖೆಯ ಮಹಾಲಕ್ಷ್ಮಿ, ಸಾಮಾಜಿಕ ಭದ್ರತಾ ಯೋಜನೆ ವಿಭಾಗದ ಗುಮಾಸ್ತೆ ಮಹದೇವಮ್ಮ ಅವರನ್ನು ರೈತರು ತರಾಟೆಗೆ ತೆಗೆದುಕೊಂಡು ಅವ್ಯವಸ್ಥೆ ಸರಿಪಡಿಸಿಕೊಳ್ಳಲು ತಾಕೀತು ಮಾಡಿದರು.

ತಾಲೂಕು ಕಚೇರಿಯಲ್ಲಿ ತೆಗೆಸಲಾಗಿರುವ ಸಿಸಿ ಕೆಮರ ಮತ್ತೆ ಅಳವಡಿಸುವುದಾಗಿ ಭರವಸೆ ನೀಡಿದ ತಹಸೀಲ್ದಾರ್ ನಾಗರಾಜು, ತಾನು ಇತ್ತೀಚೆಗೆ ಇಲ್ಲಿಗೆ ವರ್ಗವಾಗಿದ್ದು, ಸಮಸ್ಯೆಗಳ ಅರಿವಿರಲಿಲ್ಲ. ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿದರು.

ತಾಲೂಕಿನ ಎಸ್.ಐ.ಹಾಗಲಹಳ್ಳಿ ಇನಾಂ ಗ್ರಾಮವಾಗಿದ್ದು, ಪಹಣಿ ಪಡೆಯಲು ಸಾಧ್ಯವಾಗುತ್ತಿಲ್ಲ. ಕೈಬರಹದ ಪಹಣಿಯಿಂದ ಯಾವುದೇ ಸಾಲ ಸೌಲಭ್ಯ ಸಿಗುತ್ತಿಲ್ಲ. ರೀಸರ್ವೆ ಮಾಡಿಸಿ ಪಹಣಿ ದೊರೆಯುವಂತೆ ಮಾಡಬೇಕೆಂದು ರೈತರು ಒತ್ತಾಯಿಸಿದರು. ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ನಾಗರಾಜು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X