Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅತ್ಯಾಚಾರ ಸಮಕಾಲೀನ ಪ್ರಭುತ್ವದ ಅಧಿಕೃತ...

ಅತ್ಯಾಚಾರ ಸಮಕಾಲೀನ ಪ್ರಭುತ್ವದ ಅಧಿಕೃತ ಧೋರಣೆ: ಜಿ.ರಾಜಶೇಖರ್

ವಿಜಯಪುರದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಖಂಡಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ21 Dec 2017 10:46 PM IST
share
ಅತ್ಯಾಚಾರ ಸಮಕಾಲೀನ ಪ್ರಭುತ್ವದ ಅಧಿಕೃತ ಧೋರಣೆ: ಜಿ.ರಾಜಶೇಖರ್

ಉಡುಪಿ, ಡಿ.21: ಗುಜರಾತ್, ಕಾಶ್ಮೀರ, ಉತ್ತರ ಪ್ರದೇಶದ ಮುಝಫರಾಬಾದ್‌ಗಳಲ್ಲಿ ಮುಸ್ಲಿಮ್ ಮಹಿಳೆಯರ ಹಾಗೂ ಜಾರ್ಖಂಡ್, ಛತ್ತೀಸ್‌ಗಡ್ ನಲ್ಲಿ ಆದಿವಾಸಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರವು ಭಾರತದ ಸಮಕಾಲೀನ ಪ್ರಭುತ್ವದ ಅಧಿಕೃತ ಧೋರಣೆಯಾಗಿದೆ ಎಂದು ಹಿರಿಯ ಚಿಂತಕ ಜಿ.ರಾಜಶೇಖರ್ ಕಟುವಾಗಿ ಟೀಕಿಸಿದ್ದಾರೆ.

ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟ ಉಡುಪಿ ಜಿಲ್ಲೆ ಮತ್ತು ದಲಿತ ಹಿಂದುಳಿದ ಅಲ್ಪಸಂಖ್ಯಾತರ ಮಹಾ ಒಕ್ಕೂಟ ಉಡುಪಿ ಜಿಲ್ಲೆಯ ವತಿಯಿಂದ ವಿಜಯಪುರದ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ಗುರುವಾರ ಉಡುಪಿ ಅಜ್ಜರಕಾಡುವಿನ ಹುತ್ಮಾತ ಸ್ಮಾರಕ ಎದುರು ಹಮ್ಮಿಕೊಳ್ಳಲಾದ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಹೆಣ್ಣು ಎಂಬುದು ಒಂದು ಜೀವ ಅಲ್ಲ, ಮನಸ್ಸು ಅಲ್ಲ, ಆತ್ಮ ಅಲ್ಲ. ಕೇವಲ ದೇಹ ಮಾತ್ರ ಎಂಬ ಧೋರಣೆಯು ಅತ್ಯಾಚಾರದ ಹಿಂದೆ ಕೆಲಸ ಮಾಡುತ್ತದೆ. ಹೆಣ್ಣಿನ ಮೇಲಿನ ಅತ್ಯಾಚಾರವು ಆಕೆಯ ಅಸ್ತಿತ್ವದ ನಿರಾಕರಣೆಯಾಗಿದೆ ಎಂದ ಅವರು, ವಿಜಯಪುರ ಬಾಲಕಿ ಮೇಲಿನ ಅತ್ಯಾಚಾರದ ಪ್ರಕರಣದ ಹಿಂದೆ ಹಿಂದುತ್ವವಾದಿ ನಾಯಕ ಇರುವುದು ನಿಜವಾದರೆ ಅದು ಹಿಂದುತ್ವ ಸಿದ್ಧಾಂತದ ಸೋಗಲಾಡಿತವನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದರು.

ಸಂಘಪರಿವಾರದವರು ಮಹಿಳೆಯರನ್ನು ಮಾತೆಯರು ಎಂದು ಹೇಳುತ್ತಾರೆ. ಆದರೆ ಸುತ್ತಮುತ್ತಲಿನ ಮಹಿಳೆಯರನ್ನು ಬರೀ ದೇಹಗಳಾಗಿ ನೋಡುತ್ತಾರೆ. ದೇವತೆ, ದುರ್ಗೆ, ಮಾತೆ ಎಂಬುದಾಗಿ ವೈಭವೀಕರಣ ಜೊತೆಗೆ ಸುತ್ತಮುತ್ತಲ ರಕ್ತ ಮಾಂಸದ ಮಹಿಳೆಯರನ್ನು ಅಮಾನುಷವಾಗಿ ನೋಡುವ ಈ ದ್ವಿಮುಖ ಪ್ರವೃತ್ತಿ ಸಂಘಪರಿವಾರದ ಸಂಸ್ಕೃತಿಯ ಲಕ್ಷ್ಮಣವಾಗಿದೆ ಎಂದು ಅವರು ದೂರಿದರು.

ದಲಿತ ಮುಖಂಡ ಸುಂದರ ಮಾಸ್ತರ್ ಮಾತನಾಡಿ, ಹೊನ್ನಾವರದಲ್ಲಿ ಮೇಸ್ತ ಸಾವಿನ ಹೆಸರಿನಲ್ಲಿ ರಾಜಕೀಯ ನಡೆಸಿ ಬೆಂಕಿ ಹಚ್ಚಿರುವ ಸಂಘಪರಿವಾರದ ನಾಯಕರು ಈಗ ಎಲ್ಲಿದ್ದಾರೆ. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂದು ಹೇಳುವ ಸಂಘಪರಿವಾರದ ನಾಯಕರಿಗೆ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು.

 ದಲಿತ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಕೇವಲ ಪರಿಹಾರ ಕೊಟ್ಟು ಮುಚ್ಚಿ ಹಾಕುವ ಕೆಲಸವನ್ನು ಸರಕಾರಗಳು ಮಾಡುತ್ತಿವೆ. ಆದುದರಿಂದ ರಾಜ್ಯ ಸರಕಾರ ಈ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ಗಳನ್ನು ಕೂಡಲೇ ಬಂಧಿಸಬೇಕು. ಆ ಮೂಲಕ ಬಾಲಕಿಯ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಬೇಕು. ದಲಿತ ದೌರ್ಜನ್ಯ ಕಾಯಿದೆಯನ್ನು ಬಲಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಧರ್ಮಗುರು ಫಾ.ವಿಲಿಯಂ ಮಾರ್ಟಿಸ್, ಜಮಾಅತೆ ಇಸ್ಲಾಮೀ ಹಿಂದ್‌ನ ಅಕ್ಬರ್ ಅಲಿ, ದಲಿತ ಮುಖಂಡ ಶೇಖರ್ ಹೆಜ್ಮಾಡಿ, ಹೋರಾಟಗಾರ ಹರ್ಷ ಕುಮಾರ್ ಕುಗ್ವೆ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ ಶ್ಯಾಮ್‌ರಾಜ್ ಬಿರ್ತಿ, ವಿ.ಮಂಜುನಾಥ್, ಪ್ರೊ.ಫಣಿರಾಜ್, ಮಂಜುನಾಥ್ ಬಾಳ್ಕುದ್ರು, ರಮೇಶ್ ಕೋಟ್ಯಾನ್, ರಿಯಾಝ್ ಅಹ್ಮದ್, ಅಬ್ದುಲ್ ಅಝೀಝ್, ಹುಸೇನ್ ಕೋಡಿಬೆಂಗ್ರೆ, ಸಿರಿಲ್ ಮಥಾಯಸ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X