Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕರ್ವೆಯ ಸಂಸ್ಕೃತಿ ಚಿಂತನೆ

ಕರ್ವೆಯ ಸಂಸ್ಕೃತಿ ಚಿಂತನೆ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ21 Dec 2017 6:38 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕರ್ವೆಯ ಸಂಸ್ಕೃತಿ ಚಿಂತನೆ

ಖ್ಯಾತ ಮಾನವಶಾಸ್ತ್ರಜ್ಞೆ, ಲೇಖಕಿ ಇರಾವತಿ ಕರ್ವೆ ತಮ್ಮ ‘ಯುಗಾಂತ’ ಕೃತಿಯ ಮೂಲಕ ಪ್ರಸಿದ್ಧಿಯನ್ನು ಪಡೆದವರು. ಮಹಾಭಾರತದ ಪಾತ್ರಗಳನ್ನು ಮನಃಶ್ಶಾಸ್ತ್ರೀಯ ನೆಲೆಯಲ್ಲಿ ಅಧ್ಯಯನ ಮಾಡಿ ವಿಶ್ಲೇಷಿಸಿದರು. ಮಹಾಭಾರತದ ರೂಪಕಗಳನ್ನು ಒಡೆದು, ಅದನ್ನು ವಾಸ್ತವದ ಕಣ್ಣಲ್ಲಿ ನೋಡಿ ಬರೆದ ‘ಯುಗಾಂತ’ ಮಹಾಭಾರತ ಕಾವ್ಯಕ್ಕೆ ಹೊಸತೊಂದು ಮಗ್ಗುಲನ್ನು ನೀಡಿದ್ದು ಸುಳ್ಳಲ್ಲ. ಈ ಯುಗಾಂತ ಕೃತಿಯಿಂದ ಪ್ರೇರಣೆ ಪಡೆದು, ಎಸ್. ಎಲ್. ಭೈರಪ್ಪ ‘ಪರ್ವ’ ಕಾದಂಬರಿಯನ್ನು ಬರೆದರು ಎಂದು ಹೇಳಲಾಗುತ್ತದೆ.
‘ನಮ್ಮ ಸಂಸ್ಕೃತಿ’ ಇರಾವತಿ ಕರ್ವೆ ಅವರ ಸಂಸ್ಕೃತಿ ಚಿಂತನೆಯ ಬಿಡಿ ಬರಹಗಳು. ಚಂದ್ರಕಾಂತ ಪೋಕಳೆಯವರು ಇದನ್ನು ಮರಾಠಿಯಿಂದ ಕನ್ನಡಕ್ಕಿಳಿಸಿದ್ದಾರೆ. ಸಂಸ್ಕೃತಿ ಎಂದರೇನು? ಎನ್ನುವು ದರಿಂದ ಹಿಡಿದು ಈ ದೇಶದ ಸಂರಚನೆಯ ಕುರಿತಂತೆ ಬೇರೆ ಬೇರೆ ನೆಲೆಗಳಲ್ಲಿ ಈ ಕೃತಿ ಚರ್ಚಿಸುತ್ತದೆ. ಹಿಂದೂಗಳ ಸಾಂಸ್ಕೃತಿಕ ಇತಿಹಾಸದ ಮರ್ಮ, ಸಾಹೇಬರು ಮತ್ತು ನಮ್ಮ ಸಂಸ್ಕೃತಿ, ಭಾರತದ ಗಿರಿಜನರು, ಗೋಹತ್ಯೆ ನಿಷೇಧದ ಚಳವಳಿ, ಸಮಾಜ ಶಾಸ್ತ್ರೀಯ ದೃಷ್ಟಿಯಲ್ಲಿ ಹೊಸ ಹಿಂದೂ ಕಾನೂನಿನ ಸಮೀಕ್ಷೆ, ಭಾರತೀಯ ಭಾಷೆ ಮತ್ತು ಇಂಗ್ಲಿಷ್‌ನ ಸ್ಥಾನ, ಸಂಸ್ಕೃತಿಯ ಹಿನ್ನೆಲೆಯಲ್ಲಿ ಮಹಿಳೆಯರು ಹೀಗೆ ಒಟ್ಟು 10 ಅಧ್ಯಾಯಗಳು ಇಲ್ಲಿವೆ.
ಸಂಸ್ಕೃತಿಯಲ್ಲಿರುವ ಕೆಡುಕನ್ನು ಉಚ್ಚಾಟನೆ ಮಾಡುವಾಗ ವ್ಯಕ್ತಿ ಅಥವಾ ವರ್ಗದ ಬಗೆಗೆ ದ್ವೇಷವಾಗಲಿ, ಸೇಡಿನ ಭಾವನೆಯಾಗಲಿ ಇರಬಾರದು ಎನ್ನುವಂತಹ ಎಚ್ಚರಿಕೆಯನ್ನು ನೀಡುತ್ತಲೇ ಇಲ್ಲಿ ಸಂಸ್ಕೃತಿಯನ್ನು ವಿಶ್ಲೇಷಿಸಲು ಹೊರಟಿದ್ದಾರೆ. ಹಿಂದೂ ಸಂಸ್ಕೃತಿಯ ಬಗ್ಗೆ ವಿವರಿಸುತ್ತಾ, ಇಲ್ಲಿ ಸಂಸ್ಕೃತಿಯ ಸಂಘರ್ಷ ಜರುಗಿ ಒಬ್ಬರ ಸೋಲು, ಮತ್ತೊಬ್ಬರ ಗೆಲುವು ಎಂಬ ದೃಶ್ಯ ಹಿಂದೂಸ್ಥಾನದಲ್ಲಿ ಕಾಣದೆ, ಅದರ ಸಮನ್ವಯ ಜರುಗಿ, ಇಬ್ಬರ ನಡುವಿನ ಕೊಡುಕೊಳ್ಳುವಿಕೆಯಲ್ಲಿ ಮುಕ್ತಾಯವಾಗುವುದನ್ನು ಅವರು ವಿವರಿಸುತ್ತಾರೆ. ಆಂಗ್ಲರು ನಮ್ಮ ಮೇಲೆ ಬೀರಿರುವ ಪರಿಣಾಮಗಳು, ಅದರ ಒಳಿತು ಕೆಡುಕುಗಳನ್ನು ಚರ್ಚಿಸುತ್ತಾ, ನಮಗೆ ಬೇಕಾಗಿದ್ದು ಹೊಸ ಅರ್ಥಶಾಸ್ತ್ರ, ಹೊಸ ರಾಜ್ಯತಂತ್ರ, ಹೊಸ ವಿಜ್ಞಾನ ಆಗಿರದೆ ಹೊಸ ಸಮಾಜಶಾಸ್ತ್ರ ಬೇಕಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಅದು ಒಂದು ಜೀವನದ ವೌಲ್ಯ ಏನು ಎನ್ನುವುದು ನಿರ್ಧಾರಗೊಂಡರೆ ಉಳಿದ ಸಾಮಾಜಿಕ ಜೀವನದ ಕ್ಷೇತ್ರಗಳು ಖಂಡಿತಕ್ಕೂ ನಿಶ್ಚಿತರೂಪ ಪಡೆಯುತ್ತವೆ. ಇದೇ ಸಂದರ್ಭದಲ್ಲಿ ಆ ಸಮಾಜಶಾಸ್ತ್ರ ನಮ್ಮದೇ ನೆಲದ ಸಾಂಸ್ಕೃತಿಕ ಅರಿವಿನಿಂದ ರೂಪುಗೊಳ್ಳಬೇಕು ಎಂದು ಬಯಸುತ್ತಾರೆ. ಸಂಗ್ರಹಗೊಂಡ ಕೊಳಚೆಯಾಚೆಯ ಜೊತೆಗೇ ನಮ್ಮ ಸಂಸ್ಕೃತಿಯೊಳಗಿರುವ ಅವಿನಾಶಿ ವೌಲ್ಯಗಳನ್ನು ಗುರುತಿಸುವ ಕೆಲಸ ನಡೆಯೇಕು ಎಂದು ಅವರು ಹೇಳುತ್ತಾರೆ.
ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 112 ರೂ. ಮುಖಬೆಲೆ 85 ರೂಪಾಯಿ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X