Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಡಿ ವಿವಾದ: ಚೀನಾ ಕೌನ್ಸಿಲರ್‌ ಅನ್ನು...

ಗಡಿ ವಿವಾದ: ಚೀನಾ ಕೌನ್ಸಿಲರ್‌ ಅನ್ನು ಭೇಟಿಯಾದ ಅಜಿತ್ ಧೋವಲ್

ವಾರ್ತಾಭಾರತಿವಾರ್ತಾಭಾರತಿ22 Dec 2017 6:16 PM IST
share
ಗಡಿ ವಿವಾದ: ಚೀನಾ ಕೌನ್ಸಿಲರ್‌ ಅನ್ನು ಭೇಟಿಯಾದ ಅಜಿತ್ ಧೋವಲ್

ಹೊಸದಿಲ್ಲಿ, ಡಿ. 22: ವಾರ್ಷಿಕ ಗಡಿ ಚರ್ಚೆಯ 20ನೇ ಸುತ್ತಿನಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ಧೋವಲ್ ಚೀನಾದ ಕೌನ್ಸಿಲರ್ ಯಾಂಗ್ ಜೀಚಿ ಅವರನ್ನು ಹೊಸದಿಲ್ಲಿಯಲ್ಲಿ ಶುಕ್ರವಾರ ಭೇಟಿಯಾದರು. ಡೊಕ್ಲಾದಲ್ಲಿ ಉಂಟಾದ ಘರ್ಷಣೆಯನ್ನು ಬಗೆಹರಿಸಿದ ನಂತರ ಇದೇ ಮೊದಲ ಬಾರಿ ಎರಡು ದೇಶಗಳ ಪ್ರತಿನಿಧಿಗಳು ಭೇಟಿಯಾಗುತ್ತಿದ್ದಾರೆ. ಈ ಇಬ್ಬರು ಈ ಹಿಂದೆ ಸೆಪ್ಟೆಂಬರ್‌ನಲ್ಲಿ ಕ್ಸಿಯಮೆನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪರಸ್ಪರ ಭೇಟಿಯಾಗಿದ್ದರು. ದಿನವಿಡೀ ನಡೆದ ಚರ್ಚೆಯಲ್ಲಿ ಎರಡು ದೇಶಗಳ ಪ್ರತಿನಿಧಿಗಳು ಡೋಕ್ಲಾ ಸೇರಿದಂತೆ ಭಾರತ ಮತ್ತು ಚೀನಾದ ಮಧ್ಯೆ ಬಗೆಹರಿಯದೆ ಉಳಿದಿರುವ ಗಡಿ ವಿವಾದಕ್ಕೆ ಸಂಬಂಧಪಟ್ಟ ವಿಷಯಗಳನ್ನು ಪ್ರಸ್ತಾಪಿಸಿದರು.

ಧೋವಲ್ ಮತ್ತು ಜೀಚಿ ಭೇಟಿಯ ಬಗ್ಗೆ ವಿದೇಶಾಂಗ ಸಚಿವಾಲಯ ಬುಧವಾರದಂದು ಮಾಹಿತಿ ನೀಡಿತ್ತು. ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಆತಿಥ್ಯ ವಹಿಸಿದ್ದ ರಷ್ಯಾ-ಭಾರತ-ಚೀನಾ ನಡುವಿನ ತ್ರಿಪಕ್ಷೀಯ ಸಭೆಯು ನಡೆದ ಮರುದಿನವೇ ಎರಡು ದೇಶಗಳ ಪ್ರತಿನಿಧಿಗಳು ಭೇಟಿಯಾದರು. ಡೋಕ್ಲಾ ಸ್ಥಿತಿಯು ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ದೊಡ್ಡ ಪರೀಕ್ಷೆಯನ್ನು ಒಡ್ಡಿದ್ದು ಇಂಥ ಸ್ಥಿತಿಯು ಮುಂದೆ ಉಂಟಾಗದಂತೆ ಎರಡೂ ದೇಶಗಳು ಇದರಿಂದ ಪಾಠ ಕಲಿಯಬೇಕಿದೆ ಎಂದು ಚೀನಾ ಮಂಗಳವಾರ ತಿಳಿಸಿತ್ತು.

ಭೂತಾನ್‌ಗೆ ಸೇರಿದ್ದು ಎನ್ನಲಾದ ಭೂಪ್ರದೇಶದಲ್ಲಿ ಚೀನಾವು ರಸ್ತೆಯನ್ನು ನಿರ್ಮಿಸಲು ಮುಂದಾದ ಹಿನ್ನೆಲೆಯಲ್ಲಿ ಜೂನ್ 16ರಂದು ಡೋಕ್ಲಾದಲ್ಲಿ ಎರಡೂ ದೇಶಗಳ ಸೇನೆಯು ಮುಖಾಮುಖಿಯಾಗಿತ್ತು. ಇದು ದೇಶದ ಭದ್ರತೆಗೆ ಮುಖ್ಯವಾಗಿ ಭಾರತವನ್ನು ಈಶಾನ್ಯ ರಾಜ್ಯಗಳ ಜೊತೆ ಸೇರಿಸುವ ಪ್ರದೇಶವಾದ ಕೋಳಿ ಕತ್ತಿಗೆ (ಚಿಕನ್ ನೆಕ್) ಅಪಾಯವನ್ನೊಡ್ಡುವ ಕಾರಣ ಭಾರತೀಯ ಸೇನೆಯು ಈ ರಸ್ತೆ ನಿರ್ಮಾಣವನ್ನು ತಡೆಯಲು ಯತ್ನಿಸಿತ್ತು. ಎರಡೂ ದೇಶಗಳ ನಡುವೆ ಪರಸ್ಪರ ಒಪ್ಪಂದ ಏರ್ಪಡುವ ಮೂಲಕ ಆಗಸ್ಟ್ 28ರಂದು ಸೇನೆಗಳ ನಡುವಿನ ಘರ್ಷಣೆ ಕೊನೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X