Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾಂಬ್ರಿ, ರಾಮ್‌ಕುಮಾರ್‌ಗೆ ವೈಲ್ಡ್...

ಭಾಂಬ್ರಿ, ರಾಮ್‌ಕುಮಾರ್‌ಗೆ ವೈಲ್ಡ್ ಕಾರ್ಡ್

ಟಾಟಾ ಓಪನ್

ವಾರ್ತಾಭಾರತಿವಾರ್ತಾಭಾರತಿ23 Dec 2017 11:51 PM IST
share
ಭಾಂಬ್ರಿ, ರಾಮ್‌ಕುಮಾರ್‌ಗೆ ವೈಲ್ಡ್ ಕಾರ್ಡ್

ಪುಣೆ, ಡಿ.23: ಭಾರತದ ಮೂವರು ಟೆನಿಸ್ ಆಟಗಾರರಾದ ಯೂಕಿ ಭಾಂಬ್ರಿ, ರಾಮ್‌ಕುಮಾರ್ ರಾಮನಾಥನ್ ಹಾಗೂ ಅರ್ಜುನ್ ಕಧೆ ಟಾಟಾ ಓಪನ್ ಎಟಿಪಿ 250 ವರ್ಲ್ಡ್ ಟೂರ್ ಟೂರ್ನಿಯಲ್ಲಿ ನೇರ ಪ್ರವೇಶ ಪಡೆದಿದ್ದಾರೆ. ಮಹಲುಂಗೆ ಬಾಲೆವಾಡಿ ಸ್ಟೇಡಿಯಂನಲ್ಲಿ ಡಿ.30,31 ರಂದು ಅರ್ಹತಾ ಸುತ್ತಿನ ಪಂದ್ಯಗಳ ಮೂಲಕ ಆರಂಭವಾಗಲಿರುವ ಟೂರ್ನಿಯು 2018ರ ಜ.6ರ ತನಕ ನಡೆಯಲಿದೆ. ಮೊದಲ ಆವೃತ್ತಿಯ ಟಾಟಾ ಓಪನ್ ಮಹಾರಾಷ್ಟ್ರ ಟೂರ್ನಿಗೆ ಶನಿವಾರ ಆಯೋಜಕರು ವೈರ್ಲ್ಡ್‌ಕಾರ್ಡ್ ಪ್ರವೇಶ ಪಡೆದವರ ಪಟ್ಟಿ ಪ್ರಕಟಿಸಿದ್ದಾರೆ.

1996ರಲ್ಲಿ ಆರಂಭವಾಗಿರುವ ಈ ಟೂರ್ನಮೆಂಟ್ ಕಳೆದ 21 ವರ್ಷಗಳಿಂದ ಚೆನ್ನೈನಲ್ಲಿ ಚೆನ್ನೈ ಓಪನ್ ಟೂರ್ನಿ ಎನ್ನುವ ಹೆಸರಲ್ಲಿ ನಡೆಯುತ್ತಿತ್ತು. ಈ ವರ್ಷ ಟೂರ್ನಿಯು ಪುಣೆಗೆ ಸ್ಥಳಾಂತರವಾಗಿದ್ದು ಟಾಟಾ ಓಪನ್ ಹೆಸರಿನಲ್ಲಿ ನಡೆಯಲಿದೆ.ಟೂರ್ನಿಯಲ್ಲಿ ವಿಶ್ವದ ನಂ.6ನೇ ರ್ಯಾಂಕಿನ ಆಟಗಾರ ಮರಿನ್ ಸಿಲಿಕ್, ಯುಎಸ್ ಓಪನ್ ಫೈನಲಿಸ್ಟ್ ಕೇವಿನ್ ಆ್ಯಂಡರ್ಸನ್ ಹಾಗೂ ಕ್ರೊಯೇಷಿಯದ ಇವೊ ಕಾರ್ಲೊವಿಕ್ ಸಹಿತ ಹಲವು ಪ್ರಮುಖ ಆಟಗಾರರು ಭಾಗವಹಿಸುತ್ತಿದ್ದಾರೆ.

ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ ಭಾಂಬ್ರಿ ಟೂರ್ನಿಯಲ್ಲಿ ಭಾರತದ ನಾಯಕತ್ವವಹಿಸಲಿದ್ದಾರೆ. 25ರ ಹರೆಯದ ಭಾಂಬ್ರಿ ಒಂದು ವರ್ಷದಿಂದ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ.

ನವೆಂಬರ್‌ನಲ್ಲಿ ಕೆಪಿಐಟಿ-ಎಂಎಸ್‌ಎಲ್‌ಟಿಎ ಚಾಲೆಂಜರ್ ಟೂರ್ನಿಯಲ್ಲಿ ರಾಮನಾಥನ್‌ರನ್ನು ಸೋಲಿಸಿದ್ದ ಭಾಂಬ್ರಿ ಪ್ರಶಸ್ತಿ ಜಯಿಸಿದ್ದರು.

ವಾಶಿಂಗ್ಟನ್‌ನಲ್ಲಿ ನಡೆದ ಸಿಟಿ ಓಪನ್‌ನಲ್ಲಿ ಕ್ವಾರ್ಟರ್‌ಫೈನಲ್‌ಗೆ ತಲುಪಿದ್ದ ಭಾಂಬ್ರಿ ದ.ಆಫ್ರಿಕದ ಕೇವಿನ್ ಆ್ಯಂಡರ್ಸನ್ ವಿರುದ್ಧ 3 ಸೆಟ್‌ಗಳ ಅಂತರದಿಂದ ಸೋತಿದ್ದರು.

 ಭಾರತೀಯ ಎಟಿಪಿ ಟೂರ್ನಿಯಲ್ಲಿ ಭಾಂಬ್ರಿ ಆರನೇ ಬಾರಿ ಪ್ರಧಾನ ಸುತ್ತಿನಲ್ಲಿ ಸ್ಪರ್ಧಿಸುತ್ತಿದ್ದಾರೆ. 2014ರಲ್ಲಿ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದ ಭಾಂಬ್ರಿ ಅವರು ವಾಸೆಕ್ ಪೊಪಿಸಿಲ್ ವಿರುದ್ಧ್ದ ಸೋತಿದ್ದರು.

 ‘‘ಈ ವರ್ಷ 20ಕ್ಕೂ ಅಧಿಕ ಟೂರ್ನಮೆಂಟ್‌ಗಳನ್ನು ಆಡಿದ್ದೇನೆ. ಕಳೆದ ಬಾರಿ ಪುಣೆಯಲ್ಲಿ ಟೂರ್ನಿಯನ್ನು ಗೆದ್ದುಕೊಂಡಿದ್ದೆ. ಈ ಟೂರ್ನಿಯನ್ನು ಎದುರು ನೋಡುತ್ತಿರುವೆ’’ ಎಂದು ಭಾಂಬ್ರಿ ಹೇಳಿದ್ದಾರೆ.ಐಟಿಎಫ್ ಫ್ಯೂಚರ್ಸ್ ಇವೆಂಟ್‌ನಲ್ಲಿ ಮೂರು ಪ್ರಶಸ್ತಿಗಳನ್ನು ಜಯಿಸಿರುವ ರಾಮನಾಥನ್(142ನೇ ರ್ಯಾಂಕ್)ಪ್ರಧಾನ ಸುತ್ತಿಗೆ ನೇರ ಪ್ರವೇಶ ಪಡೆದಿದ್ದಾರೆ.

23ರ ಹರೆಯದ ಚೆನ್ನೈ ಆಟಗಾರ ರಾಮನಾಥನ್ ಐದನೇ ಬಾರಿ ಪ್ರಧಾನ ಸುತ್ತಿನಲ್ಲಿ ಆಡುತ್ತಿದ್ದಾರೆ. 2016ರಲ್ಲಿ ಕ್ವಾರ್ಟರ್ ಫೈನಲ್ ತಲುಪಿರುವುದು ರಾಮನಾಥನ್ ಸಾಧನೆಯಾಗಿದೆ. ಮೊದಲ ಬಾರಿ ಫ್ಯೂಚರ್ಸ್ ಇವೆಂಟ್‌ನ್ನು ಜಯಿಸಿರುವ ಅರ್ಜುನ್ ಕಧೆ ಮಹಾರಾಷ್ಟ್ರ ಓಪನ್‌ನ ಪ್ರಧಾನ ಸುತ್ತಿಗೆ ವೈರ್ಲ್ಡ್‌ಕಾರ್ಡ್ ಪಡೆದಿದ್ದಾರೆ. 2012ರಲ್ಲಿ ತನ್ನ 18ರ ಹರೆಯದಲ್ಲಿ ಚೆನ್ನೈ ಓಪನ್‌ನ ಅರ್ಹತಾ ಸುತ್ತಿನಲ್ಲಿ ಆಡಿದ್ದ ಅರ್ಜುನ್ ಕೆನ್ನಿ ಡಿ ಸ್ಚೆಪ್ಪೆರ್ ವಿರುದ್ಧ್ದ ಸೋತಿದ್ದರು.ಮೊದಲ ಆವೃತ್ತಿಯ ಟಾಟಾ ಓಪನ್ ಟೂರ್ನಿಯಲ್ಲಿ ಟೆನಿಸ್ ಅಭಿಮಾನಿಗಳನ್ನು ಸ್ಟೇಡಿಯಂನತ್ತ ಆಕರ್ಷಿಸಲು ಟಿಕೆಟ್ ದರವನ್ನು 150 ರೂ.ನಿಂದ 500 ರೂ. ತನಕ ನಿಗದಿಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X