Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ಹುಟ್ಟುಹಬ್ಬದ ಸಂಭ್ರಮ

ಬಾಬ್ರಿ ಮಸೀದಿ ಧ್ವಂಸವನ್ನು ‘ಕೆಟ್ಟ ತಪ್ಪು ಲೆಕ್ಕಾಚಾರ' ಎಂದಿದ್ದ ‘ಅಜಾತಶತ್ರು’

ವಾರ್ತಾಭಾರತಿವಾರ್ತಾಭಾರತಿ25 Dec 2017 4:18 PM IST
share
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ಹುಟ್ಟುಹಬ್ಬದ ಸಂಭ್ರಮ

ಹೊಸದಿಲ್ಲಿ, ಡಿ.25: ಮಾಜಿ ಪ್ರಧಾನಿ ಹಾಗೂ ಭಾರತದ ಪ್ರಸಿದ್ಧ ರಾಜಕೀಯ ನೇತಾರರಲ್ಲೊಬ್ಬರಾದ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬವನ್ನು ಡಿಸೆಂಬರ್ 25ರಂದು ಸರಕಾರ ‘ಉತ್ತಮ ಆಡಳಿತ ದಿನ’ವನ್ನಾಗಿ ಆಚರಿಸುತ್ತಿದೆ.

1924ರಲ್ಲಿ ಗ್ವಾಲಿಯರ್ ನಲ್ಲಿ ಜನಿಸಿದ ವಾಜಪೇಯಿ ಅವರು 1996ರಲ್ಲಿ 13 ದಿನಗಳ ಕಾಲ ಭಾರತದ ಪ್ರಧಾನಿಯಾಗಿದ್ದರೆ, 1998ರಲ್ಲಿ 13 ತಿಂಗಳು ಹಾಗೂ 1996ರಿಂದ ಸುಮಾರು ಆರು ವರ್ಷಗಳ ಕಾಲ ಪ್ರಧಾನಿ ಹುದ್ದೆಯಲ್ಲಿದ್ದವರು.  ತಮ್ಮ ಸಂಪೂರ್ಣ ಐದು ವರ್ಷ ಅವಧಿಯನ್ನು ಪೂರೈಸಿದ ಏಕೈಕ ಕಾಂಗ್ರೆಸ್ಸೇತರ ಪ್ರಧಾನಿ ಅವರಾಗಿದ್ದರು.

ಗ್ವಾಲಿಯರ್ ನ ಶಾಲಾ ಶಿಕ್ಷಕರೊಬ್ಬರ ಪುತ್ರನಾಗಿರುವ ವಾಜಪೇಯಿ ಅವರು 1939ರಲ್ಲಿ ಆರೆಸ್ಸೆಸ್ ಸೇರಿದ್ದರಲ್ಲದೆ 1947ರಲ್ಲಿ ಅದರ ಪೂರ್ಣಕಾಲಿಕ ಸದಸ್ಯರಾದರು. 1951ರಲ್ಲಿ ಅವರು ಆಗಿನ ಭಾರತೀಯ ಜನ ಸಂಘದಲ್ಲಿ ದೀನ್ ದಯಾಳ್ ಉಪಾಧ್ಯಾಯ ಜತೆ ಸೇವೆ ಸಲ್ಲಿಸಿದ್ದರು.

ಜೂನ್ 1975ರಲ್ಲಿ ಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಹೇರಿದಾಗ ವಾಜಪೇಯಿ ಹಲವು ತಿಂಗಳುಗಳ ಕಾಲ ಜೈಲು ಪಾಲಾಗಿದ್ದರು.  1977ರಲ್ಲಿ ಆಗ ಜನತಾ ಸರಕಾರ ಅಸ್ತಿತ್ವಕ್ಕೆ ಬಂದಾಗ ವಾಜಪೇಯಿ ವಿದೇಶ ಸಚಿವರಾಗಿ ಸೇವೆ ಸಲ್ಲಿಸಿದರು.

1984ರಲ್ಲಿ ಇಂದಿರಾ ಗಾಂದಿ ಅವರ ಹತ್ಯೆಯ ನಂತರ ನಡೆದ ಚುನಾವಣೆಯಲ್ಲಿ  545 ಸದಸ್ಯರ ಸಂಸತ್ತಿನಲ್ಲಿ ಬಿಜೆಪಿ ಕೇವಲ 2 ಸ್ಥಾನಗಳನ್ನು ಪಡೆದಿತ್ತಲ್ಲದೆ ವಾಜಪೇಯಿ ಕೂಡ ಗ್ವಾಲಿಯರ್ ಕ್ಷೇತ್ರದಿಂದ ಸೋಲುಂಡಿದ್ದರು.

ಅಯೋಧ್ಯೆಯ ರಾಮ ಜನ್ಮಭೂಮಿ ಆಂದೋಲನದ ಮೂಲಕ ಪಕ್ಷ ಮತ್ತೆ  ಮುಖ್ಯವಾಹಿನಿಗೆ ಬಂತು. 1992ರಲ್ಲಿ  ಕರಸೇವಕರು ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದಾಗ ‘ಕೆಟ್ಟ ತಪ್ಪು ಲೆಕ್ಕಾಚಾರ' ಎಂದು ಹೇಳಿದ ಬಿಜೆಪಿಯ ಏಕೈಕ ನಾಯಕರಾಗಿದ್ದರು ವಾಜಪೇಯಿ.

ಪ್ರಬುದ್ಧ ರಾಜಕಾರಣಿಯಾಗಿದ್ದ ವಾಜಪೇಯಿ ರಾಜಸ್ಥಾನದ ಪೊಖ್ರಾನ್ ನಲ್ಲಿ 1998ರಲ್ಲಿ ನಡೆದ ಪರಮಾಣು ಪರೀಕ್ಷೆಗಳಿಗೆ ಕಾರಣರಾಗಿದ್ದರು. ಇದರಿಂದಾಗಿಯೇ ಅಮೆರಿಕಾ ಮತ್ತು ಜಪಾನ್ ದೇಶಗಳಿಂದ ಭಾರತ ನಿರ್ಬಂಧಗೊಳಗಾಗಿತ್ತು,

ಅವರು ಪ್ರಧಾನಿಯಾಗಿದ್ದಾಗ 1999ರಲ್ಲಿ ಪಾಕಿಸ್ತಾನದ ಲಾಹೋರ್ ಗೆ  ಐತಿಹಾಸಿಕ ಬಸ್ ಸೇವೆಯನ್ನು  ಆಗಿನ ಪಾಕ್ ಪ್ರಧಾನಿ ನವಾಜ್ ಶರೀಫ್  ಜತೆ ಲಾಹೋರ್ ಘೋಷಣೆಯ ನಂತರ ಆರಂಭಿಸಿದ್ದು ಅವರ ದೊಡ್ಡ ಸಾಧನೆಯಾಗಿತ್ತು.

ಆದರೆ, ಇವರಿಗೆ ಆರೋಗ್ಯ ಸಮಸ್ಯೆ ಕಾಡಲಾರಂಭಿಸಿತ್ತು. 2009ರಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆ ನಾಗ್ಪುರದಲ್ಲಿ ಮುಕ್ತಾಯಗೊಂಡ 48 ಗಂಟೆಗಳೊಳಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೆ ಆರೋಗ್ಯ ಸಮಸ್ಯೆಗಳಿಂದಾಗಿ ಅವರು  ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. 2015ರಲ್ಲಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ  ಭಾರತ ರತ್ನ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X