Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಣ ಅಂಕ ಮತ್ತು ಗ್ರೇಡ್‍ಗಳಿಗೆ...

ಶಿಕ್ಷಣ ಅಂಕ ಮತ್ತು ಗ್ರೇಡ್‍ಗಳಿಗೆ ಸೀಮಿತವಲ್ಲ: ಶಿಲ್ಪಾರಾಜಶೇಖರ್

ವಾಸವಿ ವಿದ್ಯಾಸಂಸ್ಥೆಯ 36ನೆಯ ಶಾಲಾ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ25 Dec 2017 4:49 PM IST
share
ಶಿಕ್ಷಣ ಅಂಕ ಮತ್ತು ಗ್ರೇಡ್‍ಗಳಿಗೆ ಸೀಮಿತವಲ್ಲ: ಶಿಲ್ಪಾರಾಜಶೇಖರ್

ಚಿಕ್ಕಮಗಳೂರು, ಡಿ.25: ಶಿಕ್ಷಣ ಅಂಕ ಮತ್ತು ಗ್ರೇಡ್‍ಗಳಿಗೆ ಸೀಮಿತವಲ್ಲ. ಒಳಿತು ಕೆಡಕನ್ನು ಅರಿಯುವ ವಿವೇಚನೆಯನ್ನು ಬೆಳೆಸಬೇಕು ಎಂದು ನಗರಸಭಾ ಅಧ್ಯಕ್ಷೆ ಶಿಲ್ಪಾರಾಜಶೇಖರ್ ಕರೆ ನೀಡಿದರು.

  ಅವರು ನಗರದ ವಾಸವಿ ವಿದ್ಯಾಸಂಸ್ಥೆಯ 36ನೆಯ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಮಕ್ಕಳ ಸರ್ವಾಂಗೀಣ ವಿಕಾಸವೇ ನಿಜವಾದ ಶಿಕ್ಷಣ. ವಾಸವಿ ಸಂಸ್ಥೆ ಮೂರೂವರೆ ದಶಕಗಳಿಂದ ಒಳ್ಳೆಯ ಶಿಕ್ಷಣ ನೀಡುತ್ತಿದೆ. ಪ್ರತಿ ಮಕ್ಕಳಲ್ಲೂ ಉನ್ನತವಾದ ಗುರಿ ಇರಬೇಕು. ಅದನ್ನು ಸಾಧಿಸುವ ಪ್ರಯತ್ನ, ಛಲ ಅಗತ್ಯ. ಆಸಕ್ತ ವಿಷಯಗಳನ್ನು ಆರಿಸಿಕೊಳ್ಳುವುದರಲ್ಲಿ ಜಾಣತನವಿದೆ. ಇಂದು ಇಂಜಿನಿಯರ್-ಡಾಕ್ಟರ್‍ಗಳಿಗಷ್ಟೇ ಅಲ್ಲ ಅನೇಕ ರಂಗಗಳಲ್ಲಿ ವಿಫುಲವಾದ ಅವಕಾಶಗಳಿವೆ.  ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಕಲಿತವರಿಗೂ ಸಾಧನೆಯ ಅವಕಾಶವಿದೆ ಎಂದು ಹೇಳಿದರು.

  ನಾಟ್ಯ, ಸಂಗೀತ, ನಾಟಕ ಚಿತ್ರಕಲೆಯಲ್ಲೂ ಬದುಕು ಕಟ್ಟಿಕೊಳ್ಳಬಹುದೆಂಬುದು ಸಾಬೀತಾಗಿದೆ. ದೇಶವನ್ನು ಪ್ರೀತಿಸುವ ಮನಸ್ಥಿತಿ ನಮ್ಮದಾಗಬೇಕು. ಮನೆ, ಶಾಲೆ ಹಾಗೂ ದೇಶಕ್ಕೆ ಕೀರ್ತಿ ತರುವ ಆಶಯಗಳನ್ನು ಮಕ್ಕಳಲ್ಲಿ ಭಿತ್ತಬೇಕು ಎಂದ ಶಿಲ್ಪಾ,  ಗುರು ಹಿರಿಯರನ್ನು ಗೌರವಿಸುವ, ಸುತ್ತಲ ಪರಿಸರವನ್ನು ಸ್ವಚ್ಛವಾಗಿಸುವ ಮನಸ್ಥಿತಿಯನ್ನು ಮಕ್ಕಳು ಬೆಳೆಸಿಕೊಳ್ಳಬೇಕೆಂದರು.

  ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು ಶೈಕ್ಷಣಿಕ ವಲಯದ ಸಾಧಕರನ್ನು ಗೌರವಿಸಿ ಮಾತನಾಡಿ ಪೋಷಕರು ಟಿ.ವಿ. ಮತ್ತು ಮೊಬೈಲ್‍ಗಳಿಂದ ಮಕ್ಕಳನ್ನು ದೂರವಿಟ್ಟು,  ಪುಸ್ತಕಗಳ ಸಮೀಪವಿರುವಂತೆ ಮಾಡಿದರೆ ಮಕ್ಕಳನ್ನು ಸುಶಿಕ್ಷಿತರಾಗಿಸಬಹುದು.  ಎಲ್ಲ ವರ್ಗದ ಪ್ರಜೆಗಳಿಗೆ ಉತ್ಕøಷ್ಟವಾದ ಶಿಕ್ಷಣ ನೀಡಬೇಕೆಂಬ ಸರ್ಕಾರದ ಆಶಯಗಳಿಗೆ ಅನುಗುಣವಾಗಿ ವಾಸವಿ ವಿದ್ಯಾಸಂಸ್ಥೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಎಂದು ಶ್ಲಾಘಿಸಿದರು.

  ವಾಸವಿ ವಿದ್ಯಾಲಯದ ಅಧ್ಯಕ್ಷ ಎಂ.ಆರ್.ರಾಜಶೇಖರ್ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಕಲಿಕೆಯಷ್ಟೇ ಅಲ್ಲ ಆಟೋಟಸ್ಪರ್ಧೆ ಜೊತೆಗೆ ಸಾಂಸ್ಕøತಿಕ ಕಾರ್ಯಕ್ರಮಗಳಿಗೂ ಇಲ್ಲಿ ಆದ್ಯತೆ ನೀಡಲಾಗುತ್ತಿದೆ. ಸಾಮಾನ್ಯ ಮಕ್ಕಳನ್ನು ಸೇರಿಸಿಕೊಂಡು ಉತ್ತಮ ಫಲಿತಾಂಶ ತರಲಾಗುತ್ತಿದೆ. 25ವರ್ಷಗಳಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಇಲ್ಲಿ ವಿದ್ಯಾರ್ಥಿಗಳು ತೆಗೆದುಕೊಳ್ಳುತ್ತಿದ್ದು ಸುಮಾರು 20ಬಾರಿ ಶೇ.100 ಫಲಿತಾಂಶ ಲಭ್ಯವಾಗಿದೆ ಎಂದರು.

  ವಾಸವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜಯಂತಿಶೇಖರ್ ಸ್ವಾಗತಿಸಿ, ಸಹಕಾರ್ಯದರ್ಶಿ ದಿನೇಶ್‍ಗುಪ್ತ ವಂದಿಸಿದರು.  ಮುಖ್ಯಶಿಕ್ಷಕ ಬಿ.ಆರ್.ಕುಮಾರ್ ವಾರ್ಷಿಕವರದಿ ಮಂಡಿಸಿದರು. ಶಿಕ್ಷಕ ರಮೇಶ್‍ಬೊಂಗಾಳೆ ಶೈಕ್ಷಣಿಕಸಾಧಕರನ್ನು ಪರಿಚಯಿಸಿದರು.  ಖಜಾಂಚಿ ಪಿ.ಎಸ್.ವೆಂಕಟೆಶ್ ಮತ್ತಿತರರು ವೇದಿಕೆಯಲ್ಲಿದ್ದರು. ಸಾಂಸ್ಕøತಿಕ ಕಾರ್ಯಕ್ರಮಗಳು ಆಕರ್ಷಕವಾಗಿ ನಡೆಯಿತು.  ಶಿಕ್ಷಕಿಯರಾದ ಚೂಡಾಮಣಿ ಮತ್ತು ನೂರ್‍ಸಲ್ಮಾನ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X