Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 26 ಎಸೆತಗಳಲ್ಲಿ ಶತಕ ಸಿಡಿಸಿದ ಬಾಬರ್!

26 ಎಸೆತಗಳಲ್ಲಿ ಶತಕ ಸಿಡಿಸಿದ ಬಾಬರ್!

ಟಿ-10 ಕ್ರಿಕೆಟ್ ಟೂರ್ನಮೆಂಟ್

ವಾರ್ತಾಭಾರತಿವಾರ್ತಾಭಾರತಿ25 Dec 2017 8:10 PM IST
share
26 ಎಸೆತಗಳಲ್ಲಿ ಶತಕ ಸಿಡಿಸಿದ ಬಾಬರ್!

ಕರಾಚಿ, ಡಿ.25: ಹತ್ತು ಓವರ್‌ಗಳ ಕ್ರಿಕೆಟ್ ಈಗಾಗಲೇ ವಿಶ್ವದ ಗಮನ ಸೆಳೆದಿದೆ. ಫೈಸ್ಲಾಬಾದ್‌ನಲ್ಲಿ ಶಾಹಿದ್ ಅಫ್ರಿದಿ ಫೌಂಡೇಶನ್ ಆಯೋಜಿಸಿದ್ದ ಟಿ-10 ಚಾರಿಟಿ ಕ್ರಿಕೆಟ್ ಪಂದ್ಯದಲ್ಲಿ ಪಾಕ್ ಆಟಗಾರರಾದ ಬಾಬರ್ ಆಝಂ ಹಾಗೂ ಶುಐಬ್ ಮಲಿಕ್ ಶ್ರೇಷ್ಠ ಪ್ರದರ್ಶನದಿಂದ ಎಲ್ಲರ ಗಮನ ಸೆಳದಿದ್ದಾರೆ.

 ಮಲಿಕ್ ಅವರು ಬಾಬರ್ ಎಸೆದ ಓವರ್‌ನಲ್ಲಿ ಸತತ 6 ಸಿಕ್ಸರ್ ಸಿಡಿಸಿ ಯುವರಾಜ್ ಸಾಧನೆಯನ್ನು ನೆನಪಿಸಿದರು. ಮಲಿಕ್ ವಿರುದ್ಧ ತಕ್ಕ ಸೇಡು ತೀರಿಸಿಕೊಂಡ ಬಾಬರ್ ಕೇವಲ 26 ಎಸೆತಗಳಲ್ಲಿ 11 ಸಿಕ್ಸರ್ ಹಾಗೂ 7 ಬೌಂಡರಿ ನೆರವಿನಿಂದ ಶತಕ ಪೂರೈಸಿ ತಂಡಕ್ಕೆ ರೋಚಕ ಗೆಲುವು ತಂದರು.

ಶಾಹಿದ್ ಫೌಂಡೇಶನ್ ಆಯೋಜಿಸಿದ್ದ ಟಿ-10 ಪಂದ್ಯದಲ್ಲಿ ಉಭಯ ತಂಡಗಳು 400ಕ್ಕೂ ಅಧಿಕ ರನ್ ಗಳಿಸಿವೆ.

 ಪಾಕ್‌ನ ಶ್ರೇಷ್ಠ ಏಕದಿನ ಬ್ಯಾಟ್ಸ್‌ಮನ್ ಆಗಿರುವ ಆಝಂ ಗ್ರೀನ್ ತಂಡದ ಪರ ಆಡಿದ್ದು, ಮಾಜಿ ನಾಯಕ ಶುಐಬ್ ಮಲಿಕ್ ರೆಡ್ ತಂಡವನ್ನು ಪ್ರತಿನಿಧಿಸಿದ್ದರು.

ಮೊದಲು ಬ್ಯಾಟಿಂಗ್ ಮಾಡಿದ್ದ ರೆಡ್ ತಂಡ ಮಲಿಕ್ ಅವರ ಸತತ ಆರು ಸಿಕ್ಸರ್‌ಗಳ ನೆರವಿನಿಂದ 10 ಓವರ್‌ಗಳಲ್ಲಿ 201 ರನ್ ಗಳಿಸಿತು. ಮಲಿಕ್ ಅವರು ಬಾಬರ್ ಎಸೆದ ಓವರೊಂದರಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದ್ದರು.

 ಇದಕ್ಕೆ ದಿಟ್ಟ ಉತ್ತರ ನೀಡಿದ ರೆಡ್ ತಂಡ ಬಾಬರ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 10 ಓವರ್‌ಗಳಲ್ಲಿ 210 ರನ್ ಗಳಿಸಿ 9 ವಿಕೆಟ್‌ಗಳ ಜಯ ದಾಖಲಿಸಿತು.

  ಆಝಂ ತಾಂತ್ರಿಕವಾಗಿ ಅತ್ಯಂತ ವೇಗದ ಶತಕ ಸಿಡಿಸಿದ್ದಾರೆ. ಆದರೆ, ಅವರು ಚಾರಿಟಿ ಪಂದ್ಯದಲ್ಲಿ ಈ ಸಾಧನೆ ಮಾಡಿದ ಕಾರಣ ಅದು ಅಧಿಕೃತವಾಗಿಲ್ಲ. ಯಾವುದೇ ದಾಖಲೆಯನ್ನು ಮುರಿದಿಲ್ಲ.

ಆರು ಸಿಕ್ಸ್ಸರ್ ಸಿಡಿಸಿದ ದಾಂಡಿಗರ ಪಟ್ಟಿಗೆ ಶುಐಬ್ ಮಲಿಕ್ ಸೇರ್ಪಡೆ 

ಪಾಕಿಸ್ತಾನ ಆಲ್‌ರೌಂಡರ್ ಶುಐಬ್ ಮಲಿಕ್ ಒಂದೇ ಓವರ್‌ನಲ್ಲಿ ಆರು ಸಿಕ್ಸ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಫೈಸ್ಲಾಬಾದ್‌ನಲ್ಲಿ ಶಾಹಿದ್ ಅಫ್ರಿದಿ ಫೌಂಡೇಶನ್ ಆಯೋಜಿಸಿದ್ದ ಟಿ-10 ಚಾರಿಟಿ ಪಂದ್ಯದಲ್ಲಿ ಮಲಿಕ್ ಈ ಸಾಧನೆ ಮಾಡಿದ್ದಾರೆ.

 ಬಲಗೈ ಬ್ಯಾಟ್ಸ್‌ಮನ್ ಮಲಿಕ್ ಶಾಹಿದ್ ಅಫ್ರಿದಿ ಫೌಂಡೇಶನ್ ರೆಡ್ ಟೀಮ್ ತಂಡದ ಪರ ಆಡಿದ್ದು, ಶಾಹಿದ್ ಅಫ್ರಿದಿ ಫೌಂಡೇಶನ್ ಗ್ರೀನ್ ಟೀಮ್ ವಿರುದ್ಧ ಈ ಸಾಧನೆ ಮಾಡಿದ್ದಾರೆ.

ಮಲಿಕ್ ಇನಿಂಗ್ಸ್‌ನ 7ನೇ ಓವರ್‌ನಲ್ಲಿ ಬಲಗೈ ಸ್ಪಿನ್ನರ್ ಬಾಬರ್ ಆಝಂ ಎಸೆತದಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದರು. ಮಲಿಕ್ ಸಾಹಸದ ನೆರವಿನಿಂದ ರೆಡ್ ಟೀಮ್ ನಿಗದಿತ 10 ಓವರ್‌ಗಳಲ್ಲಿ 201 ರನ್ ಗಳಿಸಿತು. ಆದರೆ ಪಂದ್ಯದಲ್ಲಿ ಜಯ ಸಾಧಿಸಲು ವಿಫಲವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X