Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ದಲಿತರ ಎದೆಯಾಳದ ಧ್ವನಿ

ದಲಿತರ ಎದೆಯಾಳದ ಧ್ವನಿ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ26 Dec 2017 12:01 AM IST
share
ದಲಿತರ ಎದೆಯಾಳದ ಧ್ವನಿ


ಡಾ. ಬಿ. ಆರ್. ಅಂಬೇಡ್ಕರ್ ಇಂಗ್ಲಿಷ್‌ನಲ್ಲಿ ರಚಿಸಿದ ಮೂರು ಭಾಷಣಗಳು ಮತ್ತು ಮೂರು ಲೇಖನಗಳನ್ನೊಳಗೊಂಡ ಕೃತಿ ‘ವೀಸಾದ ನಿರೀಕ್ಷೆಯಲ್ಲಿ ನೆನಪುಗಳು’. ಸದಾಶಿವ ಮರ್ಜಿ ಅವರು ಇದನ್ನು ಕನ್ನಡಕ್ಕಿಳಿಸಿದ್ದಾರೆ. ಕೃತಿಯ ಮೊದಲ ಲೇಖನ ‘ವೀಸಾದ ನಿರೀಕ್ಷೆಯಲ್ಲಿ-ನೆನಪುಗಳು’ ಎನ್ನುವುದಾಗಿದೆ. ಅಸ್ಪಶ್ಯತೆಯ ಅವಮಾನ ಎಷ್ಟು ಕ್ರೂರವಾಗಿರುತ್ತದೆ ಮತ್ತು ಆ ಗಾಯ ಒಣಗದೆ ಪದೇ ಪದೇ ಹೇಗೆ ಕಾಡುತ್ತದೆ ಎನ್ನುವುದನ್ನು ಅಂಬೇಡ್ಕರ್ ಈ ಲೇಖನದಲ್ಲಿ ವಿವರಿಸಿದ್ದಾರೆ. ಇಲ್ಲಿ ಅಂಬೇಡ್ಕರ್ ಅವರು ತಾವೇ ಸ್ವತಃ ಅನುಭವಿಸಿರುವ ಜಾತೀಯ ಅವಮಾನಗಳನ್ನು ದಾಖಲಿಸಿದ್ದಾರೆ. ಒಟ್ಟು ಆರು ಅಮಾನವೀಯ ಘಟನೆಗಳನ್ನು ಅವರು ಇಲ್ಲಿ ಹೇಳಿಕೊಂಡಿದ್ದಾರೆ. ಆರ್ಥಿಕವಾಗಿ ಸಬಲರಾಗಿದ್ದರೂ ಅಂಬೇಡ್ಕರ್ ಅವರು ಅವಮಾನಗಳನ್ನು ಎದುರಿಸಿದರು. ಮಡಿವಾಳರು ಅವರ ಬಟ್ಟೆಗಳನ್ನು ತೊಳೆಯಲು ಒಪ್ಪುತ್ತಿರಲಿಲ್ಲ. ಕ್ಷೌರಿಕರು ಕ್ಷೌರ ಮಾಡಲು ಒಪ್ಪುತ್ತಿರಲಿಲ್ಲ. ಎತ್ತಿನ ಗಾಡಿಯಲ್ಲಿ ಪ್ರಯಾಣಿಸುವುದು ಕೂಡ ಕಷ್ಟ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಎಲ್ಲಕ್ಕಿಂತ ಮುಖ್ಯವಾಗಿ ತಮ್ಮ ಕೊಳೆಯನ್ನು ತೊಳೆದುಕೊಳ್ಳಲು ನೀರು ಮುಟ್ಟಲೂ ಅನುಮತಿ ಇರಲಿಲ್ಲ. ಈ ಅಸ್ಪಶ್ಯತೆ ಕೇವಲ ಹಿಂದೂ ಸಮಾಜದಲ್ಲಷ್ಟೇ ಇರಲಿಲ್ಲ. ಅವಮಾನ ಜಾತಿಯಿಂದ ಜಾತಿಗೆ ಸರಪಣಿಯಂತೆ ಜೋಡಿಸಲ್ಪಟ್ಟಿತು. ಅಸ್ಪಶ್ಯರನ್ನು ದೂರ ತಳ್ಳುವ ಸಂದರ್ಭದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿದ್ದರು. ಭಾರತೀಯ ಮುಸ್ಲಿಮರು ಮತಾಂತರಗೊಂಡವರು. ಆದರೆ ಜಾತಿಯ ಮೇಲು ಕೀಳಿನಿಂದ ಹೊರಬರುವುದಕ್ಕೆ ಅವರಿಗೆ ಸಾಧ್ಯವಾಗಿರಲಿಲ್ಲ.
 ‘ಬುದ್ಧ ಮತ್ತು ಬೌದ್ಧ ಧರ್ಮದ ಭವಿಷ್ಯ’ ಲೇಖನದಲ್ಲಿ ಬುದ್ಧ ಮೋಕ್ಷದಾತನಲ್ಲ, ಮಾರ್ಗದಾತ ಎನ್ನುವುದನ್ನು ಸ್ಪಷ್ಟಪಡಿಸುತ್ತಾರೆ. ವಿವಿಧ ಧರ್ಮ ಬೋಧಕರಿಗೂ ಬುದ್ಧನಿಗೂ ಇರುವ ವ್ಯತ್ಯಾಸಗಳನ್ನು ಅವರು ಈ ಲೇಖನದಲ್ಲಿ ಗುರುತಿಸುತ್ತಾರೆ. ಹಿಂದೂಧರ್ಮಕ್ಕಿಂತ ಬೌದ್ಧ ಧರ್ಮ ಯಾವ ರೀತಿಯಲ್ಲಿ ಭಿನ್ನ ಎನ್ನುವುದನ್ನು ಅವರು ನಿರೂಪಿಸುತ್ತಾರೆ. ವರ್ಣವ್ಯವಸ್ಥೆಯನ್ನು ಬೌದ್ಧ ಧರ್ಮ ಹೇಗೆ ವಿರೋಧಿಸುತ್ತದೆ ಎನ್ನುವುದನ್ನು ಹೇಳುತ್ತಾರೆ. ಹಿಂದೂಗಳು ಸಕಾರಾತ್ಮಕ ಭಾವನೆಗಳನ್ನು ಬೆಳೆಸಿಕೊಳ್ಳಬೇಕಾದರೆ ಅವರು ಬೌದ್ಧ ಧರ್ಮದತ್ತ ಹೊರಳುವುದು ಅತ್ಯಗತ್ಯ ಎಂದು ಅಭಿಪ್ರಾಯಪಡುತ್ತಾರೆ. ‘ಪ್ರಜಾಪ್ರಭುತ್ವ ನಿರ್ಜೀವವಾದರೆ ಅದು ನಮ್ಮ ಅಂತ್ಯವೇ’ ಎನ್ನುವ ಲೇಖನ ವರ್ತಮಾನಕ್ಕೆ ಹೆಚ್ಚು ಪ್ರಸ್ತುತವಾಗುತ್ತದೆ. ಪ್ರಜಾಪ್ರಭುತ್ವ ಉಳಿಯುವುದು ಶೋಷಿತ ವರ್ಗಕ್ಕೆ ಎಷ್ಟು ಅಗತ್ಯ ಎನ್ನುವುದನ್ನು ಅವರು ವಿವರಿಸುತ್ತಾರೆ. ಹಾಗೆಯೇ ಅಖಿಲ ಭಾರತ ಪರಿಶಿಷ್ಟ ಜಾತಿ ಫೆಡರೇಶನ್‌ನಲ್ಲಿ ಅವರು ‘ಕೋಮುವಾರು ಪ್ರಶ್ನೆ ಮತ್ತು ಭಾರತೀಯ ಸಂವಿಧಾನ ರಚನೆ’ ಬಗ್ಗೆ ಮಾತನಾಡುತ್ತಾರೆ. ಇಲ್ಲಿರುವ ಎಲ್ಲ ಬರಹಗಳು ದಲಿತರ ನೋವಿನ ಒಳಧ್ವನಿಯಾಗಿ ಅಂಬೇಡ್ಕರ್ ಅವರಿಂದ ಹೊರಬಂದಿದೆ. ಲಡಾಯಿ ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗ ಳು 112. ಮುಖಬೆಲೆ 90 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X