Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಕಾರ್ಯನಿರತ ಪತ್ರಕರ್ತರ ಸಂಘದ...

ಭಟ್ಕಳ: ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಸಮಾರೋಪ ಸಮಾರಂಭ

ಸಾಧಕರಾದ ಆಫ್ತಾಬ್ ಕೋಲಾ, ಮಹಾಲೆ, ಶೇತಾರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ26 Dec 2017 8:11 PM IST
share
ಭಟ್ಕಳ: ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಸಮಾರೋಪ ಸಮಾರಂಭ

ಭಟ್ಕಳ, ಡಿ. 26: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಸಮಾರೋಪ ಸಮಾರಂಭದಲ್ಲಿ ಭಟ್ಕಳ ಮೂಲದ ಪತ್ರಕರ್ತರಾದ ಆಫ್ತಾಬ್ ಹುಸೇನ್ ಕೋಲಾ, ವಿವೇಕ ಜಗನ್ನಾಥ ಮಹಾಲೆ ಹಾಗೂ ಟಿ.ವಿ ನಿರೂಪಕಿ ಶ್ವೇತಾ ಆಚಾಯರರ್ನ್ನು ಸನ್ಮಾನಿಸಿ ಗೌರವಿಸಲಾಯಿತು.

ಆಫ್ತಾಬ್ ಹುಸೇನ್ ಕೋಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕ ಸದಸ್ಯರಾಗಿದ್ದು, ಭಟ್ಕಳದಲ್ಲಿ ಭಟ್ಕಳ್ ಟೈಮ್ಸ್ ಎಂಬ ಆಂಗ್ಲ ಪತ್ರಿಕೆಯೊಂದನ್ನು ಆರಂಭಿಸಿ ಅದನ್ನು ಯಶಸ್ವಿಯಾಗಿ ಮುನ್ನೆಡಿಸಿದ್ದು ನಂತರ ಒಮಾನ್ ದೇಶದ ಖ್ಯಾತ ಪತ್ರಿಕೆಯೊಂದರ ಸಂಪಾದಕರಾಗಿದ್ದು, ಸದ್ಯ ಪತ್ರಿಕೋದ್ಯಮದಿಂದ ದೂರ ಇರುವ ಅವರನ್ನು ಸಂಘದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಸನ್ಮಾನಿಸುವುದರ ಮೂಲಕ ಅವರು ಪತ್ರಿಕೋಧ್ಯಮಕ್ಕೆ ನೀಡಿದ ಸೇವೆಯನ್ನು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಆರಂಭಿಕ ಪತ್ರಿಕೋಧ್ಯಮದ ದಿನಗಳನ್ನು ಮೆಲುಕು ಹಾಕಿದ್ದೂ, ಭಟ್ಕಳ ಪತ್ರಕರ್ತರ ಕಾರ್ಯವನ್ನು ಶ್ಲಾಘಿಸಿದರು.

ನಮ್ಮ ಭಟ್ಕಳ ದಿನಪತ್ರಿಕೆಯನ್ನು ಆರಂಭಿಸಿ ವಿವಿಧ ಪತ್ರಿಕೆಗಳಲ್ಲಿ ವರದಿಗಾರನಾಗಿ ಸೇವೆ ಸಲ್ಲಿಸಿ ಈಗ ಬೆಳಗಾವಿಯಲ್ಲಿ ದಿಗ್ವಿಜಯ ಚಾನೆಲ್ ಹಾಗೂ ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕರಾಗಿರುವ ವಿವೇಕ ಜಗನಾಥ್ ಮಹಾಲೆಯವರನ್ನು ಪತ್ರಿಕೋದ್ಯಮದಲ್ಲಿ ಮಾಡಿದ ಸಾಧನೆಗಾಗಿ ಸನ್ಮಾನಿಸಿ, ಗೌರವಿಸಲಾಯಿತು.

 ಈ ಸಂದರ್ಭದಲ್ಲಿ ಮಾತನಾಡಿದ ಅವರು ಪತ್ರಿಕೋದ್ಯಮಕ್ಕೆ ಬಂದಿರುವ ತಮ್ಮ ಆ ದಿನಗಳನ್ನು ಮೆಲಕು ಹಾಕುತ್ತಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಅಂದು ನೀಡಿದ ಸಹಾಯವನ್ನು ಸ್ಮರಿಸಿದರು. ಪ್ರತಿಯೋರ್ವ ವ್ಯಕ್ತಿಯೂ ಕೂಡಾ ಪ್ರಾಮಾಣಿಕತೆ, ಪರಿಶ್ರಮಗಳನ್ನು ಬೆಳೆಸಿಕೊಂಡಾಗ ಎಷ್ಟು ಎತ್ತರಕ್ಕೂ ಬೆಳೆಯಬಹುದು ಎಂದು ಹೇಳಿದ ಅವರು ಯುವಕರು ಈ ಎರಡು ರತ್ನಗಳನ್ನು ತಮ್ಮೊಂದಿಗೆ ಇಟ್ಟುಕೊಂಡರೆ ಯಶಸ್ಸು ಖಂಡಿತ ಎಂದರು.

ಮತ್ತೋರ್ವ ಭಟ್ಕಳದ ಪತ್ರಕರ್ತೆ ಶ್ವೇತಾ ಆಚಾರ್ಯ ಅವರನ್ನು ಪತ್ರಿಕೋದ್ಯಮದಲ್ಲಿ ಮಾಡಿದ ಸಾಧನೆಗಾಗಿ ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಳುಕಿನಿಂದಲೇ ತಾನು ಟಿ.ವಿ. ನಿರೂಪಕಿಯ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದೆ, ಆದರೆ ಆಯ್ಕೆಯಾಗಿದ್ದು, ನನಗೆ ಮಾತ್ರವಲ್ಲದೇ ಭಟ್ಕಳದ ಜನತೆಗೇ ಆಶ್ಷರ್ಯವಾಗಿದೆ ಎಂದರು. ಇಂದು ಟಿ.ವಿ. ಮಾಧ್ಯಮಕ್ಕಿಂತ ವೇಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡುತ್ತಿದ್ದು ಸಮಾಜಕ್ಕೆ ಇದು ಮಾರಕವಾಗಿದೆ ಎಂದ ಅವರು ಜನತೆ ತಾಳ್ಮೆ ಕಳೆದುಕೊಳ್ಳಬಾರದು. ಯಾವುದೇ ಸುದ್ದಿಯ ನೈಜತೆಯನ್ನು ಮೊದಲು ಅರಿಯಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಮಂಕಾಳ ವೈದ್ಯ, ಜಿ.ಪಂ. ಅಧ್ಯಕ್ಷ ಜಯಶ್ರೀ ಮೊಗೇರ, ಸಂಘದ ರಾಜ್ಯಾಧ್ಯಕ್ಷ ಎನ್. ರಾಜು, ಸಾಹಿತಿ ರಮ್ಜಾನ್ ದರ್ಗಾ, ಉಧ್ಯಮಿ ಶಿವಾನಿ ಶಾಂತಾರಾಮ್, ಜಿಲ್ಲಾಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ, ತಂಝೀಮ್ ಅಧ್ಯಕ್ಷ ಮುಝಮ್ಮಿಲ್ ಖಾಜಿಯಾಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X