Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾನೂನಿನ ಅನನುಸರಣೆ ತುಂಬಾ...

ಕಾನೂನಿನ ಅನನುಸರಣೆ ತುಂಬಾ ದುಬಾರಿಯಾಗಲಿದೆ: ಕಾರ್ಪೋರೇಟ್ ಸಂಸ್ಥೆಗಳಿಗೆ ಸರಕಾರದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ26 Dec 2017 9:44 PM IST
share
ಕಾನೂನಿನ ಅನನುಸರಣೆ ತುಂಬಾ ದುಬಾರಿಯಾಗಲಿದೆ: ಕಾರ್ಪೋರೇಟ್ ಸಂಸ್ಥೆಗಳಿಗೆ ಸರಕಾರದ ಎಚ್ಚರಿಕೆ

ಹೊಸದಿಲ್ಲಿ,ಡಿ.26: ಕಾನೂನಿನ ಅನನುಸರಣೆಯು ತುಂಬಾ ದುಬಾರಿಯಾಗಲಿದೆ ಮತ್ತು ತಪ್ಪು ಉದ್ದೇಶಗಳಿಗಾಗಿ ಕಂಪನಿಗಳನ್ನು ಬಳಸಿಕೊಳ್ಳುವ ದುಸ್ಸಾಹಸವನ್ನು ಹತ್ತಿಕ್ಕಲು ಕಠಿಣ ಪ್ರತಿಬಂಧಗಳು ಇರಲಿವೆ ಎಂದು ಹೇಳುವ ಮೂಲಕ ಸರಕಾರವು ಕಾರ್ಪೊರೇಟ್ ಸಂಸ್ಥೆಗಳಿಗೆ ಕಠಿಣ ಸಂದೇಶವೊಂದನ್ನು ರವಾನಿಸಿದೆ.

ಅಕ್ರಮ ಹಣ ಹರಿವಿನ ವಿರುದ್ಧ ದಾಳಿಯನ್ನು ಮುಂದುವರಿಸಿರುವ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಈಗಾಗಲೇ ಸುದೀರ್ಘ ಕಾಲದಿಂದ ನಿಷ್ಕ್ರಿಯವಾಗಿದ್ದ 2.24 ಲಕ್ಷಕ್ಕೂ ಅಧಿಕ ಕಂಪನಿಗಳನ್ನು ರದ್ದುಗೊಳಿಸಿದೆ ಮತ್ತು ಈ ಕಂಪನಿಗಳ ಮೂರು ಲಕ್ಷಕ್ಕೂ ಅಧಿಕ ನಿರ್ದೇಶಕರನ್ನು ಅನರ್ಹಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಕಾರ್ಪೊರೇಟ್ ವ್ಯವಹಾರಗಳ ಕಾರ್ಯದರ್ಶಿ ಇಂಜೇತಿ ಶ್ರೀನಿವಾಸ್ ಅವರು, ಶಾಸನಬದ್ಧ ವ್ಯವಹಾರಗಳಿಗಾಗಿ ನಿಯಮಗಳನ್ನು ಸರಳಗೊಳಿಸ ಲಾಗುತ್ತಿದೆ ಮತ್ತು ಅಕ್ರಮ ವ್ಯವಹಾರ ಚಟುವಟಿಕೆಗಳ ವಿರುದ್ಧ ಪ್ರತಿಬಂಧಗಳನ್ನು ಬಲಗೊಳಿಸಲಾಗುತ್ತಿದೆ ಎಂದರು.

ಕಾನೂನಿಗೆ ವಿಧೇಯವಾಗಿರುವುದು ತುಂಬ ಸುಲಭ ಮತ್ತು ಅವಿಧೇಯವಾಗಿರುವುದು ತುಂಬ ದುಬಾರಿಯಾಗಬೇಕು. ಅಕ್ರಮ ವ್ಯವಹಾರಗಳ ವಿರುದ್ಧ ಕಠಿಣ ಪ್ರತಿಬಂಧ ಗಳಿರಬೇಕು. ತಪ್ಪು ಉದ್ದೇಶಗಳಿಗಾಗಿ ಕಂಪೆನಿಗಳನ್ನು ಬಳಸುವ ಜನರಿಗೆ ಅದೊಂದು ದುಸ್ಸಾಹಸವಾಗಬೇಕು ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಇಂಜೇತಿ ಹೇಳಿದರು.

 ಅಮಾನತುಗೊಂಡಿರುವ ಶೆಲ್ ಕಂಪನಿಗಳಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಕ್ರಮಗಳ ಕುರಿತು ಅವರು, ಈ ಬಗ್ಗೆ ತ್ವರಿತ ತನಿಖೆಗಳು ನಡೆಯುತ್ತಿವೆ ಎಂದರು.

 ಸರಕಾರದ ಕಾರ್ಯಾಚರಣೆಯ ಬಿಸಿಯನ್ನು ಕೆಲವು ಪ್ರಾಮಾಣಿಕ ಕಂಪೆನಿಗಳೂ ಅನುಭವಿಸುತ್ತಿರುವುದನ್ನು ಗಮನಕ್ಕೆ ತಂದಾಗ ಇಂಜೇತಿ, ಅಮಾಯಕ ಕಂಪೆನಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಎಲ್ಲ ಪ್ರಯತ್ನಗಳನ್ನೂ ಮಾಡಲಾಗುತ್ತದೆ. ಆದರೆ ಇಂತಹ ಯಾವುದೇ ಬೃಹತ್ ಕಾರ್ಯಾಚರಣೆಯಲ್ಲಿ ಅದರೊಂದಿಗೆ ಗುರುತಿಸಿಕೊಂಡಿ ರುವ ಕೆಲವು ಹಾನಿಗಳಿರುವುದು ಸಹಜವಾಗಿದೆ ಎಂದು ಸಮಜಾಯಿಷಿ ನೀಡಿದರು.

ತಪ್ಪಿತಸ್ಥ ಕಂಪನಿಗಳು ತಮ್ಮ ವಿವರಗಳನ್ನು ಸಲ್ಲಿಸಲು ಮೂರು ತಿಂಗಳ ಅವಧಿಯ ಗವಾಕ್ಷಿಯೊಂದನ್ನು ಒದಗಿಸಲಾಗುವುದು, ಇದಕ್ಕಾಗಿ ಸಚಿವಾಲಯವು ವಿಳಂಬ ಕ್ಷಮಾದಾನ ಯೋಜನೆಗೆ ಚಾಲನೆ ನೀಡಲಿದ್ದು, ಇದು 2018,ಜ.1ರಿಂದ 2018,ಮಾ.31 ರವರೆಗೆ ಚಾಲ್ತಿಯಲ್ಲಿರಲಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X