Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ದಿಲ್ಲಿ ತಂಡದಲ್ಲಿ ಗಮನ...

ರಣಜಿ ಟ್ರೋಫಿ: ದಿಲ್ಲಿ ತಂಡದಲ್ಲಿ ಗಮನ ಸೆಳೆದ ಸೈನಿ

ವಾರ್ತಾಭಾರತಿವಾರ್ತಾಭಾರತಿ26 Dec 2017 11:51 PM IST
share
ರಣಜಿ ಟ್ರೋಫಿ: ದಿಲ್ಲಿ ತಂಡದಲ್ಲಿ ಗಮನ ಸೆಳೆದ ಸೈನಿ

ಹೊಸದಿಲ್ಲಿ, ಡಿ.26: ದಿಲ್ಲಿ ಕ್ರಿಕೆಟ್ ಕಳೆದ ಎರಡು ದಶಕಗಳಿಂದ ದೇಶದ ಕ್ರಿಕೆಟ್ ರಂಗಕ್ಕೆ ಹಲವು ಅತ್ಯುತ್ತಮ ಕ್ರಿಕೆಟಿಗರನ್ನು ಸಮರ್ಪಿಸಿದೆ.

 ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ಶಿಖರ್ ಧವನ್ ಸೇರಿದಂತೆ ದಿಲ್ಲಿಯ ಹಲವು ಮಂದಿ ಖ್ಯಾತ ಕ್ರಿಕೆಟಿಗರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ.

ಇದೀಗ ದಿಲ್ಲಿ ತಂಡದಲ್ಲಿ ವೇಗದ ಬೌಲರ್ ಒಬ್ಬರು ಗಮನ ಸೆಳೆದಿದ್ದಾರೆ . ಅವರು ನವ್‌ದೀಪ್ ಸೈನಿ. 25ರ ಹರೆಯದ ವೇಗಿ ಸೈನಿ ಅವರು 9 ರಣಜಿ ಪಂದ್ಯಗಳಲ್ಲಿ 29 ವಿಕೆಟ್ ಪಡೆದಿದ್ದಾರೆ.

ಈ ತನಕ 29 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಸೈನಿ 91 ವಿಕೆಟ್ ತಮ್ಮ ಖಾತೆಗೆ ಜಮೆ ಮಾಡಿದ್ದಾರೆ.

ಗಂಟೆಗೆ 140 ಕಿ.ಮೀ ವೇಗದಲ್ಲಿ ಬೌಲಿಂಗ್ ನಡೆಸುವ ಸೈನಿ ಅವರಿಗೆ ಬ್ರೆಟ್ ಲೀ ಮತ್ತು ಮಿಚೆಲ್ ಜಾನ್ಸನ್ ಆದರ್ಶಪ್ರಾಯರಾಗಿದ್ದಾರೆ.

 ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಗಳಲ್ಲಿ ಆಡುತ್ತಿದ್ದಾಗ ಸೈನಿ ಅವರು ದಿಲ್ಲಿಯ ಇನ್ನೊಬ್ಬ ಬೌಲರ್ ಸುಮಿತ್ ನರ್ವಾಲ್ ಅವರ ಕಣ್ಣಿಗೆ ಬಿದ್ದರು. ನರ್ವಾಲ್ ಅವರು ಸೈನಿಗೆ ತಮ್ಮ ಕ್ರಿಕೆಟ್ ಅಕಾಡಮಿ(ನರ್ವಾಲ್ ಕ್ರಿಕೆಟ್) ಸೇರುವಂತೆ ಕೇಳಿಕೊಂಡರು. ಆದರೆ ತನ್ನಲ್ಲಿ ಫೀಸ್ ಕಟ್ಟಲು ಹಣ ಇರಲಿಲ್ಲ. ತಂದೆಯ ಕೈಯಿಂದ 400 ರೂ. ಪಡೆದು ಅಕಾಡಮಿ ಸೇರಿದೆ ಎಂದು ಸೈನಿ ಅವರು ತಮ್ಮ ಕ್ರಿಕೆಟ್‌ನ ಆರಂಭದ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ.

ನರ್ವಾಲ್ ಮತ್ತು ತಾನು ಜೊತೆಯಾಗಿ ಕರ್ನಾಲ್‌ನ ಕರಣ್ ಸ್ಟೇಡಿಯಂನಲ್ಲಿ ಒಟ್ಟಿಗೆ ತರಬೇತಿ ಪಡೆದಿರುವುದಾಗಿ ಸೈನಿ ಹೇಳುತ್ತಾರೆ.

‘‘ದಿಲ್ಲಿ ತಂಡಕ್ಕೆ ನೆಟ್ ಬೌಲರ್ ನೆರವು ನೀಡಲು ನರ್ವಾಲ್ ಕರೆದರು. ನಾನು ಕುತೂಹಲದಿಂದ ಅಲ್ಲಿಗೆ ಹೋಗಿದ್ದೆ. ಗೌತಮ್ ಗಂಭೀರ್ ಅವರನ್ನು ಮೊದಲ ಬಾರಿ ಅಲ್ಲಿ ನೋಡಿದೆ. ಗಂಭೀರ್‌ಗೆ ನೆಟ್ ಅಭ್ಯಾಸದ ವೇಳೆ ಬೌಲಿಂಗ್ ನಡೆಸಿದೆ. ಗಂಭೀರ್ ನನಗೆ ಕರೆದು ನನ್ನನ್ನು ವಿಚಾರಿಸಿದರು. ನಾನು ಯಾವುದೇ ಅಕಾಡಮಿಗೆ ಹೋಗುತ್ತಿಲ್ಲ. ನರ್ವಾಲ್ ಜೊತೆಗೆ ಇಲ್ಲಿಗೆ ಬಂದಿರುವೆ ಎಂದಾಗ ದಿನನಿತ್ಯ ನೆಟ್ ಅಭ್ಯಾಸಕ್ಕೆ ಬರುವಂತೆ ಗಂಭೀರ್ ಸಲಹೆ ನೀಡಿದರು ’’ಎಂದು ಸೈನಿ ನುಡಿದರು.

ಕಳೆದ ಐಪಿಎಲ್ ಅವೃತ್ತಿಯಲ್ಲಿ 10 ಲಕ್ಷ ರೂ. ಮೊತ್ತಕ್ಕೆ ಡೆಲ್ಲಿ ಡೇರ್‌ಡೆವಿಲ್ಸ್ ತಂಡಕ್ಕೆ ಸೈನಿ ಸೇರ್ಪಡೆಗೊಂಡಿದ್ದರು. ರಾಹುಲ್ ದ್ರಾವಿಡ್ ಮತ್ತು ಝಹೀರ್ ಖಾನ್ ಮಾರ್ಗದರ್ಶನದಲ್ಲಿ ಸೈನಿ ಉತ್ತಮ ಬೌಲರ್ ಆಗಿ ರೂಪುಗೊಂಡಿದ್ದಾರೆ. ಸೈನಿ ರಣಜಿ ಟ್ರೋಫಿ ಸೆಮಿಫೈನಲ್‌ನಲ್ಲಿ ಎದುರಾಳಿ ತಂಡ ಬಂಗಾಳ ವಿರುದ್ಧ 90ಕ್ಕೆ 7 ವಿಕೆಟ್ ಉಡಾಯಿಸುವ ಮೂಲಕ ದಿಲ್ಲಿ ದಶಕದ ಬಳಿಕ ರಣಜಿ ಟ್ರೋಫಿ ಫೈನಲ್ ತಲುಪಲು ನೆರವಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X