Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇವದಾಸಿ ಪದ್ಧತಿಗೆ ಕಡಿವಾಣ ಹಾಕಲು ಸಮಗ್ರ...

ದೇವದಾಸಿ ಪದ್ಧತಿಗೆ ಕಡಿವಾಣ ಹಾಕಲು ಸಮಗ್ರ ನೀತಿ ಜಾರಿಯಾಗಲಿದೆ: ಲೀನಾ

ವಾರ್ತಾಭಾರತಿವಾರ್ತಾಭಾರತಿ27 Dec 2017 7:05 PM IST
share

ಬೆಂಗಳೂರು, ಡಿ.27: ಕರ್ನಾಟಕದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ದೇವದಾಸಿಯರಿದ್ದು, ಇವರಿಗೆ ಪ್ರತ್ಯೇಕ ಆರೋಗ್ಯ ವಿಮೆ ಹಾಗೂ ಈ ದೇವದಾಸಿಯರ ಮಕ್ಕಳಿಗೆ ಶೇ.3ರಷ್ಟು ಮೀಸಲಾತಿ, ಮಾಸಾಶನ ಹೆಚ್ಚಳದ ಬಗ್ಗೆ ಸಮಗ್ರ ಪುನರ್ವಸತಿ ನೀತಿ ರೂಪಿಸಲಾಗುತ್ತಿದೆ ಎಂದು ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಲೀನಾ ಹೇಳಿದ್ದಾರೆ.

ಬುಧವಾರ ಜ್ಞಾನ ಜ್ಯೋತಿ ಸಭಾಂಗಣದ ಬೋರ್ಡ್ ರೂಮ್‌ನಲ್ಲಿ ತಳಸಮುದಾಯದ ಅಧ್ಯಯನ ಕೇಂದ್ರ ಆಯೋಜಿಸಿದ್ದ ದೇವದಾಸಿ ತಾಯಂದಿರ ಮತ್ತು ಮಕ್ಕಳ ಸಹಭಾಗಿತ್ವದಲ್ಲಿ ಅಧ್ಯಯನ ಮತ್ತು ಸಮಗ್ರ ಪುನರ್ವಸತಿ ನೀತಿ ರೂಪಿಸುವ ರಾಜ್ಯಮಟ್ಟದ ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

1982ರಲ್ಲಿ ದೇವದಾಸಿ ಪದ್ಧತಿ ನಿಷೇಧ ಕಾಯಿದೆ ಜಾರಿಗೆ ಬಂದಿದ್ದು, ಅಲ್ಲಿಂದ ಇಲ್ಲಿಯವರೆಗೆ ದೇವದಾಸಿಯರಿಗೆ ಹಾಗೂ ಅವರ ಮಕ್ಕಳಿಗೆ ರಾಜ್ಯ ಸರಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸದೃಢರನ್ನಾಗಿಸಿದೆ. ಹೀಗಾಗಿ, ಇನ್ನು ಮುಂದೆಯೂ ಈ ದೇವದಾಸಿಯರಿಗೆ ಪ್ರತ್ಯೇಕ ಆರೋಗ್ಯ ವಿಮೆ ಹಾಗೂ ಇವರ ಮಕ್ಕಳಿಗೆ ಶೇ.3ರಷ್ಟು ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಹೇಳಿದರು.

 2007ರ ಸರಕಾರಿ ವರದಿ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ 4724 ದೇವದಾಸಿಯರು, ವಿಜಯಪುರದಲ್ಲಿ 4103, ಬಾಗಲಕೋಟೆ 7827, ರಾಯಚೂರು 3949, ಕೊಪ್ಪಳ 6035, ಹಾವೇರಿ 990, ಗದಗ 2900, ಬಳ್ಳಾರಿ 9733, ಕಲಬುರ್ಗಿ 1445, ಯಾದಗಿರಿ 1169, ಚಿತ್ರದುರ್ಗ 406, ಶಿವಮೊಗ್ಗ 24, ದಾವಣಗೆರೆ 2592, ಧಾರವಾಡ 763 ದೇವದಾಸಿ ತಾಯಂದಿರಿದ್ದಾರೆ. ಈ ದೇವದಾಸಿ ತಾಯಂದಿರಿಗೆ ಪ್ರತಿ ತಿಂಗಳು 1 ಸಾವಿರ ರೂ.ಮಾಶಾಸನ ನೀಡುತ್ತಿದ್ದು, ಈ ಮಾಶಾಸನ ಹೆಚ್ಚಳ ಆಗುವ ಅವಶ್ಯಕತೆ ಇದೆ. ಹಾಗೂ ಇವರ ಮಕ್ಕಳಿಗೆ ಉಚಿತ ಶಿಕ್ಷಣ, ಮೀಸಲಾತಿ, ಆರೋಗ್ಯ ಭಾಗ್ಯ ಕಲ್ಪಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ತಳಸಮುದಾಯಗಳ ಅಧ್ಯಯನ ಕೇಂದ್ರದ ರಾಷ್ಟ್ರೀಯ ಕಾನೂನು ಶಾಲೆಯ ಸಂಚಾಲಕ ಪ್ರೊ.ಪ್ರದೀಪ್ ರಮಾವತ್ ಮಾತನಾಡಿ, ಎಸ್ಸಿ, ಎಸ್ಟಿ ಹಾಗೂ ಓಬಿಸಿ ಜನಾಂಗದವರೆ ಹೆಚ್ಚಾಗಿ ದೇವದಾಸಿಯರಾಗಿದ್ದು, ಈ ಅನಿಷ್ಟ ಪದ್ಧತಿಗೆ ಕಡಿವಾಣ ಹಾಕಲು ಸಮಗ್ರ ಪುನರ್ವಸತಿ ನೀತಿ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ವಿವಿಯ ಕುಲಪತಿ ಪ್ರೊ.ಎಸ್.ಜಾಫೆಟ್, ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಮುಖಂಡೆ ಪಡಿಯಮ್ಮ, ದೇವದಾಸಿ ಸಂಪನ್ಮೂಲ ಕೇಂದ್ರದ ಸಲಹೆಗಾರ ಪ್ರೊ.ವೈ.ಜೆ.ರಾಜೇಂದ್ರ, ತಳಸಮುದಾಯಗಳ ಅಧ್ಯಯನ ಕೇಂದ್ರದ ಸಂಶೋಧನಾ ಸಲಹೆಗಾರ ಡಾ.ಆರ್.ವಿ.ಚಂದ್ರಶೇಖರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X