Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಆಭರಣ ಕ್ಷೇತ್ರದಲ್ಲಿ ಸ್ಥಳೀಯರಿಗೆ ಅವಕಾಶ:...

ಆಭರಣ ಕ್ಷೇತ್ರದಲ್ಲಿ ಸ್ಥಳೀಯರಿಗೆ ಅವಕಾಶ: ಸೌದಿಯಲ್ಲಿ ವಿದೇಶಿ ಕಾರ್ಮಿಕರ ಉದ್ಯೋಗಕ್ಕೆ ಕತ್ತರಿ

ವಾರ್ತಾಭಾರತಿವಾರ್ತಾಭಾರತಿ27 Dec 2017 10:07 PM IST
share
ಆಭರಣ ಕ್ಷೇತ್ರದಲ್ಲಿ ಸ್ಥಳೀಯರಿಗೆ ಅವಕಾಶ: ಸೌದಿಯಲ್ಲಿ ವಿದೇಶಿ ಕಾರ್ಮಿಕರ ಉದ್ಯೋಗಕ್ಕೆ ಕತ್ತರಿ

ರಿಯಾದ್, ಡಿ.27: ಸ್ಥಳೀಯ ಜನರಿಗೆ ಅವಕಾಶ ನೀಡುವ ಸಲುವಾಗಿ ಆಭರಣ ಕ್ಷೇತ್ರದಲ್ಲಿ ವಿದೇಶಿ ಕೆಲಸಗಾರರಿಗೆ ಕತ್ತರಿ ಹಾಕಲು ಸೌದಿ ಅರೇಬಿಯಾ ನಿರ್ಧರಿಸಿದೆ. ಚಿನ್ನ ಮತ್ತು ಆಭರಣ ಕ್ಷೇತ್ರದಲ್ಲಿ ಸ್ಥಳೀಯತೆಗೆ ಪ್ರಾಮುಖ್ಯತೆ ನೀಡುವ ಉದ್ದೇಶದೊಂದಿಗೆ ಸೌದಿ ಅರೇಬಿಯಾದ ಏಳು ಆಡಳಿತ ಪ್ರದೇಶಗಳು ಈ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ಘೋಷಿಸಿವೆ.

ಈ ಬೆಳವಣಿಗೆಯು ಎರಡು ವಾರಗಳ ಹಿಂದೆ ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ ಸ್ಥಳೀಯತೆಯನ್ನು ಪ್ರೋತ್ಸಾಹಿಸಲು ತೆಗೆದುಕೊಂಡ ನಿರ್ಧಾರದ ಭಾಗವಾಗಿದೆ ಎಂದು ಸಚಿವಾಲಯದ ವಕ್ತಾರರಾದ ಖಾಲಿದ್ ಅಬಾ ಅಲ್-ಖೈಲ್ ಅರಬ್ ನ್ಯೂಸ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಖಾಸಿಮ್,ತಬೂಕ್, ನಜ್ರಾನ್, ಬಹಾ, ಅಸಿರ್, ಉತ್ತರದ ಗಡಿ ಮತ್ತು ಜಝಾನ್ ಮುಂತಾದ ಏಳು ಆಡಳಿತ ಪ್ರದೇಶಗಳಲ್ಲಿ ಮೊದಲ ಹಂತದಲ್ಲಿ ಆಭರಣ ಕ್ಷೇತ್ರದಲ್ಲಿ ವಿದೇಶಿಯರ ಅವಲಂಬನೆಯನ್ನು ಕಡಿಮೆಗೊಳಿಸಿದ ಸ್ಥಳೀಯರಿಗೆ ಅವಕಾಶ ನೀಡಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ. ಹದಿಮೂರು ಆಡಳಿತ ಪ್ರದೇಶಗಳ ಪೈಕಿ ಆಯ್ದ ಏಳು ಪ್ರದೇಶಗಳು ಈಗಾಗಲೇ ಸೌದಿ ಪ್ರಜೆಗಳನ್ನು ಆಯ್ಕೆ ಮಾಡುವ ಮತ್ತು ಅವರಿಗೆ ತರಬೇತಿ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿವೆ. ಸೌದಿ ಅರೇಬಿಯಾದಲ್ಲಿರುವ ಆರು ಸಾವಿರ ಚಿನ್ನ ಮತ್ತು ಆಭರಣ ಮಳಿಗೆಗಳಲ್ಲಿ ಸುಮಾರು 35,000 ವಿದೇಶಿಯರು ಕೆಲಸ ಮಾಡುತ್ತಿದ್ದಾರೆ.

ಚಿನ್ನ ಮತ್ತು ಆಭರಣ ಮಳಿಗೆಗಳಲ್ಲಿ ಸ್ಥಳೀಯತೆ ತರುವ ನಿರ್ಧಾರವು ಪ್ರದೇಶ ಆಧಾರಿತ ಸ್ಥಳೀಯಕರಣದ ಕಾರ್ಯಕ್ರಮದ ಅಡಿಯಲ್ಲಿ ಬರುತ್ತದೆ ಮತ್ತು ಅದಕ್ಕೆ ಮುನಿಸಿಪಲ್ ಮತ್ತು ಗ್ರಾಮೀಣ ವ್ಯವಹಾರ ಸಚಿವಾಲಯ, ಕಾಮರ್ಸ್ ಮತ್ತು ಹೂಡಿಕೆ ಸಚಿವಾಲಯ, ಸಾರ್ವಜನಿಕ ಕ್ಷೇತ್ರ ಮತ್ತು ಪಾಸ್‌ಪೋರ್ಟ್ ಇಲಾಖೆಯ ಸಹಯೋಗದೊಂದಿಗೆ ಆಂತರಿಕ ಸಚಿವಾಲಯ, ಕಾರ್ಮಿಕ ಸಚಿವಾಲಯ ಮತ್ತು ರಾಜ್ಯಪಾಲರು ಚಾಲನೆ ನೀಡಿದ್ದಾರೆ ಎಂದು ಖೈಲ್ ತಿಳಿಸಿದ್ದಾರೆ.

ಉತ್ತರದ ಗಡಿ ಪ್ರದೇಶದಲ್ಲಿ ಈಗಾಗಲೇ 12 ವ್ಯವಹಾರ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಳೀಯಕರಣ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X