Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಮಾಜ ಒಡೆಯುವ ಹೆಗಡೆ ಹೇಳಿಕೆ ಖಂಡನಾರ್ಹ

ಸಮಾಜ ಒಡೆಯುವ ಹೆಗಡೆ ಹೇಳಿಕೆ ಖಂಡನಾರ್ಹ

ವಾರ್ತಾಭಾರತಿವಾರ್ತಾಭಾರತಿ27 Dec 2017 11:54 PM IST
share

ಮಾನ್ಯರೇ,

ಕೇಂದ್ರ ಸರಕಾರದ ಉನ್ನತ ಮಂತ್ರಿ ಸ್ಥಾನದಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ ಕುಮಾರ ಹೆಗಡೆಯವರು ಇತ್ತೀಚೆಗೆ ವಿವಾದ ಸೃಷ್ಟಿಸುವಂತಹ ಹೇಳಿಕೆಗಳನ್ನೇ ನೀಡುತ್ತಿದ್ದಾರೆ. ಇತರ ಧರ್ಮಗಳ ಬಗ್ಗೆ ಹಗುರವಾಗಿ ಮಾತನಾಡುವುದಲ್ಲದೆ, ‘‘ಜಾತ್ಯತೀತರು ಅಪ್ಪಅಮ್ಮನ ರಕ್ತದ ಪರಿಚಯ ಇಲ್ಲದವರು’’, ‘‘ಸಂವಿಧಾನವನ್ನು ಬದಲಿಸಬೇಕು’’, ‘‘ಸಂವಿಧಾನವನ್ನು ಬದಲಿಸಲಿಕ್ಕಾಗಿಯೇ ನಾವು ಬಂದಿರುವುದು’’ ಎಂಬ ಇವರ ಪ್ರಚೋದನಾಕಾರಿಯ ಕಿಡಿನುಡಿಗಳು ಸಮಾಜದಲ್ಲಿನ ಸಾಮರಸ್ಯ, ಶಾಂತಿ ಮತ್ತು ಸುವ್ಯವಸ್ಥೆಗೆ ಕಂಟಕವಾಗುತ್ತಿವೆ. ಧರ್ಮ ಧರ್ಮಗಳ ನಡುವೆ ದ್ವೇಷ ಭಾವನೆ ಹುಟ್ಟುತ್ತಿದೆ.

‘‘ಜಾತ್ಯತೀತ ಎಂದು ಕರೆಸಿಕೊಳ್ಳುವವರನ್ನು ಸಂಶಯದಿಂದ ನೋಡಬೇಕಾಗುತ್ತದೆ’’ ಎನ್ನುವ ಮಾನ್ಯ ಅನಂತ ಕುಮಾರರವರೇ, ಭಾರತದಲ್ಲಿ ಅಣ್ಣ ಬಸವಣ್ಣ, ಸಂತ ಕನಕದಾಸ, ಮಹಾತ್ಮಾ ಗಾಂಧಿ, ಸ್ವಾಮಿ ವಿವೇಕಾನಂದ, ಡಾ. ಬಿ. ಆರ್. ಅಂಬೇಡ್ಕರ್, ಡಾ ಎ.ಪಿ.ಜೆ. ಅಬ್ದುಲ್ ಕಲಾಂ ಒಳಗೊಂಡಂತೆ ಅನೇಕ ಮಹಾತ್ಮರು, ಶರಣರು, ಸಂತರು, ರಾಷ್ಟ್ರೀಯ ನಾಯಕರು ಜಾತ್ಯತೀತರು ಎಂದು ಕರೆಸಿಕೊಂಡಿದ್ದಾರೆ. ಅಂದರೆ ಸಚಿವರ ದೃಷ್ಟಿಯಲ್ಲಿ ಅವರನ್ನು ಕೂಡಾ ಸಂಶಯದಿಂದಲೇ ನೋಡಬೇಕೇ?

ಉನ್ನತ ಸ್ಥಾನದಲ್ಲಿರುವ ಒಬ್ಬ ಸಚಿವರಾಗಿರುವ ಅನಂತ ಕುಮಾರ ಹೆಗಡೆಯವರು ಅನಕ್ಷರಸ್ಥರು ಕೂಡಾ ಮಾತನಾಡದಂತಹ ಅವಿವೇಕಿತನದ ಮಾತುಗಳನ್ನಾಡುತ್ತಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ.

ಸಾವಿನಲ್ಲೂ ರಾಜಕಾರಣ ಮಾಡಿ ಇಡೀ ರಾಜ್ಯವೇ ಹೊತ್ತಿ ಉರಿಯುವಂತೆ ಮಾಡುತ್ತಿರುವ ಸಚಿವರು ದಲಿತ ಸಮುದಾಯದ ಅಪ್ರಾಪ್ತ ವಯಸ್ಸಿನ ಸಹೋದರಿ ದಾನಮ್ಮಳನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆಗೈದವರ ಕುರಿತು ತುಟಿ ಬಿಚ್ಚಲಿಲ್ಲ ಯಾಕೆ? ದಲಿತರ ಜೀವಕ್ಕೆ ಬೆಲೆಯಿಲ್ಲವೇ?.

ತಮ್ಮ ಸ್ವಾರ್ಥ ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಹಿಂದುತ್ವದ ಹೆಸರಿನಲ್ಲಿ ಸಮಾಜಕ್ಕೆ ಕಿಚ್ಚಿಡಲು ಪ್ರಯತ್ನಿಸುತ್ತಿರುವ ಸಚಿವರು, ತಾವು ಜವಾಬ್ದಾರಿಯುತ ಸ್ಥಾನದಲ್ಲಿದ್ದರೂ ಸಮಾಜಕ್ಕೆ ಕೊಟ್ಟ ಕೊಡುಗೆಯೇನು? ತಮ್ಮ ಸಚಿವ ಸ್ಥಾನದಿಂದ ರಾಜ್ಯದ ಎಷ್ಟು ಯುವಕರಿಗೆ ಉಪಯೋಗವಾಗಿದೆ?

ಆದ್ದರಿಂದ ಸಚಿವರೇ, ನಿಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಢೋಂಗಿ ದೇಶ ಭಕ್ತಿ, ಢೋಂಗಿ ಹಿಂದುತ್ವದ ಹೆಸರಿನಲ್ಲಿ ಸಮಾಜದ ಮುಗ್ಧ ಜನರನ್ನು ಬಲಿಪಶು ಮಾಡಬೇಡಿ.ಸಮಾಜವನ್ನು ಒಡೆಯದಿರಿ.

ನಬಿಪಟೇಲ್ ಕೆ. ಆಲಗೂರ, ಸಿಂದಗಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X