Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಚಾರಿ ಪೊಲೀಸರಿಗೆ ಕನ್ನಡ ಅಂಕಿ ಪರೀಕ್ಷೆ...

ಸಂಚಾರಿ ಪೊಲೀಸರಿಗೆ ಕನ್ನಡ ಅಂಕಿ ಪರೀಕ್ಷೆ ಅಗತ್ಯವಿದೆ: ಡಾ.ವಸುಂಧರಾ ಭೂಪತಿ

ವಾರ್ತಾಭಾರತಿವಾರ್ತಾಭಾರತಿ28 Dec 2017 7:32 PM IST
share
ಸಂಚಾರಿ ಪೊಲೀಸರಿಗೆ ಕನ್ನಡ ಅಂಕಿ ಪರೀಕ್ಷೆ ಅಗತ್ಯವಿದೆ: ಡಾ.ವಸುಂಧರಾ ಭೂಪತಿ

ಬೆಂಗಳೂರು, ಡಿ.28: ವಾಹನದ ಮೇಲಿರುವ ಕನ್ನಡ ಅಂಕಿಗಳನ್ನು ಓದುವಲ್ಲಿ ಸಂಚಾರಿ ಪೊಲೀಸರು ವಿಲರಾಗುತ್ತಿದ್ದಾರೆ. ಆದ್ದರಿಂದ ಸಂಚಾರಿ ಪೊಲೀಸರಿಗೆ ಸರಕಾರ ಕಡ್ಡಾಯವಾಗಿ ಕನ್ನಡ ಅಂಕಿ ಪರೀಕ್ಷೆ ನಡೆಸಬೇಕೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಅಭಿಪ್ರಾಯಿಸಿದ್ದಾರೆ.

ಕನ್ನಡ ಅನುಷ್ಠಾನ ಮಂಡಳಿ ವತಿಯಿಂದ ನಗರದ ಮಲ್ಲೇಶ್ವರಂನ ಆಟದ ಮೈದಾನದ ಮುಖ್ಯ ದ್ವಾರದಲ್ಲಿ ಹಮ್ಮಿಕೊಂಡ ಕನ್ನಡ ಅಂಕಿ ಸಪ್ತಾಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡದ ಅಂಕಿಗಳನ್ನು ಮುಖ್ಯ ಭೂಮಿಕೆಗೆ ತರಬೇಕು. ಸಂವಹನ ಸಂಕೇತವಾದ ಅಂಕಿಗಳು ಭಾಷೆ ವಿಸ್ತರಣೆಗೆ ಸಹಾಯಕವಾಗಿವೆ ಎಂದರು.

ಎರಡು ಸಾವಿರ ವರ್ಷ ಇತಿಹಾಸವಿರುವ ಕನ್ನಡ ಅಂಕಿಗಳನ್ನು ಬಳಸಲು ಹಿಂದೇಟು ಹಾಕುತ್ತಿರುವ ನಾವು ಕೇವಲ 300ವರ್ಷ ಇತಿಹಾಸವಿರುವ ಇಂಗ್ಲಿಷ್ ಅಂಕಿಗಳನ್ನು ಎಲ್ಲ ಕಡೆಗಳಲ್ಲಿ ಬಳಕೆ ಮಾಡುತ್ತೇವೆ. ಕನ್ನಡ ಅಂಕಿ ಹೊಂದಿರುವ ವಾಹನಕ್ಕೆ ಪೊಲೀಸರು ತಡೆಯೊಡ್ಡಲು ಮೂಲ ಕಾರಣ ಕನ್ನಡ ಅಂಕಿಯ ಬಗೆಗಿನ ಅಜ್ಞಾನ. ಈ ಹಿನ್ನೆಲೆ ಸಂಚಾರಿ ಪೊಲೀಸ್ ಹುದ್ದೆಗೆ ಸೇರುವ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಅಂಕಿ ಪರೀಕ್ಷೆ ನಡೆಸುವಂತೆ ವಸುಂಧರಾ ಭೂತಿ ಸರಕಾರವನ್ನು ಒತ್ತಾಯಿಸಿದರು.

ಕರ್ತವ್ಯ ಚ್ಯುತಿ ಆಗಲಿದೆ: ಮಹಾರಾಷ್ಟ್ರದಲ್ಲಿ ಅಲ್ಲಿನ ಸ್ಥಳೀಯಭಾಷೆ ಮರಾಠಿಯನ್ನು ವಾಹನದ ಸಂಖ್ಯೆ ಸೇರಿದಂತೆ ಆಡಳಿತದಲ್ಲಿಯೂ ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಕನ್ನಡ ಬಳಕೆಯಾಗಬೇಕು. ಕರ್ನಾಟಕ ಮೋಟಾರು ವಾಹನ ಕಾಯಿದೆ ಅನುಸಾರ ವಾಹನದ ಒಂದುಕಡೆ ಕನ್ನಡದಲ್ಲಿ ಅಂಕಿ ಬರೆಸಲು ಅವಕಾಶವಿದೆ. ಇದನ್ನು ಸರಿಯಾಗಿ ಅರ್ಥೈಸಿಕೊಳ್ಳದ ಪೊಲೀಸರು ಡೆಫಿಸಿಟ್ ಸಂಖ್ಯೆ ಎಂದು ಪ್ರಕರಣ ದಾಖಲಿಸುತ್ತಾರೆ. ಈ ಕುರಿತು ಅರಿವು ಮೂಡಿಸುವುದು ಹಾಗೂ ವಾಹನದಲ್ಲಿ ಕನ್ನಡ ಅಂಕಿ ಬಳಸುವಂತೆ ಪ್ರೋತ್ಸಾಹಿಸಲು ಕನ್ನಡ ಅಂಕಿ ಬಳಕೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಸಪ್ತಾಹದಲ್ಲಿ ಎರಡು ಸಾವಿರ ವಾಹನಗಳಿಗೆ ಕನ್ನಡ ಅಂಕಿ ಬರೆಯುವ ಗುರಿ ಹೊಂದಿದ್ದು, ಕಳೆದ 22 ವರ್ಷದಲ್ಲಿ 30 ಸಾವಿರಕ್ಕೂ ಅಧಿಕ ವಾಹನಗಳಿಗೆ ಕನ್ನಡದಲ್ಲಿ ಅಂಕಿ ಬರೆದಿದ್ದೇವೆ ಎಂದು ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ ಆರ್.ಎ. ಪ್ರಸಾದ್ ಮಾಹಿತಿ ನೀಡಿದರು. ಇದೇ ವೇಳೆ ಶಾಸಕ ಡಾ.ಸಿ.ಎನ್. ಅಶ್ವಥ ನಾರಾಯಣ ಅವರು ಬೈಕ್‌ಗೆ ಕನ್ನಡದಲ್ಲಿ ಅಂಕಿ ಬರೆಯುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X