Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಹಾರ ನೀಡಲು ತೆರಳಿದ ಅಧಿಕಾರಿಗಳನ್ನು...

ಪರಿಹಾರ ನೀಡಲು ತೆರಳಿದ ಅಧಿಕಾರಿಗಳನ್ನು ವಾಪಸ್ ಕಳುಹಿಸಿದ ಕುಟುಂಬಸ್ಥರು

ರಾಮಚಂದ್ರ ನಾಯ್ಕ ಆತ್ಮಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 Dec 2017 8:25 PM IST
share
ಪರಿಹಾರ ನೀಡಲು ತೆರಳಿದ ಅಧಿಕಾರಿಗಳನ್ನು ವಾಪಸ್ ಕಳುಹಿಸಿದ ಕುಟುಂಬಸ್ಥರು

ಭಟ್ಕಳ, ಡಿ. 28: ಕಳೆದ ಸೆಪ್ಟೆಂಬರ್ 14 ರಂದು ಪುರಸಭೆಯ ಅಂಗಡಿ ಮಳಿಗೆ ತೆರವು ಕಾರ್ಯಕ್ಕೆ ಆಕ್ರೋಶಗೊಂಡು ಮೈಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ 2 ದಿನದ ಬಳಿಕ ಮೃತಪಟ್ಟ ಪುರಸಭಾ ಅಂಗಡಿಕಾರ ರಾಮಚಂದ್ರ ನಾಯ್ಕ ಮನೆಗೆ ಗುರುವಾರ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ವಿತರಣೆ ಮೊತ್ತ ನೀಡಲು ತಹಶೀಲ್ದಾರ್ ವಿ.ಎನ್.ಬಾಡಕರ್ ಹಾಗು ಶಾಸಕ ತೆರಳಿದ್ದು, ಈ ಸಂದರ್ಭ ಕುಟುಂಬಸ್ಥರು ಪರಿಹಾರದ ಮೊತ್ತವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಸೆ.14ರಂದು ಜಿಲ್ಲಾಡಳಿತ ಆದೇಶದಂತೆ ಪುರಸಭೆ ಅಂಗಡಿ ಮಳಿಗೆಯನ್ನು ತೆರವು ಮಾಡಲು ಬಂದ ಅಧಿಕಾರಿಗಳ ಎದುರಲ್ಲೇ ಅಂಗಡಿಕಾರ ರಾಮಚಂದ್ರ ನಾಯ್ಕ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ನಂತರ ಮೃತಪಟ್ಟರು. ಮೃತನ ಕುಟುಂಬಕ್ಕೆ ಶಾಸಕ ವೈದ್ಯ ಹಾಗೂ ತಹಶೀಲ್ದಾರ್ ವಿ.ಎನ್. ಬಾಡಕರ್ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ವಿಶೇಷ ಮೊತ್ತವನ್ನು ನೀಡಲೆಂದು ಮೃತ ರಾಮಚಂದ್ರ ನಾಯ್ಕ ಮನೆಗೆ ಹೋಗಿದ್ದು, ಈ ಸಂದರ್ಭ ಮೃತ ರಾಮಚಂದ್ರ ನಾಯ್ಕ ಸಹೋದರರು ಪರಿಹಾರ ಮೊತ್ತವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಜಿಲ್ಲಾಡಳಿತ ನೀಡಿದ ಭರವಸೆ ಹಾಗೇ ಇದ್ದು ಯಾವುದೇ ನ್ಯಾಯ ಸಿಕ್ಕಿಲ್ಲ, ಈ ಸಂದರ್ಭ ಪರಿಹಾರದ ಮೊತ್ತ ಸ್ವೀಕರಿಸಲು ಹೇಗೆ ಸಾಧ್ಯ. ಒಂದು ವೇಳೆ ಪರಿಹಾರದ ಮೊತ್ತ ಸ್ವೀಕರಿಸಬೇಕಾದರೆ ಸರಕಾರಕ್ಕೆ ನೀಡಿದ ಮನವಿಯ ಅನುಸಾರ ನಮ್ಮ ಮುಖಂಡರ ಅನುಮತಿಯ ಮೇರೆಗೆ ಪರಿಹಾರ ಮೊತ್ತವನ್ನು ಸ್ವೀಕರಿಸಲಾಗುವುದು ಎಂದು ಮೃತರ ಸಹೋದರರು ತಹಶೀಲ್ದಾರ್  ಅವರಿಗೆ ತಿಳಿಸಿದ್ದು, ಕಳೆದ ಒಂದು ವಾರದ ಹಿಂದೆ ಇವರ ಮನೆಯ ಹಿಂಬದಿಯ ಗೂಡಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಬಗ್ಗೆ ತಿಳಿಸಿದ್ದು, ಈ ತನಕ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ, ಕಿಡಿಗೇಡಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಿಲ್ಲವೆ ಎಂದು ಶಾಸಕ ಹಾಗೂ ತಹಶೀಲ್ದಾರ್‍ರನ್ನು ಪ್ರಶ್ನಿಸಿದರು.

ಮೃತ ರಾಮಚಂದ್ರ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪರಿಹಾರದ ಮೊತ್ತವನ್ನು ತರಲಾಗಿದೆ ಎಂದು ಶಾಸಕ ವೈದ್ಯ ಹೇಳಿದಕ್ಕೆ ರಾಮಚಂದ್ರ ನಾಯ್ಕ ಸಹೋದರರು ಆತ ಆತ್ಮಹತ್ಯೆ ಮಾಡಿಕೊಳ್ಳಲು ಅಧಿಕಾರಿಗಳು ಪ್ರೇರಣೆ ನೀಡಿದ್ದು, ಇದೊಂದು ಕೊಲೆಯಾಗಿದೆ. ಈ ಬಗ್ಗೆ ಆತ ತನ್ನ ಕೊನೆಯ ಕ್ಷಣದಲ್ಲಿ ಹೇಳಿದ ವಿಡಿಯೋವೊಂದನ್ನು ತೋರಿಸಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಪಟ್ಟು ಹಿಡಿದರು.

ಕೊನೆಗೆ ಶಾಸಕ ವೈದ್ಯ ಹಾಗೂ ತಹಶೀಲ್ದಾರ್ ಮೃತ ರಾಮಚಂದ್ರ ನಾಯ್ಕ ಮನೆಯಿಂದ ಪರಿಹಾರದ ಚೆಕ್ ಹಿಡಿದು ವಾಪಸ್ಸು ಹಿಂತಿರುಗಿದರು ಎಂದು ತಿಳಿದುಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X