Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತೀ ತಿಂಗಳು ಎಲ್‌ಪಿಜಿ ದರ ಏರಿಕೆ ಆದೇಶ...

ಪ್ರತೀ ತಿಂಗಳು ಎಲ್‌ಪಿಜಿ ದರ ಏರಿಕೆ ಆದೇಶ ಹಿಂಪಡೆದ ಸರಕಾರ

ವಾರ್ತಾಭಾರತಿವಾರ್ತಾಭಾರತಿ28 Dec 2017 9:54 PM IST
share
ಪ್ರತೀ ತಿಂಗಳು ಎಲ್‌ಪಿಜಿ ದರ ಏರಿಕೆ ಆದೇಶ ಹಿಂಪಡೆದ ಸರಕಾರ

ಹೊಸದಿಲ್ಲಿ, ಡಿ.28: ಎಲ್‌ಪಿಜಿ ದರವನ್ನು ಪ್ರತೀ ತಿಂಗಳೂ 4 ರೂ. ಏರಿಸುವ ಆದೇಶವು ಬಡವರಿಗೆ ಉಚಿತ ಅಡುಗೆ ಅನಿಲ ವಿತರಿಸುವ ‘ಉಜ್ವಲ ಯೋಜನೆಗೆ’ ವಿರುದ್ಧವಾಗಿರುವ ಕಾರಣ ಈ ಆದೇಶವನ್ನು ಕೇಂದ್ರ ಸರಕಾರ ಹಿಂಪಡೆದಿದೆ.

 ಸಬ್ಸಿಡಿಯನ್ನು ಸಂಪೂರ್ಣ ತೊಡೆದುಹಾಕುವ ನಿಟ್ಟಿನಲ್ಲಿ ಎಲ್‌ಪಿಜಿ ಸಿಲಿಂಡರ್ ದರವನ್ನು ಪ್ರತೀ ತಿಂಗಳು 4 ರೂ. ಏರಿಸುವ ಆದೇಶವನ್ನು 2016ರ ಜುಲೈಯಲ್ಲಿ ಸರಕಾರ ಜಾರಿಗೊಳಿಸಿತ್ತು. ಈ ಬಳಿಕ ತೈಲ ಕಂಪೆನಿಗಳು 10 ಬಾರಿ ಎಲ್‌ಪಿಜಿ ಗ್ಯಾಸ್‌ನ ಬೆಲೆ ಏರಿಸಿವೆ. ಇದೀಗ ಅಕ್ಟೋಬರ್‌ನಿಂದ ಅನ್ವಯವಾಗುವಂತೆ ಈ ಆದೇಶವನ್ನು ಹಿಂಪಡೆದಿರುವುದಾಗಿ ಸರಕಾರ ತಿಳಿಸಿದೆ. ವರ್ಷವೊಂದಕ್ಕೆ ಪ್ರತಿಯೊಂದು ಮನೆಗೂ 14.2 ಕಿ.ಗ್ರಾಂ. ತೂಕದ 12 ಸಿಲಿಂಡರ್‌ಗಳನ್ನು ಸಬ್ಸಿಡಿ ದರದಲ್ಲಿ ಪೂರೈಸಲಾಗುತ್ತದೆ. ಹೆಚ್ಚುವರಿ ಸಿಲಿಂಡರ್‌ಗಳ ಅಗತ್ಯವಿದ್ದರೆ ಮಾರುಕಟ್ಟೆ ದರದಲ್ಲಿ ಖರೀದಿಸಬೇಕು.

   ಒಂದೆಡೆ ಬಡವರಿಗೆ ಉಚಿತ ಎಲ್‌ಪಿಜಿ ನೀಡುವುದಾಗಿ ಘೋಷಿಸಿರುವ ಸರಕಾರ, ಇನ್ನೊಂದೆಡೆ ಅಡುಗೆ ಅನಿಲ ದರ ಏರಿಸಿದರೆ ಪ್ರತಿಕೂಲ ಸಂಕೇತ ರವಾನೆಯಾಗುವ ಸಾಧ್ಯತೆಯಿರುವ ಕಾರಣ ಈ ಆದೇಶ ಹಿಂಪಡೆದಿರುವುದಾಗಿ ಸರಕಾರದ ಮೂಲಗಳು ತಿಳಿಸಿವೆ. ಅಕ್ಟೋಬರ್‌ನಿಂದ ತೈಲ ಕಂಪೆನಿಗಳು ಗ್ಯಾಸ್ ದರ ಏರಿಸಿಲ್ಲ. ಆದರೆ ತೆರಿಗೆ ಸಮಸ್ಯೆಯ ಕಾರಣ ಸಬ್ಸಿಡಿ ಸಹಿತ ಸಿಲಿಂಡರ್ ಬೆಲೆಯಲ್ಲಿ ಅಕ್ಟೋಬರ್ ಬಳಿಕವೂ ಏರಿಕೆಯಾಗಿದೆ ಎಂದು ತಿಳಿಸಲಾಗಿದೆ. ಸರಕಾರದ ಯೋಜನೆಗಳ ಪ್ರಯೋಜನವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುವ ಕಾರಣ ತೆರಿಗೆ ಸಮಸ್ಯೆ ಉಂಟಾಗಿದೆ. ಈ ಮೊದಲು ಡೀಲರ್‌ಗಳು ಸಬ್ಸಿಡಿಸಹಿತ ಬೆಲೆಯಲ್ಲಿ ಎಲ್‌ಪಿಜಿಯನ್ನು ಗ್ರಾಹಕರಿಗೆ ಪೂರೈಸುತ್ತಿದ್ದರು.ಆಗ ವ್ಯಾಟ್(ತೆರಿಗೆ) ಇದರಲ್ಲೇ ಕಡಿತವಾಗುತ್ತಿತ್ತು. ಈಗ ಎಲ್‌ಪಿಜಿ ಮಾರುಕಟ್ಟೆ ದರದಲ್ಲಿ ದೊರೆಯುವ ಕಾರಣ ಅದರ ಮೇಲೆ ಜಿಎಸ್‌ಟಿ ಲೆಕ್ಕ ಹಾಕಬೇಕು ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ 18.11 ಕೋಟಿ ಸಬ್ಸಿಡಿ ಸಹಿತ ಎಲ್‌ಪಿಜಿ ಗ್ರಾಹಕರಿದ್ದಾರೆ. ಇವರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಕಳೆದೊಂದು ವರ್ಷದಿಂದ ಉಚಿತ ಗ್ಯಾಸ್ ಸಂಪರ್ಕ ಪಡೆದಿರುವ 3 ಕೋಟಿ ಬಡ ಮಹಿಳೆಯರೂ ಸೇರಿದ್ದಾರೆ. ಪ್ರಧಾನಿ ಕರೆಯ ಮೇರೆಗೆ ಸಬ್ಸಿಡಿ ತ್ಯಜಿಸಿದವರೂ ಸೇರಿ ಒಟ್ಟು 2.66 ಕೋಟಿ ಗ್ರಾಹಕರು ಸಬ್ಸಿಡಿ ರಹಿತ ಎಲ್‌ಪಿಜಿ ಬಳಸುತ್ತಿದ್ದಾರೆ ಎಂದು ಸರಕಾರದ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X