Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಸೆಂಬರ್ 5 ರಿಂದ ಶಶಿಕಲಾ...

ಡಿಸೆಂಬರ್ 5 ರಿಂದ ಶಶಿಕಲಾ ಮೌನವೃತದಲ್ಲಿದ್ದಾರೆ: ದಿನಕರನ್

ವಾರ್ತಾಭಾರತಿವಾರ್ತಾಭಾರತಿ28 Dec 2017 10:07 PM IST
share
ಡಿಸೆಂಬರ್ 5 ರಿಂದ ಶಶಿಕಲಾ ಮೌನವೃತದಲ್ಲಿದ್ದಾರೆ: ದಿನಕರನ್

ಬೆಂಗಳೂರು, ಡಿ.28: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾರ ಪ್ರಥಮ ವಾರ್ಷಿಕ ಪುಣ್ಯತಿಥಿಯ ದಿನವಾದ ಡಿಸೆಂಬರ್ 5ರಿಂದ ಶಶಿಕಲಾ ಜೈಲಿನಲ್ಲಿ ಮೌನವೃತ ಆಚರಿಸುತ್ತಿದ್ದಾರೆ ಎಂದು ಎಐಎಡಿಂಕೆ ಶಶಿಕಲಾ ಬಣದ ಮುಖಂಡ ಟಿಟಿವಿ ದಿನಕರನ್ ತಿಳಿಸಿದ್ದಾರೆ.

 ‘ಅಮ್ಮ’ನ ಪುಣ್ಯತಿಥಿಯ ದಿನದಿಂದ ಶಶಿಕಲಾ ಮೌನವೃತ ಆಚರಿಸುತ್ತಿದ್ದಾರೆ. ಜನವರಿ ತಿಂಗಳಾಂತ್ಯದವರೆಗೆ ಮೌನವೃತ ಮುಂದುವರಿಯಲಿದೆ ಎಂದು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕಾರಾಗೃಹದಲ್ಲಿ ಬಂಧಿಯಾಗಿರುವ ಶಶಿಕಲಾರನ್ನು ಭೇಟಿಯಾದ ಬಳಿಕ ದಿನಕರನ್ ಸುದ್ದಿಗಾರರಿಗೆ ತಿಳಿಸಿದರು. 66.65 ಕೋಟಿ ರೂ. ಮೊತ್ತದ ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿ ಶಶಿಕಲಾಗೆ 4 ವರ್ಷದ ಜೈಲುಶಿಕ್ಷೆ ವಿಧಿಸಲಾಗಿದೆ.

   ಡಿ.21ರಂದು ನಡೆದ ಆರ್‌ಕೆ ನಗರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಶಶಿಕಲಾರನ್ನು ಪ್ರಥಮ ಬಾರಿಗೆ ಭೇಟಿಮಾಡಿದ ದಿನಕರನ್, ಪಕ್ಷದ ವಿಷಯದಲ್ಲಿ ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾನು ಶಶಿಕಲಾರಿಗೆ ಮಾಹಿತಿ ನೀಡಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಜಯಲಲಿತಾ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಆಯೋಗವು ಶಶಿಕಲಾಗೆ ಸಮನ್ಸ್ ಜಾರಿ ಮಾಡಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ದಿನಕರನ್, ವೈಯಕ್ತಿಕ ಹಾಜರಾತಿಯಿಂದ ಶಶಿಕಲಾಗೆ ವಿನಾಯಿತಿ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಬಳಿ ಇರುವ ಪುರಾವೆಗಳನ್ನು 15 ದಿನದೊಳಗೆ ಸಲ್ಲಿಸುವಂತೆ ತನಿಖಾ ಆಯೋಗ ತಿಳಿಸಿದೆ ಎಂದರು.

ತನಗೂ ತನಿಖಾ ಆಯೋಗದಿಂದ ಸಮನ್ಸ್ ಬಂದಿದೆ. ಅಗತ್ಯಬಿದ್ದರೆ ಆಯೋಗದೆದುರು ಹಾಜರಾಗಿ ವಿವರ ನೀಡುತ್ತೇನೆ ಎಂದವರು ಹೇಳಿದ್ದಾರೆ. ಐಎಎಸ್ ಅಧಿಕಾರಿಗಳು, ವೈದ್ಯರು, ಜಯಲಲಿತಾ ಸೋದರ ಸೊಸೆ ಜೆ.ದೀಪಾ, ಸೋದರಳಿಯ ದೀಪಕ್, ಡಿಎಂಕೆ ಕಾರ್ಯಕರ್ತ ಪಿ.ಸರವಣನ್ ಅವರು ಈಗಾಗಲೇ ತನಿಖಾ ಆಯೋಗದೆದುರು ಹಾಜರಾಗಿದ್ದಾರೆ.

ನಗರದ ನಿವಾಸಿ ಮಹಿಳೆಯೋರ್ವರು ತಾನು ಜಯಲಲಿತಾ ಪುತ್ರಿ ಎಂದು ಹೇಳಿಕೊಳ್ಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ದಿವಂಗತ ಮುಖ್ಯಮಂತ್ರಿ ಎಂಜಿಆರ್ ನಿಧನದ ಸಂದರ್ಭವೂ ಇಂತಹ ಪ್ರಕರಣ ನಡೆದಿತ್ತು. ಇಂತಹ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಜಯಲಲಿತಾ ಹೇಳುತ್ತಿದ್ದರು. ತಾವೂ ಇದನ್ನೇ ಹೇಳುತ್ತಿದ್ದೇವೆ ಎಂದರು. ಜಯಲಲಿತಾ ಆಸ್ಪತ್ರೆಯಲ್ಲಿದ್ದ ವೀಡಿಯೊವನ್ನು ತನಗೆ ಅರಿವಿಲ್ಲದಂತೆ ತನ್ನ ಸಹಚರ ಪಿ.ವೆಟ್ರಿವೇಲ್ ಬಿಡುಗಡೆ ಮಾಡಿದ್ದಾರೆ ಎಂದು ದಿನಕರನ್ ಹೇಳಿದರು.

  ಜಯಲಲಿತಾರ ಒತ್ತಾಯದ ಮೇರೆಗೆ ಶಶಿಕಲಾ ಈ ವೀಡಿಯೊ ಚಿತ್ರೀಕರಿಸಿದ್ದರು . ನಮಗೆ ವೀಡಿಯೊ ಬಿಡುಗಡೆ ಮಾಡಬೇಕೆಂದಿದ್ದರೆ ಚುನಾವಣಾ ಆಯೋಗದ ಅನುಮತಿ ಪಡೆದು ಬಿಡುಗಡೆ ಮಾಡುತ್ತಿದ್ದೆವು ಎಂದ ದಿನಕರನ್, ತಮ್ಮನ್ನು ಆಯ್ಕೆ ಮಾಡಿದ ಆರ್.ಕೆ. ನಗರ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ‘ಅಮ್ಮನ ಉತ್ತರಾಧಿಕಾರಿಯಾಗಿರುವ ಚಿನ್ನಮ್ಮ(ಶಶಿಕಲಾ) ನೇತೃತ್ವದ ಎಐಎಡಿಂಕೆಯಲ್ಲಿ ಜನತೆ ವಿಶ್ವಾಸ ಇರಿಸಿದ್ದಾರೆ ಎಂಬುದಕ್ಕೆ ಈ ಗೆಲುವು ಸಾಕ್ಷಿ ಎಂದು ದಿನಕರನ್ ವಿಶ್ಲೇಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X