Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಕನ್ನಡದ ಮಹಾನ್ ಚೇತನ - ಕುವೆಂಪು

ಕನ್ನಡದ ಮಹಾನ್ ಚೇತನ - ಕುವೆಂಪು

ಇಂದು ಕುವೆಂಪು 118ನೇ ಹುಟ್ಟು ಹಬ್ಬ

ಡಿ. ಸಿ. ರಾಮಚಂದ್ರಡಿ. ಸಿ. ರಾಮಚಂದ್ರ28 Dec 2017 11:48 PM IST
share
ಕನ್ನಡದ ಮಹಾನ್ ಚೇತನ - ಕುವೆಂಪು

 ಕುವೆಂಪುರವರು ಕನ್ನಡ ನಾಡಿನ ಹೆಮ್ಮೆಯ ರಸಕವಿ, ಋಷಿಕವಿ, ರಾಷ್ಟ್ರಕವಿ ಕನ್ನಡದ ಮತ್ತೋರ್ವ ವರಕವಿಗಳಾದ ಬೇಂದ್ರೆಯವರಿಂದಲೇ ಯುಗದಕವಿ ಜಗದಕವಿ ಎಂದು ಕೀರ್ತಿವಂತರಾಗಿದ್ದಂತಹವರು. ಕನ್ನಡದ ಹಿರಿಮೆಯನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ತರಗಳಲ್ಲಿ ಎತ್ತಿ ಹಿಡಿದ ಮಹಾನ್ ಚೇತನ.

ಕುವೆಂಪು ಎಂಬ ಮೂರಕ್ಷರದಿಂದಲೇ ಕನ್ನಡಿಗರ ಮನೆ ಮಾತಾದ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ, ಹೊಸಗನ್ನಡ ಸಾಹಿತ್ಯದ ಹಿರಿಯ ಕವಿ. ಕನ್ನಡ ಸಾಹಿತ್ಯವನ್ನು ವಿಶ್ವ ಸಾಹಿತ್ಯ ವೇದಿಕೆಗೆ ಕೊಂಡೊಯ್ದ ವಿಶ್ವಮಾನವ, ಕನ್ನಡದ ಮಹಾನ್ ಚೇತನ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯ ಕುವೆಂಪುರವರು ಹುಟ್ಟಿದ್ದು 29 ಡಿಸೆಂಬರ್ 1904ರಲ್ಲಿ. ತಂದೆ ವೆಂಕಟಪ್ಪಗೌಡರು, ತಾಯಿ ಸೀತಮ್ಮ. ಆದರೆ ಕುವೆಂಪುರವರು ಹುಟ್ಟಿದ್ದು ತಾಯಿಯ ತವರಾದ ಚಿಕ್ಕಮಗಳೂರು ಜಿಲ್ಲೆಯ ಹಿರೇಕೊಡಿಗೆ ಗ್ರಾಮದಲ್ಲಿ. ಮಲೆನಾಡಿನ ಮಡಿಲಿನಲ್ಲಿ ಹುಟ್ಟಿ ಬೆಳೆದ ಕುವೆಂಪುರವರಿಗೆ ಶಾಲೆ, ಕಾಲೇಜು, ವಿಶ್ವವಿದ್ಯಾನಿಲಯಗಳಲ್ಲಿ ಕಲಿತದ್ದಕ್ಕಿಂತ ಹೆಚ್ಚಿನ ವಿಷಯವನ್ನು ಕಲಿಸಿದ್ದು ಮಲೆನಾಡಿನ ಪ್ರಕೃತಿ. ಹೀಗಾಗಿಯೇ ಅವರ ಎಲ್ಲಾ ಕೃತಿಗಳಲ್ಲಿ ಮಲೆನಾಡಿನ ಸೊಬಗು ಕಂಗೊಳಿಸುತ್ತದೆ. ಎಸೆಸೆಲ್ಸಿ ಓದುವಾಗಲೇ ಕುವೆಂಪುರ ಬರೆದಿದ್ದ ‘ಬಿಗಿನರ್ಸ್ ಮ್ಯೂಸ್’ ಎಂಬ ಇಂಗ್ಲಿಷ್ ಕವನ ಸಂಕಲನ ಭಾರತ ಭೇಟಿಗೆ ಬಂದಿದ್ದ ಐರಿಷ್ ಕವಿ ಜೆ.ಎಚ್. ಕಸಿನ್ಸ್‌ರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಅವರ ಸಲಹೆಯಂತೆ ಕನ್ನಡದಲ್ಲಿ ಬರೆಯಲಾರಂಭಿಸಿದ ಕುವೆಂಪು ಬರೆದ ಮೊದಲ ಕನ್ನಡ ಕವನ ಸಂಕಲನ ‘ಅಮಲನ ಕಥೆ’. ನಾಡು ಕಂಡ ಧೀಮಂತರಾದ ಟಿ.ಎಸ್.ವೆಂಕಣ್ಣಯ್ಯ, ಬಿ.ಎಂ.ಶ್ರೀ., ಎ.ಆರ್.ಕೃಷ್ಣಶಾಸ್ತ್ರಿಯವರ ಒಡನಾಟ, ಮಾರ್ಗದರ್ಶನಗಳು ಅವರ ಸಾಹಿತ್ಯವನ್ನು ಶ್ರೀಮಂತಗೊಳಿಸಿದವು. 1925ರಲ್ಲಿ ಪ್ರಕಟವಾದ ಕುವೆಂಪುರವರ ‘ಬೊಮ್ಮನಹಳ್ಳಿ ಕಿಂದರಿ ಜೋಗಿ’ ನಾಡಿನಾದ್ಯಂತ ಮಕ್ಕಳ ಬಾಯಲ್ಲಿ ನಲಿದಾಡಿತು. ಸೆಂಟ್ರಲ್ ಕಾಲೇಜು ವಿದ್ಯಾರ್ಥಿಯಾಗಿದ್ದ ಕುವೆಂಪುರವರಿಗೆ ಕವಿ ಸಮ್ಮೇಳನದ ಅಧ್ಯಕ್ಷ ಪದವಿಯೂ ಅರಸಿ ಬಂತು.

ಕುವೆಂಪು ತಮ್ಮ ಬದುಕಿನ ಸಂದೇಶವೆಂದು ವಿಶ್ವಮಾನವನ ಪರಿಕಲ್ಪನೆಯೊಂದನ್ನು ಮಂಡಿಸಿದವರು. ‘‘ಪ್ರತಿಯೊಂದು ಮಗುವು ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪ ಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ವಿಶ್ವಮಾನವನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು; ಇದನ್ನು ಕಾರ್ಯಗತಗೊಳಿಸಲು ಅಗತ್ಯವಾದ ಸಪ್ತ ಸೂತ್ರಗಳನ್ನು ಮಂಡಿಸುತ್ತಾ ‘ಮನುಷ್ಯಜಾತಿ ತಾನೊಂದೇ ವಲಂ’ ಎಂಬ ಕವಿ ಪಂಪನ ಸೂತ್ರವನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು’’ ಎನ್ನುತ್ತಾರೆ. ಆದರೆ ಮನುಷ್ಯ ಮನುಷ್ಯನಾಗಿ ಬದುಕುವುದೇ ಸಾಧ್ಯವಾಗದಂತಹ ವಿದ್ಯಮಾನಗಳು ಸಂಭವಿಸುತ್ತಿರುವ ಈ ಹೊತ್ತಿನಲ್ಲಿ ಅನೇಕ ವಿಚ್ಛಿದ್ರಕಾರಕ ಶಕ್ತಿಗಳಿಂದ ಮನುಷ್ಯತ್ವವೇ ಚೂರು ಚೂರಾಗುತ್ತಿರುವ ಸಂದರ್ಭದಲ್ಲಿ ಕುವೆಂಪು ಅವರ ವಿಶ್ವಮಾನವ ಕಲ್ಪನೆ ಒಂದು ದೂರದ, ಎತ್ತರದ ಬೆಳಕು ಮಾತ್ರ!.

ಪಂಪನಿಗೆ ಧರ್ಮ ಮತ್ತು ಕಾವ್ಯಧರ್ಮ ಹೇಗೆ ಬೇರೆ ಬೇರೆಯಾಗಿರಲಿಲ್ಲವೋ ಹಾಗೆಯೇ ಕುವೆಂಪು ಅವರಿಗೆ ಪ್ರಕೃತಿ ಮತ್ತು ಕಾವ್ಯ ಪ್ರಕೃತಿ ಬೇರೆ ಬೇರೆಯಾಗಿರಲಿಲ್ಲ. ಕಣ್ಣಿಗೆ ಕಾಣುವ ಪ್ರಕೃತಿ ಹಾಗೂ ಕಣ್ಣಿಗೆ ಕಾಣದ ಪ್ರಕೃತಿಗಳ ಅಂತರ ಸಂಬಂಧವನ್ನು, ಅಂತರ ವಿರೋಧವನ್ನು ತಮ್ಮ ಕೃತಿಗಳಲ್ಲಿ ಅನುಸಂಧಾನ ಮಾಡುತ್ತಾರೆ. ಕಾಡಿನ ರುದ್ರ ಭೀಕರತೆಯನ್ನು ಸೌಮ್ಯ ಸೌಂದರ್ಯವನ್ನು ತಮ್ಮ ಪಾತ್ರಗಳ ವ್ಯಕ್ತಿತ್ವಗಳ ಬೆಳವಣಿಗೆಗೆ ಭಿತ್ತಿಯಾಗಿ ಬೆಳೆಸುತ್ತಾರೆ. ಕಾಡಿನ ಮಹತ್ವ, ಪ್ರಕೃತಿಯ ಅನಂತತೆಯನ್ನು ಸಾರುತ್ತಾರೆ. ಪ್ರಕೃತಿ ತನಗೋಸ್ಕರ ಇದೆ ಎಂಬ ಯಜಮಾನ ಧೋರಣೆಯನ್ನು ಖಂಡಿಸಿ ತಾನು ಅದರ ಒಂದು ಭಾಗ ಮಾತ್ರ ಎಂಬುದನ್ನು ಮನದಟ್ಟಾಗಿಸಿ ಮನುಷ್ಯ ಸಾಧ್ಯತೆಗಳ ಮಿತಿಯನ್ನು ತೋರಿಸುವುದು ಕುವೆಂಪು ಅವರ ಉದ್ದೇಶವಾಗಿದೆ. ಕುವೆಂಪು ತಮ್ಮ ಎರಡು ಕಾದಂಬರಿಗಳಲ್ಲೂ ಮಲೆನಾಡಿನ ಬದುಕನ್ನು ಚಿತ್ರಿಸಿದ್ದಾರೆ, ಹೀಗೆ ಚಿತ್ರಿಸುವಾಗ ಇದು ಸೌಂದರ್ಯ ವರ್ಣನೆ, ಇದು ಕಾಡಿನ ವರ್ಣನೆ, ಇದು ಸಂಪ್ರದಾಯದ ವರ್ಣನೆ ಎಂದೇನು ವಿಭಾಗಿಸಿಲ್ಲ. ಕುವೆಂಪು ಸಾಹಿತ್ಯದಲ್ಲಿ ಪರಿಸರ ಎಂದ ಕೂಡಲೇ ನಮ್ಮ ಮನಸ್ಸಿನಲ್ಲಿ ಮೂಡುವುದು ಅಲ್ಲಿನ ಮರಗಿಡ ಬಳ್ಳಿಗಳು, ನದಿ ತೊರೆಗಳು, ಬೆಟ್ಟ ಗುಡ್ಡಗಳು, ಪ್ರಾಣಿಪಕ್ಷಿಗಳು, ಇನ್ನಿ ತರ ಸಂಗತಿಗಳನ್ನು ಹೇಗೆ ವರ್ಣಿಸಿದ್ದಾರೆ ಎಂಬುದು. ಬೇರೆಲ್ಲಾ ಅವರ ಕೃತಿಗಳಿಗಿಂತ ಕಾದಂಬರಿಗಳಲ್ಲಿ ಇವೆಲ್ಲದರ ವರ್ಣನೆ ಹೆಚ್ಚಾಗಿ ಇದೆ. ಕುವೆಂಪು ಅವರ ಎರಡು ಕಾದಂಬರಿಗಳಲ್ಲಿ ಬರುವ ಪರಿಸರ ಚಿತ್ರಣ, ಕಾಡು, ಗಿಡ, ಮರ, ಬೆಟ್ಟ ಗುಡ್ಡಕ್ಕೆ ಮೀಸಲಿಲ್ಲ, ಅಜ್ಞಾನ, ಮೂಢನಂಬಿಕೆ, ಶೋಷಣೆ ಇವೆಲ್ಲವುಗಳಿಂದ ಮುಕ್ತವಾಗಿ ಬದುಕಲಿಕ್ಕೆ ಬೇಕಾದ ಸಹನೀಯ ವಾತಾವರಣ ನಿರ್ಮಿಸುವುದಾಗಿದೆ. ಒಂದು ಜೀವ ಬದುಕಲಿಕ್ಕೆ ಸಾಧ್ಯವಾಗದಂತಹ ಪರಿಸರ ನಿರ್ಮಾಣವಾಗಿರುವುದನ್ನು ವಿರೋಧಿಸುವ ಮೂಲಕ ಸಮಾನತೆಯ ಕಾಳಜಿಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ಇಂಗ್ಲಿಷ್ ಶಿಕ್ಷಣ, ಪ್ರಾಚ್ಯ - ಪಾಶ್ಚಾತ್ಯ, ತತ್ತ್ವಜ್ಞಾನಗಳ ತಳಸ್ಪರ್ಶಿಯಾದ ತಿಳುವಳಿಕೆ ಆಧುನಿಕ ವಿಜ್ಞಾನ ಮತ್ತು ಜಾಗತಿಕ ಸಮಾಜವಾದಿ ಚಿಂತನೆಗಳೊಂದಿಗೆ ನಡೆಸಿದ ಸಂವಾದ, ಶ್ರೀ ರಾಮಕೃಷ್ಣ -ವಿವೇಕಾನಂದ -ಗಾಂಧಿ - ಅರವಿಂದ ಮತ್ತು ಲೋಹಿಯಾ ಇಂತಹ ವ್ಯಕ್ತಿತ್ವಗಳ ಚಿಂತನೆಯ ಪ್ರಭಾವ ಇತ್ಯಾದಿಗಳಿಂದ ರೂಪುಗೊಂಡ ಕುವೆಂಪು ಅವರ ವೈಚಾರಿಕತೆಯು ಮನುಷ್ಯ ಚೈತನ್ಯದ ಚಲನಶೀಲತೆಯನ್ನು ಸ್ಥಗಿತಗೊಳಿಸುವ ಎಲ್ಲಾ ವಿಕೃತಿಗಳನ್ನು ವಿರೋಧಿಸುತ್ತಾ, ಮನುಷ್ಯರೆಲ್ಲರ ಘನತೆಯನ್ನು ಎತ್ತಿ ಹಿಡಿಯುವ ಸ್ವರೂಪದ್ದಾಗಿದೆ.

 ಕುವೆಂಪು ಅವರು ಬರೆದ ಎರಡು ಕಾದಂಬರಿಗಳಾದ ‘ಕಾನೂರು ಸುಬ್ಬಮ್ಮ ಹೆಗ್ಗಡತಿ’ ಮತ್ತು ‘ಮಲೆಗಳಲ್ಲಿ ಮದುಮಗಳು’ ಭಾರತೀಯ ಸಾಹಿತ್ಯ ಪ್ರಪಂಚದಲ್ಲೇ ಶ್ರೇಷ್ಠಕೃತಿಗಳೆಂಬ ಪ್ರಶಂಸೆಗೆ ಪಾತ್ರವಾಗಿವೆ. ಕನ್ನಡಕ್ಕೆ ಮೊದಲ ಜ್ಞಾನಪೀಠವನ್ನು ತಂದು ಕೊಟ್ಟ ಹಿರಿಮೆಯನ್ನು ಹೊಂದಿದ ಇವರ ‘ಶ್ರೀ ರಾಮಾಯಣ ದರ್ಶನಂ’ ಮಹಾಕಾವ್ಯ ಸಂಸ್ಕೃತ ಮತ್ತು ಹಿಂದಿ ಭಾಷೆಗೆ ಅನುವಾದಗೊಂಡಿದೆ. ಇವರು ‘ಬೆರಳ್ಗೆ ಕೊರಳ್’, ‘ಶೂದ್ರ ತಪಸ್ವಿ’, ‘ಸ್ಮಶಾನ ಕುರುಕ್ಷೇತ್ರಂ’, ‘ರಕ್ತಾಕ್ಷಿ’, ‘ಜಲಗಾರ’ ಮೊದಲಾದ ನಾಟಕಗಳನ್ನು ಬರೆದಿದ್ದಾರೆ. ಜೊತೆಗೆ ‘ಕೊಳಲು’, ‘ಅಗ್ನಿಹಂಸ’, ‘ಅನಿಕೇತನ, ‘ಅನುತ್ತರಾ’, ‘ಇಕ್ಷುಗಂಗೋತ್ರಿ’ ಕಥನ ಕವನಗಳು, ‘ಕಲಾ ಸುಂದರಿ’, ‘ಕಿಂಕಿಣಿ’, ‘ಕೃತ್ತಿಕೆ’, ‘ಜೇನಾಗುವೆ’, ‘ನವಿಲು’, ‘ಪಕ್ಷಿಕಾಶಿ’, ‘ಚಿತ್ರಾಂಗದಾ’ ಮೊದಲಾದ ಕವನ ಸಂಕನಗಳು, ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಗಳನ್ನು ಇವರು ಬರೆದಿದ್ದಾರೆ. ‘ನೆನಪಿನ ದೋಣಿಯಲ್ಲಿ’ ಕುವೆಂಪುರವರ ಆತ್ಮ ಕಥೆ.

ಅನಿಕೇತನ ಪದ್ಯದ ಮೂಲಕ ವಿಶ್ವಮಾನವ ಸಂದೇಶವನ್ನು ಸಾರಿದ ಮಹಾಕವಿ ಕುವೆಂಪು, ಮನುಷ್ಯ ಜಾತಿ ತಾನೊಂದೆ ವಲಂ ಎಂಬ ಪಂಪನ ತಾತ್ವಿಕತೆಯನ್ನು ವಿಸ್ತರಿಸಿದರು. ‘‘ನಮಗೆ ಬೇಕಾಗಿರುವುದು ಆ ಮತ ಈ ಮತ ಅಲ್ಲ, ಮನುಜ ಮತ. ಆ ಪಥ ಈ ಪಥ ಅಲ್ಲ, ಸರ್ವರ ಸರ್ವಸ್ತರರ ಬದುಕು’’ ಎನ್ನುತ್ತಾರೆ ಕುವೆಂಪು.

ನಮ್ಮ ಹಳೆಯ ಶಾಸ್ತ್ರ ಪುರಾಣಗಳನ್ನು ಹೊಸ ಬೆಳಕಿನಲ್ಲಿಟ್ಟು ನೋಡಿ, ಅದರೊಳಗಿನ ಕಸ-ಕೊಳೆಗಳನ್ನು ತೆಗೆದೆಸೆದು ಅಲ್ಲಿ ಹೊಸ ದೃಷ್ಟಿಕೋನವನ್ನಿಟ್ಟು ಕಸಿ ಮಾಡಿದರು. ಜಾತಿ ವ್ಯವಸ್ಥೆ, ಅಸ್ಪಶ್ಯತೆ ಮತ್ತು ಮೌಢ್ಯಗಳಿಂದ ಮುಕ್ತವಾದ ಧರ್ಮ ಅವರ ಕನಸಾಗಿತ್ತು.

ಅವರ ಸಾಹಿತ್ಯ ಸೇವೆಗೆ ಪ್ರತಿಫಲವಾಗಿ 1956ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಅರಸಿ ಬಂದದ್ದಲ್ಲದೆ, ಧಾರವಾಡದಲ್ಲಿ ನಡೆದ 1957ನೇ ವರ್ಷದಲ್ಲಿ ನಡೆದ 39ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯೂ ಒಲಿಯಿತು. ಇವರ ‘ಶ್ರೀ ರಾಮಾಯಣ ದರ್ಶನಂ’ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿಕೊಟ್ಟಿತು. ಸಾಹಿತ್ಯದ ಮೂಲಕವೇ ನಾಡಿನ ಜನ ಮಾನಸವನ್ನು ಅವರಷ್ಟು ಬಲವಾಗಿ ಪ್ರಭಾವಿಸಿದ ಮತ್ತೊಬ್ಬ ಬರಹಗಾರ ಇಲ್ಲ. ಕುವೆಂಪುರವರಿಗೆ ಕುವೆಂಪು ಅವರೇ ಸಾಟಿ!

share
ಡಿ. ಸಿ. ರಾಮಚಂದ್ರ
ಡಿ. ಸಿ. ರಾಮಚಂದ್ರ
Next Story
X