Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯ ಮಿತ್ರಪಕ್ಷಕ್ಕೆ ಸೇರಲು ಐವರು...

ಬಿಜೆಪಿಯ ಮಿತ್ರಪಕ್ಷಕ್ಕೆ ಸೇರಲು ಐವರು ಕಾಂಗ್ರೆಸಿಗರು ಸೇರಿದಂತೆ ಎಂಟು ಶಾಸಕರ ರಾಜೀನಾಮೆ

ಮೇಘಾಲಯದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ29 Dec 2017 6:58 PM IST
share
ಬಿಜೆಪಿಯ ಮಿತ್ರಪಕ್ಷಕ್ಕೆ ಸೇರಲು ಐವರು ಕಾಂಗ್ರೆಸಿಗರು ಸೇರಿದಂತೆ ಎಂಟು ಶಾಸಕರ ರಾಜೀನಾಮೆ

ಶಿಲ್ಲಾಂಗ್,ಡಿ.29: ಬಿಜೆಪಿಯ ಮಿತ್ರಪಕ್ಷವಾಗಿರುವ ಎನ್‌ಪಿಪಿಗೆ ಸೇರ್ಪಡೆಗೊಳ್ಳಲು ಐವರು ಕಾಂಗ್ರೆಸಿಗರು ಸೇರಿದಂತೆ ಮೇಘಾಲಯದ ಎಂಟು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ನಡೆದಿರುವ ಈ ಬೆಳವಣಿಗೆ ರಾಜ್ಯದಲ್ಲಿಯ ಮುಕುಲ್ ಸಂಗ್ಮಾ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

60 ಸದಸ್ಯರ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ ಈಗ ಇನ್ನಷ್ಟು ಕುಸಿದು 24ಕ್ಕೆ ತಲುಪಿದೆ. ಕಳೆದ ತಿಂಗಳು ಕಾಂಗ್ರೆಸ್ ಶಾಸಕ ಪಿ.ಎನ್.ಸಿಯೆಮ್ ಅವರು ರಾಜೀನಾಮೆ ನಿಡಿದ್ದರು. ಆದರೆ ಸಂಗ್ಮಾ ಸರಕಾರವು ಪಕ್ಷೇತರರು ಮತ್ತು ಮಿತ್ರಪಕ್ಷಗಳ ಬೆಂಬಲ ಬೊಂದಿರುವದರಿಂದ ಅದಕ್ಕೆ ತಕ್ಷಣಕ್ಕೆ ಯಾವುದೇ ಬೆದರಿಕೆಯಿಲ್ಲ.

ಶುಕ್ರವಾರ ಸ್ಪೀಕರ್ ಅಬು ತಾಹಿರ್ ಮಂಡಲ್ ಅವರಿಗೆ ರಾಜೀನಾಮೆ ಸಲ್ಲಿಸಿರುವ ಶಾಸಕರಲ್ಲಿ ಯುಡಿಪಿಯ ಓರ್ವ ಮತ್ತು ಇಬ್ಬರು ಪಕ್ಷೇತರರು ಸೇರಿದ್ದಾರೆ. ಈ ಎಲ್ಲ ಎಂಟೂ ಶಾಸಕರು ಜ.4ರಂದು ಇಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಎನ್‌ಪಿಪಿಯನ್ನು ಸೇರಲಿದ್ದಾರೆ.

ಕೇಂದ್ರದಲ್ಲಿ ಎನ್‌ಡಿಎದ ಅಂಗಪಕ್ಷವಾಗಿರುವ ಎನ್‌ಪಿಪಿ ಮಣಿಪುರದಲ್ಲಿಯ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರಕಾರದ ಪಾಲುದಾರನಾಗಿದೆ. ಅದು ಬಿಜೆಪಿ ನೇತೃತ್ವದ ಈಶಾನ್ಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಇಡಿಎ)ದ ಭಾಗವೂ ಆಗಿದೆ.

ಮೇಘಾಲಯದಲ್ಲಿ ಬಿಜೆಪಿ ಮತ್ತು ಎನ್‌ಡಿಎ ಅಥವಾ ಇತರ ಯಾವುದೇ ಪ್ರಾದೇಶಿಕ ಪಕ್ಷ ಈವರೆಗೆ ಚುನಾವಣಾ ಪೂರ್ವ ಮೈತ್ರಿಯನ್ನು ಮಾಡಿಕೊಂಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X