Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯಮೆನ್‌ನಲ್ಲಿ ಕಾಲರಾ ಮಹಾಮಾರಿ:...

ಯಮೆನ್‌ನಲ್ಲಿ ಕಾಲರಾ ಮಹಾಮಾರಿ: ಲಸಿಕೆಗಾಗಿ ಪರದಾಡುತ್ತಿದೆ ಜಾಗತಿಕ ವೈದ್ಯವರ್ಗ

ವಾರ್ತಾಭಾರತಿವಾರ್ತಾಭಾರತಿ29 Dec 2017 9:56 PM IST
share
ಯಮೆನ್‌ನಲ್ಲಿ ಕಾಲರಾ ಮಹಾಮಾರಿ: ಲಸಿಕೆಗಾಗಿ ಪರದಾಡುತ್ತಿದೆ ಜಾಗತಿಕ ವೈದ್ಯವರ್ಗ

ಲಂಡನ್, ಡಿ.29: ಜಗತ್ತಿನ ಅತ್ಯಂತ ಕೆಟ್ಟ ಕಾಲರಾ ಸಾಂಕ್ರಮಿಕವು ಯಮೆನ್‌ನಲ್ಲಿ ದಾಖಲಾಗಿದ್ದು ಮುಂದಿನ ವರ್ಷ ಮಾರ್ಚ್‌ನಲ್ಲಿ ಈ ಮಾರಣಾಂತಿಕ ಕಾಯಿಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಯುದ್ಧಪೀಡಿತ ದೇಶದಲ್ಲಿ ಮಹಾಮಾರಿಯನ್ನು ತಡೆಯಲು ಲಸಿಕೆಯನ್ನು ತಯಾರಿಸುವ ಸವಾಲು ಜಾಗತಿಕ ಆರೋಗ್ಯರಕ್ಷಣಾ ತಜ್ಞರ ಮುಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಸದ್ಯ ಜಾಗತಿಕವಾಗಿ ಸುಮಾರು ಮೂರು ಮಿಲಿಯನ್ ಪ್ರಮಾಣದಷ್ಟು (ಡೋಸ್) ಕಾಲರಾದ ಮೌಖಿಕ ಲಸಿಕೆಯು ಲಭ್ಯವಿದೆ. ಮಳೆಗಾಲಕ್ಕೂ ಮುನ್ನ ಅವುಗಳನ್ನು ಹಡಗುಗಳ ಮೂಲಕ ಯಮೆನ್‌ಗೆ ಸಾಗಿಸಿ ರೋಗದ ವಿರುದ್ಧ ಪ್ರತಿರಕ್ಷಣೆ ಒದಗಿಸಲು ನೀಡಬಹುದು. ಈ ರೀತಿ ಮಳೆಗಾಲದಲ್ಲಿ ಶೌಚದ ಮೂಲಕ ಕಾಲರಾ ರೋಗವು ಹರಡುವುದನ್ನು ತಡೆಯಬಹುದು ಎಂದು ಸಂಸ್ಥೆ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಇಲ್ಲಿಯವರೆಗೆ ಒಂದು ಮಿಲಿಯನ್ ಈ ಜನರು ಮಾರಕ ರೋಗಕ್ಕೆ ತುತ್ತಾಗಿದ್ದಾರೆ.

ಯಮೆನ್‌ನಲ್ಲಿ ನರಳುತ್ತಿರುವ ಜನರಿಗೆ ಲಸಿಕೆಯನ್ನು ಪೂರೈಸುವ ಯೋಜನೆಯನ್ನು ಈ ವರ್ಷದ ಆರಂಭದಲ್ಲಿ ದೇಶದಲ್ಲಿ ಆಂತರಿಕ ಯುದ್ಧ ನಡೆಯುತ್ತಿದ್ದ ಕಾರಣ ಕೈಬಿಡಲಾಗಿತ್ತು. ಡಬ್ಲೂಎಚ್‌ಒ ಮತ್ತು ಯಮೆನ್ ಅಧಿಕಾರಿಗಳು ಸಾಗಾಟದ ಮತ್ತು ತಾಂತ್ರಿಕ ಸಮಸ್ಯೆಗಳಿರುವ ಕಾರಣ ಈ ಯೋಜನೆಯನ್ನು ಕೈಬಿಟ್ಟಿದ್ದರು.

ಯಮೆನ್‌ನಲ್ಲಿ ತಲೆಯೆತ್ತಿರುವ ಕಾಲರಾ ಜಗತ್ತಿನಲ್ಲಿ ದಾಖಲಾದ ಅತ್ಯಂತ ಕೆಟ್ಟ ಮಹಾಮಾರಿಗಳಲ್ಲಿ ಒಂದು ಎಂದು ಹೇಳಲಾಗಿದೆ. ಸಂಘರ್ಷ ಮತ್ತು ವಿನಾಶದ ಸಮಯದಲ್ಲಿ ತಲೆಯೆತ್ತುವ ಈ ಮಾರಣಾಂತಿಕ ಕಾಯಿಲೆಗೆ ಕಳೆದ ಎಪ್ರಿಲ್‌ನಿಂದ 2,200ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ.

ಇನ್ನು ಶಂಕಿತ ರೋಗಿಗಳ ಸಂಖ್ಯೆ ಒಂದು ಮಿಲಿಯನ್ ತಲುಪಿದ್ದು ದೇಶದಲ್ಲಿ ಏಳು ಮಿಲಿಯನ್ ಜನರು ಅನಾವೃಷ್ಟಿಯ ಹಿಡಿತಕ್ಕೆ ಸಿಲುಕುವ ಮತ್ತು ಡಿಫ್ತೀರಿಯಾ ಕಾಯಿಲೆಗೆ ತುತ್ತಾಗುವ ಸಾಧ್ಯತೆಯಿದೆ ಎಂದು ರೆಡ್ ಕ್ರಾಸ್‌ನ ಅಂತಾರಾಷ್ಟ್ರೀಯ ಸಮಿತಿ ಎಚ್ಚರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X